ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

Date:

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ ನೇತಾರ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಟಿ ವಿಜಯಕುಮಾರ್ ಹೇಳಿದರು.

ಹಲವು ದಲಿತ ಸಂಘಟನೆಗಳ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರೊ.ಬಿ ಕೃಷ್ಣಪ್ಪ ಅವರ 86ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಾಮಾಜಿಕ ರಕ್ಷಣೆಗಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಸ್ತ್ರವನ್ನು ಶೋಷಿತರ ಕೈಗೆ ನೀಡಿದ ಕೀರ್ತಿ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1970ರ ದಶಕದಲ್ಲಿನ ಮೌಢ್ಯಾಚರಣೆ ಹೆಸರಿನಲ್ಲಿ ಶೋಷಿತರ ಶೋಷಣೆ, ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ದಲಿತರ ಭೂ ಕಬಳಿಕೆ ಪ್ರಕರಣಗಳಿಗೆ ಹೋರಾಟದ ಶಕ್ತಿಯಾಗಿ ನಿಂತವರು ಕೃಷ್ಣಪ್ಪ. ಅಂಬೇಡ್ಕ‌ರ್ ಅವರ ವಿಚಾರಧಾರೆಯಿಂದ ಪ್ರೇರಿತರಾಗಿದ್ದ ಕೃಷ್ಣಪ್ಪ, ರಾಜ್ಯದಲ್ಲಿ ದಸಂಸ ಸಂಘಟನೆ ಕಟ್ಟುವ ಮೂಲಕ ದಲಿತ ಮತ್ತು ಶೋಷಿತ ಸಮುದಾಯಕ್ಕೆ ಸಾಮಾಜಿಕ ರಕ್ಷಣೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಶಿಕ್ಷಣ ನೀತಿ | ತಜ್ಞರ ಜತೆ ಸಮಾಲೋಚಿಸಿ ಗೊಂದಲವಿಲ್ಲದಂತೆ ಜಾರಿಮಾಡುತ್ತೇವೆ: ಸಚಿವ ಸುಧಾಕರ್‌

“ಕೃಷ್ಣಪ್ಪ ಅವರ ಆದರ್ಶ ಮತ್ತು ಹೋರಾಟದ ದೃಷ್ಟಿಕೋನವನ್ನು ಉಳಿಸಿಕೊಳ್ಳುವ ಜವಬ್ದಾರಿ ದಲಿತರ ಮೇಲಿದೆ. ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೌಲಭ್ಯ ಮತ್ತು ಒಡೆತನವನ್ನು ಧಕ್ಕಿಸಿಕೊಳ್ಳಲು ಹೋರಾಟವೇ ಪ್ರಮುಖ ಅಸ್ತ್ರ. ಹಾಗಾಗಿ ಹಲವು ಸಂಘಟನೆಗಳು ಒಗ್ಗೂಡಿ ಹೋರಾಟದ ಶಕ್ತಿಯನ್ನು ಗಟ್ಟಿಗೊಳಿಸಿಕೊಳ್ಳಬೇಕಾಗಿದೆ” ಎಂದರು.

ಕೆ ಬಿ ನಾಗರಾಜ್, ಅಂಜಿನಪ್ಪ, ಚನ್ನಿಗರಾಮಯ್ಯ, ಎನ್ ತಿಪ್ಪೇರುದ್ರಪ್ಪ, ಜಾಲಿ ಮಂಜು, ಎನ್ ಹೊನ್ನೂರಸ್ವಾಮಿ, ಡಿ.ಸೋಮಶೇಖರ್, ಹಳೇಟೌನ್ ಬದ್ರಿ, ಆರ್ ರುದ್ರಮುನಿ, ಜಗದೀಶ, ನಿಂಗರಾಜ್‌, ಡಿ ತಿಪ್ಪೇಸ್ವಾಮಿ, ಮಹಾಂತೇಶ್, ಎ ಮಾರುತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...