ಚಿತ್ರದುರ್ಗ | ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ಲೋಪ ಆರೋಪ; ಸಮರ್ಪಕ ಆಡಳಿತಕ್ಕೆ ರಾಜ್ಯ ರೈತ ಸಂಘ ಆಗ್ರಹ

Date:

ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ಲೋಪ ಉಂಟಾಗುತ್ತಿದೆ. ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯದೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೆ ಟಿ ತಿಪ್ಪೇಸ್ವಾಮಿ ಆರೋಪಿಸಿದರು.

ಹಿರಿಯೂರು ನಗರದ ತಾಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಮತ್ತು ರೈತರಿಗೆ ಸಮರ್ಪಕವಾಗಿ ಸರ್ಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದಿರುವುದು ಮತ್ತು ಹಲವು ಇಲಾಖೆಗಳಲ್ಲಿ ಲಂಚದ ಹಾವಳಿ ಹೆಚ್ಚಾಗಿರುವುದನ್ನು ಖಂಡಿಸಿ ತಹಶೀಲ್ದಾರ್ ರಾಜೇಶ್ ಕುಮಾರ್‌ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಸಬ್ ರಿಜಿಸ್ಟರ್ ಆಫೀಸ್‌ಗಳಲ್ಲಿ ಎರಡ್ಮೂರು ತಿಂಗಳಾದರೂ ನೋಂದಣಿ ಆಗುತಿಲ್ಲ. ಕಂದಾಯ ಇಲಾಖೆಯಲ್ಲಿ ತಿಂಗಳಾದರೂ ಮರಣ ಪತ್ರಗಳನ್ನು ನೀಡುತ್ತಿಲ್ಲ. ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದನ್ನು ನಿಯಂತ್ರಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಹಾರ ಇಲಾಖೆಯಿಂದ ವಿತರಿಸುತ್ತಿರುವ ರಾಗಿ ಸಂಪೂರ್ಣ ಕಳಪೆಯಾಗಿದ್ದು, ಗ್ರಾಹಕರಿಗೆ ಸಮರ್ಪಕವಾಗಿ ಅಕ್ಕಿ ವಿತರಿಸುತ್ತಿಲ್ಲ. ಕೃಷಿ ಇಲಾಖೆಯಿಂದ ಕಳಪೆ ಬಿತ್ತನೆ ಬೀಜ ವಿತರಿಸಲಾಗುತ್ತಿದೆ ಮತ್ತು ಬೆಳೆನಷ್ಟ ನೋಂದಣಿಯಾಗಿರುವ ರೈತರಿಗೆ ಈವರೆಗೂ ಪರಿಹಾರ ಕೊಟ್ಟಿಲ್ಲ. ಬೆಳೆವಿಮೆ ರೈತರ ಖಾತೆಗೆ ಜಮಾ ಆಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮೀಣ ಭಾಗದಲ್ಲಿ ಪ್ರತಿ ಹಳ್ಳಿಯಲ್ಲೂ ಮೂರ್ನಾಲ್ಕು ಕಡೆ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದೆ. ಇಲಾಖೆ ಅಧಿಕಾರಿಗಳು ಬಾ‌ರ್ ಅಂಗಡಿಗಳಲ್ಲಿ ತಿಂಗಳ ಮಾಮೂಲಿ ವಸೂಲಿ ಮಾಡುತ್ತಾ ಅಕ್ರಮ ಮದ್ಯ ಮಾರಾಟಕ್ಕೆ ಪ್ರೇರೇಪಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದರು.

“ಅರಣ್ಯ ಇಲಾಖೆಯಲ್ಲಿ ಸಸಿಗಳಿಗೆ ದುಬಾರಿ ಬೆಲೆ ನಿಗದಿ ಮಾಡಿರುವುದರಿಂದ ರೈತರು ಸಸಿಗಳನ್ನು ಕೊಂಡುಕೊಳ್ಳಲು ಆಗುತ್ತಿಲ್ಲ. ಬೆಸ್ಕಾಂ ಇಲಾಖೆಯಲ್ಲಿ ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರಿಗೆ ಮೂರು ವರ್ಗವಾದರೂ ಪರಿಕರಗಳನ್ನು ವಿತರಿಸುತ್ತಿಲ್ಲ. ಕೆಟ್ಟು ಹೋದ ಪರಿಕರಗಳಿಗೆ ಲಂಚ ಕೊಟ್ಟು ತೆಗೆದುಕೊಳ್ಳಬೇಕಾಗುತ್ತದೆ” ಎಂದರು.

“ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ನಗರದ ಮುಖ್ಯ ರಸ್ತೆ ಕಿರಿದಾಗಿದ್ದು, ಹಲವು ಬಾರಿ ಮನವಿ ಮಾಡಿದರೂ ರಸ್ತೆ ಅಗಲೀಕರಣ ಆಗುತ್ತಿಲ್ಲ. ರಸ್ತೆ ಗುಂಡಿಗಳನ್ನು ಮುಚ್ಚಿಲ್ಲ. ತಾಲೂಕು ಕಚೇರಿ ಮುಂಭಾಗದಲ್ಲಿ ರಸ್ತೆ ಉಬ್ಬುಗಳನ್ನು ಹಾಕಲು ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ದಲಿತರ ಅನುದಾನ ದುರ್ಬಳಕೆ; ಸರ್ಕಾರದ ನಡೆ ಖಂಡನೀಯ: ಸುರೇಶ ಚಲವಾದಿ

“ಎಲ್ಲ ಇಲಾಖೆಯ ಮುಖ್ಯಸ್ಥರನ್ನು ಪ್ರತಿಭಟನಾ ಸ್ಥಳಕ್ಕೆ ಕರೆಸಿ ಅವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯನಿರ್ವಹಿಸಬೇಕೆಂದು ತಾವುಗಳ ಆದೇಶಿಸಬೇಕು” ಎಂದು ತಹಶೀಲ್ದಾರರಿಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಂಚಪ್ಪ ನಾಯಕ, ರಾಜಪ್ಪ ನಾಗರಾಜು, ವಿರೂಪಾಕ್ಷಪ್ಪ ಗೋವಿಂದಪ್ಪ, ಶಿವಣ್ಣ, ಮಹಾಲಿಂಗಪ್ಪ, ಮಂಜುನಾಥ್, ರಂಗಮ್ಮ, ತಿಮ್ಮಕ್ಕ ಸೇರಿದಂತೆ ಬಹುತೇಕ ರೈತ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...