ಚಿತ್ರದುರ್ಗ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎದುರೇ ಕಿತ್ತಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Date:

ಕಾರ್ಯಕರ್ತರ ಅಳಲು ಸಮಸ್ಯೆಗಳನ್ನು ಹೇಳಲು ಬಿಡದೆ ನಾಯಕರು ತಡೆದಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎದುರೇ ಕೈ ಕಾರ್ಯಕರ್ತರು ತಳ್ಳಾಟ ವಾಗ್ಯುದ್ಧ ಚಿತ್ರದುರ್ಗದಲ್ಲಿ ನೆಡೆದಿದೆ.

ವಿವಿಧ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡು ಸಭೆಯನ್ನು ಏರ್ಪಡಿಸಿದ್ದರು. ಸಭೆಯಲ್ಲಿ ಕಾರ್ಯಕರ್ತರ ಅಹವಾಲು ಸಚಿವರ ಮುಂದೆ ಹೇಳಲು ಬಿಡದ ಕಾರಣ ನೂಕಾಟ ವಾಗ್ವಾದ ನಡೆದಿದೆ.

ಸಚಿವೆ ಇದ್ದ ವೇದಿಕೆಯಲ್ಲಿ ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀಕಾಂತ್ ಮಾತನಾಡುತ್ತಾ, ರಾಜ್ಯದಲ್ಲಿ ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಾರ್ಯಕರ್ತರದು ನಾಯಿ ಪಾಡಾಗಿದೆ. ನಮ್ಮ ಸಮಸ್ಯೆಗಳನ್ನು ಕೇಳುವವರು ಯಾರು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ, ವೇದಿಕೆ ಮೇಲಿದ್ದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ, ಮಾತನಾಡಲು ಬಿಡದೆ ಮೈಕ್ ಕಿತ್ತುಕೊಳ್ಳಲು ಪ್ರಯತ್ನಿಸಿದರು. ಈ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 02 at 4.36.10 PM

ಈ ವೇಳೆ ಕಾರ್ಯಕರ್ತರ ಬೆಂಬಲಿಗರ ಮಧ್ಯೆ ನೂಕಾಟ ವಾಗ್ವಾದ ನಡೆದು ಮಧ್ಯೆ ಪ್ರವೇಶಿಸಿದ ಇತರ ಮುಖಂಡರು ಸಚಿವರು ವಾತಾವರಣ ತಿಳಿಗೊಳಿಸಿದರು.

ನಂತರ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಜಿಲ್ಲೆಗೆ ಆಗಮಿಸಿದಾಗ ನೀವು ನನಗೆ ನೀಡಿದ ಅದ್ದೂರಿಯ ಸ್ವಾಗತವನ್ನು ನೋಡಿ ನಾನು ಮೂಕವಿಸ್ಮಿತಳಾಗಿದ್ದೇನೆ. ಆದರೆ ಸಭೆಯಲ್ಲಿ ನಡೆದ ಈ ಒಂದು ಸಣ್ಣ ಘಟನೆ ಹೊರಗೆ ತಪ್ಪು ಸಂದೇಶ ನೀಡಲಿದೆ. ಬೇರೆ ಎಲ್ಲವೂ ಮರೆತು ಹೋಗಿ ಇದೊಂದು ಸಣ್ಣ ಗಲಾಟೆಯ ಘಟನೆಯೇ ಮಾಧ್ಯಮಗಳಲ್ಲಿ ರಾರಾಜಿಸುತ್ತದೆ. ನಿಮ್ಮ ಅಹವಾಲುಗಳು ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳೋಣ. ನಿಮ್ಮ ಸಮಸ್ಯೆಗಳನ್ನು ಪಕ್ಷದ ಅಧ್ಯಕ್ಷರ ಗಮನಕ್ಕೆ ತರುತ್ತೇನೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಧಾರವಾಡ-ಹುಬ್ಬಳ್ಳಿ | ಚೌತಿ, ಮೀಲಾದುನ್ನಬಿ: ರೌಡಿಶೀಟರ್‌ಗಳ ಪರೇಡ್ ನಡೆಸಿದ ಕಮಿಷನರ್ ಶಶಿಕುಮಾರ್

ಸಭೆಯಲ್ಲಿ ಜಿಲ್ಲಾಧ್ಯಕ್ಷ ತಾಜ್ ಪೀರ್, ಕಾರ್ಯಧ್ಯಕ್ಷ ಹಾಲಸ್ವಾಮಿ, ಮುರಳಿಧರ್ ಹಾಲಪ್ಪ, ಟಿ ರಘು, ಮೋಕ್ಷ ರಾಣಿ, ಮೆಹಬೂಬ್ ಖಾನ್ ಇತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...