ಚಿತ್ರದುರ್ಗ | ತಾಳಿಕಟ್ಟುವ ವೇಳೆ ಮದುವೆ ನಿಲ್ಲಿಸಿದ ಮಧುಮಗಳು

Date:

ತಾಳಿಕಟ್ಟುತ್ತಿದ್ದ ವೇಳೆ ಮಧುಮಗಳು ಮಂಗಳ ಸೂತ್ರಕ್ಕೆ ಕೈ ಅಡ್ಡ ಹಿಡಿದು, ನನಗೆ ಈ ಮಧುಮಗ ಇಷ್ಟ ಇಲ್ಲ ಎಂದು ಮದುವೆ ನಿಲ್ಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.

ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್, ಚಳ್ಳಕೆರೆ ತಾಲ್ಲೂಕಿನ ತಿಪ್ಪರೆಡ್ಡಿಹಳ್ಳಿ ಐಶ್ವರ್ಯ ಮದುವೆ ಡಿ.07ರಂದು ನಡೆಯಬೇಕಿತ್ತು. ಬುಧವಾರ ಸಂಜೆ ತಿಪ್ಪರೆಡ್ಡಿಹಳ್ಳಿ ಗ್ರಾಮದಿಂದ ಮಧುಮಗಳು ಐಶ್ವರ್ಯ ಹಾಗೂ ಸಂಬಂಧಿಕರು ಚಿಕ್ಕಬ್ಯಾಲದ ಕೆರೆ ಮಧುಮಗನ ಗ್ರಾಮಕ್ಕೆ ಬಂದಿದ್ದಾರೆ. ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಸಂಜೆ ಆರತಕ್ಷತೆ ನಡೆದಿತ್ತು.

ಗುರುವಾರ ಬೆಳಗ್ಗೆ ನಿಗದಿಯಾಗಿದ್ದ ಮೂಹೂರ್ತದಲ್ಲಿ ತಾಳಿ ಕಟ್ಟಲು ಮುಂದಾಗಿದ್ದ ವರನಿಗೆ ಕೈ ಅಡ್ಡ ಹಿಡಿದ ಮಧುಮಗಳು ಐಶ್ವರ್ಯ ನನಗೆ ಈ ಹುಡುಗ ಇಷ್ಟ ಇಲ್ಲ, ಹಾಗಾಗಿ ನಾನು ತಾಳಿ ಕಟ್ಟಿಸಿಕೊಳ್ಳುವುದಿಲ್ಲ ಎಂದು ಹಠ ಹಿಡಿದ್ದಾಳೆ. ಈ ವೇಳೆ ಪೋಷಕರು ಹಾಗೂ ಸಂಬಂಧಿಕರು ಯುವತಿ ಐಶ್ವರ್ಯಳನ್ನು ಎಷ್ಟೇ ಮನ ಒಲಿಸಲು ಮುಂದಾದರೂ ಕೂಡ ಒಪ್ಪದ ಐಶ್ವರ್ಯ, ಮದುವೆಯನ್ನು ನಿಲ್ಲಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿ ನಡೆಗೆ ಯುವಕನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...