ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

Date:

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು ಪತ್ರವನ್ನು ಇ-ಸ್ವತ್ತು ಎಂಬ ದಾಖಲೆಗೆ ಬದಲಾಯಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪಂಚಾಯತ್‌ ಸಿಇಒ ದಿವಾಕರ್‌ ʼಮನೆ ಬಾಗಿಲಿಗೆ ಇ-ಸ್ವತ್ತುʼ ಎಂಬ ಜನಸ್ನೇಹಿ ಕಾರ್ಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಮನೆಯನ್ನು ಹಳೆಯ ದಾಖಲೆಗಳಿಂದ ಇ-ಸ್ವತ್ತಿಗೆ ಎಲ್ಲ ಮನೆ ಮಾಲೀಕರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಬದಲಾಯಿಸಿಕೊಳ್ಳಬೇಕಾಗಿತ್ತು. ಹಾಗಾಗಿ ಇ-ಸ್ವತ್ತುಗಳನ್ನು ಪಡೆಯಲು ಗ್ರಾಮಸ್ಥರು ಪಂಚಾಯಿತಿಗೆ ಅಲೆಯಬೇಕಿತ್ತು. ಅಲ್ಲದೆ, ಗ್ರಾಮ ಪಂಚಾಯಿತಿಗಳಲ್ಲಿ ಕೆಲವೊಮ್ಮೆ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆಯೂ ಕೇಳಿ ಬರುತ್ತಿತ್ತು. ಇಂತಹ ಭ್ರಷ್ಟಾಚಾರ ಮತ್ತು ಗ್ರಾಮಸ್ಥರ ಅಲೆದಾಟವನ್ನು ತಪ್ಪಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಒ ದಿವಾಕರ್ ಮನೆ ಮನೆಗೆ ಇ-ಸ್ವತ್ತು ಕಾರ್ಯಕ್ರಮವನ್ನು ಆರಂಭಿಸಿದ್ದರು.

ಮನೆಯ ಬಾಗಿಲಿಗೆ ಹೋಗಿ ಇ-ಸ್ವತ್ತು ನೀಡಿದ್ದರು. ಇಂತಹ ಒಂದು ನೂತನ ಕಾರ್ಯಕ್ರಮ ಬಹಳಷ್ಟು ಪ್ರಶಂಸೆಗೆ ಒಳಗಾಗಿತ್ತು. ವಿಧಾನ ಸಭೆ ಚುನಾವಣೆ ಬಂದಿದ್ದರಿಂದ ಇ-ಸ್ವತ್ತು ಅಭಿಯಾನ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಆರಂಭಗೊಂಡಿದ್ದು, ಶುಕ್ರವಾರ ಸಿಇಒ ದಿವಾಕರ್ ಅವರು ಹೊಸದುರ್ಗದ ಸಾಣೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಇ-ಸ್ವತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮನೆ ಬಾಗಿಲಿಗೆ ಹೋಗಿ ಇ-ಸ್ವತ್ತು ಪ್ರಮಾಣ ಪತ್ರ ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಈ ಸಂದರ್ಭದಲ್ಲಿ ಹೊಸದುರ್ಗ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿಶ್ವನಾಥ್, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು, ಪಿಡಿಒ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...