ಚಿತ್ರದುರ್ಗ | ಅರೆಬರೆ ಕಾಮಗಾರಿ ಮಧ್ಯೆಯೇ ಹೆದ್ದಾರಿ ಟೋಲ್ ಸಂಗ್ರಹ; ರಾಜ್ಯ ರೈತ ಸಂಘ ಪ್ರತಿಭಟನೆ

Date:

ಸರಿಯಾಗಿ ರಸ್ತೆ ನಿರ್ಮಾಣ ಮಾಡದೆ ಅರೆಬರೆ ಕಾಮಗಾರಿ ಹಂತದಲ್ಲೇ ರಾಷ್ಟ್ರೀಯ ಹೆದ್ದಾರಿ 153ಎ ರಲ್ಲಿ ಟೋಲ್‌ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಟೋಲ್ ಬಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ, ಚಳ್ಳಕೆರೆ ಬಳಿ ಟೋಲ್ ಪ್ಲಾಜಾ ನಿರ್ಮಾಣ ಮಾಡಿ ಸಾರ್ವಜನಿಕ ವಾಹನಗಳಿಂದ ಕೂಡಲೇ ಹಣ ವಸೂಲು ಮಾಡುವುದನ್ನು ನಿಲ್ಲಿಸಿ, ರಸ್ತೆ ನಿರ್ಮಾಣ ಸಂಪೂರ್ಣಗೊಳಿಸಿ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಂತೆ ರೈತ ಸಂಘ ಒತ್ತಾಯಿಸಿತು.

ರೈತ ಸಂಘದ ಮುಖಂಡ ಬಸವ ರೆಡ್ಡಿ ಮಾತನಾಡಿ, “ರಸ್ತೆ ನಿರ್ಮಾಣ ಮಾಡುವಾಗ ಮೂಲ ಸೌಕರ್ಯ ಕಲ್ಪಿಸಿ ಉತ್ತಮ ರಸ್ತೆ ನಿರ್ಮಾಣ ಮಾಡಿ, ವಾಹನಗಳಿಂದ ಟೋಲ್ ಸಂಗ್ರಹ ಮಾಡಬೇಕು.‌ ಆದರೆ ಪ್ರಾಧಿಕಾರವು ಸರಿಯಾಗಿ ರಸ್ತೆ ನಿರ್ಮಿಸದೆ, ಕಾಮಗಾರಿ ಅರ್ಧದಲ್ಲಿರುವಾಗಲೇ ಟೋಲ್‌ ಹೆಸರಿನಲ್ಲಿ ಹಣ ವಸೂಲಿ ಮಾಡಿ ದೌರ್ಜನ್ಯ ಎಸಗುತ್ತಿದೆ. ಹರ್ತಿಕೋಟೆ ಯರಬಳ್ಳಿ ಬಳಿ ಬೈಪಾಸ್ ನಿರ್ಮಾಣವಾಗಿಲ್ಲ.‌ ಅಲ್ಲಲ್ಲಿ ತಗ್ಗು ಗುಂಡಿಗಳಿವೆ.‌ ನಿರ್ಮಾಣ ಮಾಡಿರುವ ಕಡೆಗಳಲ್ಲಿ ಕೆಲವೇ ದಿನಗಳಲ್ಲಿ ರಸ್ತೆ ಹಾಳಾಗಿ ಹೋಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 28 at 2.23.58 PM

ರೈತ ಸಂಘದ ಮುಖಂಡ ಮೊಳಕಾಲ್ಮೂರು ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, “ರಸ್ತೆ ಅಕ್ಕ ಪಕ್ಕ ಮತ್ತು ಅಂಡರ್ ಪಾಸ್‌ಗಳಿಂದ ಹಳ್ಳಿಗಳಿಗೆ ತೆರಳಲು ಸಮರ್ಪಕ ಸಂಪರ್ಕ ಕಲ್ಪಿಸಲಾಗಿಲ್ಲ. ಟೋಲ್‌ಗಳಲ್ಲಿ ಏಳು ಗೇಟ್‌ಗಳಿದ್ದರೂ ಕೇವಲ ಎರಡನ್ನು ತೆರೆದಿಟ್ಟು ವಾಹನಗಳು ಸಾಲುಗಟ್ಟಿ ನಿಂತು ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡಲಾಗುತ್ತಿದೆ.‌ ರಸ್ತೆ ನಿರ್ಮಾಣದಲ್ಲಿ ಲೋಪಗಳಿದ್ದರೂ ಅಕ್ಕಪಕ್ಕದ ಹಳ್ಳಿಗಳಿಗೆ ಕಾನೂನಿನ ಅನ್ವಯ ಸೌಲಭ್ಯ ಕಲ್ಪಿಸದೆ ಟೋಲ್ ಸಂಗ್ರಹಿಸುತ್ತಿರುವುದು ಅವೈಜ್ಞಾನಿಕ ಮತ್ತು ಕಾನೂನು ಉಲ್ಲಂಘನೆಯಾಗಿದೆ. ಈ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕರು ಮತ್ತು ಮುಖ್ಯ ಅಭಿಯಂತರರು ಟೋಲ್ ಸಂಗ್ರಹ ನಿಲ್ಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಜ.29ರಿಂದ ಅಟಲ್ ಭೂಜಲ ಯೋಜನೆಯಡಿ ರೈತರಿಗೆ ತರಬೇತಿ ಕಾರ್ಯಕ್ರಮ

ಪ್ರತಿಭಟನೆ ವೇಳೆ ರೈತ ಮುಖಂಡ ಡಿಎಸ್ ಹಳ್ಳಿ ಮಲ್ಲಿಕಾರ್ಜುನ್, ಚಿಕ್ಕಬ್ಬಿಗೆರೆ ನಾಗರಾಜ್, ನಿಜಲಿಂಗಪ್ಪ ಆರ್ ಬಿ, ಹೊನ್ನು ಶ್ರೀನಿವಾಸ್, ಮಲ್ಲಸಮುದ್ರ ಗಂಗಾಧರ್, ಪ್ರಶಾಂತ್ ರೆಡ್ಡಿ, ಚಂದ್ರಶೇಖರ ನಾಯಕ, ಹಿರೇಹಳ್ಳಿ ಮಂಜಣ್ಣ, ತಿಪ್ಪೇಸ್ವಾಮಿ, ಸೂರಮನಹಳ್ಳಿ ರಾಜಣ್ಣ, ಮುದ್ದಾಪುರ ನಾಗಣ್ಣ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...