ಚಿತ್ರದುರ್ಗ | ನನೆಗುದಿಗೆ ಬಿದ್ದಿರುವ ಪ್ರಾಥಮಿಕ ಶಾಲಾ ಕಟ್ಟಡ; ಕಾಮಗಾರಿ ಪೂರ್ಣಕ್ಕೆ ಗ್ರಾಮಸ್ಥರ ಆಗ್ರಹ

Date:

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಬೆಳಗೆರೆ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಪ್ರಾಥಮಿಕ ಶಾಲಾ ಕೊಠಡಿಯ ಕಟ್ಟಡದ ಕಾಮಗಾರಿ ಪ್ರಾರಂಭಗೊಂಡು ವರ್ಷವಾಗುತ್ತಾ ಬಂದರೂ ಕಾಮಗಾರಿಗೆ ಚಾಲನೆ ನೀಡದೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಳೆಯ ಅಸ್ತವ್ಯಸ್ತಗೊಂಡ ಶಾಲಾ ಕೊಠಡಿಗಳಲ್ಲಿ ಪಾಠ ಪ್ರವಚನ ನಡೆಸುವಂತ ಅನಿವಾರ್ಯತೆ ಉಂಟಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

“ಉಳಿದ ಕೊಠಡಿಗಳಲ್ಲಿ ಛಾವಣಿ ಸೀಟುಗಳು ಹಲವು ಕಡೆ ಒಡೆದು ಮಳೆಗೆ ಸೋರುತ್ತಿದ್ದು, ನೆಲಕ್ಕೆ ಹಾಸಿದ ಕಡಪ ಕಲ್ಲುಗಳು ಒಡೆದು ಗುಂಡಿ ಬಿದ್ದಿವೆ. ಶಾಲೆ ತಗ್ಗು ಪ್ರದೇಶದಲ್ಲಿ ಇರುವುದರಿಂದ ಶಾಲೆ ಎದುರಿಗೆ ಎತ್ತರದ ರಸ್ತೆ ಇರುವ ಕಾರಣ ಮಳೆಯ ನೀರು ಹಾಗೂ ಮಲಿನಗೊಂಡ ನೀರು ಶಾಲೆಯ ಆವರಣದೊಳಕ್ಕೆ ನುಗ್ಗುತ್ತಿದೆ. 1ನೇ ತರಗತಿಯಿಂದ 7ನೇ ತರಗತಿವರೆಗೂ 45 ರಿಂದ 55ಕಿಂತ ಹೆಚ್ಚು ಮಕ್ಕಳು ಸ್ಥಳೀಯ ವಿದ್ಯಾ ಸಂಸ್ಥೆಗಳಿಗೆ ವಿದ್ಯಾಭ್ಯಾಸಕ್ಕೆ ಹೋಗದೆ ಪೋಷಕರು ಮತ್ತು ಗ್ರಾಮದ ಮುಖ್ಯಸ್ಥರ ಆಕಾಂಕ್ಷೆಯ ಮೇರೆಗೆ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದಾರೆ” ಎಂದು ಹೇಳಿದರು.

“ಪ್ರಾಥಮಿಕ ಶಾಲೆ ಮಕ್ಕಳ ವಿದ್ಯಾಭ್ಯಾಸ ಮತ್ತು ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ಪ್ರಚಾರದಲ್ಲಿ ಸರ್ಕಾರ ಉತ್ತೇಜನ ನೀಡುವ ಬದಲು ಪ್ರಾಥಮಿಕವಾಗಿ ಇಲ್ಲಿನ ಮೂಲಸೌಕರ್ಯಗಳ ಕೊರತೆಯ ನಿವಾರಣೆಗೆ ಗಮನ ಹರಿಸಬೇಕಾಗಿದೆ. ಈ ಶಾಲಾ ಆವರಣದ ಪ್ರಾಥಮಿಕ ಶಾಲಾ ಆವರಣದ ಪರಿಸ್ಥಿತಿ ಗಮನಿಸಿದಂತೆ ಶೌಚಾಲಯದ ಕೊರತೆ, ಮಳೆ ಬಂದರೆ ಸೋರಿ ಒದ್ದೆಯಾಗುವ ಹಳೆಯ ಶಾಲಾ-ಕೊಠಡಿಗಳನ್ನೂ ಗಮನಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಬ್ಬರು ಮುಖ್ಯ ಶಿಕ್ಷಕರು, ಇಬ್ಬರು ಸಹ ಶಿಕ್ಷಕರು ಹಾಗೂ ಒಬ್ಬರು ಅತಿಥಿ ಶಿಕ್ಷಕರನ್ನು ಹೊರತುಪಡಿಸಿ ಶಿಕ್ಷಕರ ಕೊರತೆ ಇರುವುದರಿಂದ ಗ್ರಾಮದ ಮುಖ್ಯಸ್ಥರು ಮತ್ತು ಪಂಚಾಯಿತಿ ಸದಸ್ಯರ ನೆರವಿನೊಂದಿಗೆ ಮತ್ತೊಬ್ಬ ಅರೆಕಾಲಿಕ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರಾಥಮಿಕ ಶಾಲೆಯ ಕೊಠಡಿಗಳ ಕೊರತೆಯಿಂದ ಸಮಸ್ಯೆ ಹೆಚ್ಚಾಗಿದೆ” ಎಂದರು.

“ಕೊಠಡಿಗಳ ಸಮಸ್ಯೆ ಇರುವುದರಿಂದ ಗ್ರಾಮದ ನೆರವಿಗೆ ಸರ್ಕಾರದ ವಿವೇಕ ಯೋಜನೆಯಡಿ ಚಳ್ಳಕೆರೆಯ ಗುತ್ತಿಗೆದಾರ ಮುಜುಬುರ್ ರೆಹಮಾನ್ ಅವರಿಗೆ ಪಂಚಾಯಿತಿ ಮಟ್ಟದಲ್ಲಿ ಕಟ್ಟಡ ಕಾಮಗಾರಿಯನ್ನು ವಹಿಸಲಾಗಿತ್ತು. ಕಾಮಗಾರಿಯನ್ನು ವಹಿಸಿಕೊಂಡು ವರ್ಷವಾಗುತ್ತಾ ಬಂದರೂ ಪೂರ್ಣವಾಗದೆ ನೆನೆಗುದಿಗೆ ಬಿದ್ದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

“ಗ್ರಾಮಸ್ಥರು, ರೈತ ಸಂಘದ ಮುಖಂಡರು, ಊರಿನ ಮುಖ್ಯಸ್ಥರು ಕಟ್ಟಡ ಕಾಮಗಾರಿ ಬಗ್ಗೆ ವಿಚಾರಿಸುತ್ತಿದ್ದರೂ ನಾಳೆ, ಮುಂದಿನ ವಾರ ಮುಂದಿನ ತಿಂಗಳು ಕಾಮಗಾರಿ ಮಾಡುತ್ತೇವೆಂದು ಗುತ್ತಿಗೆದಾರರು ಸಬೂಬು ಹೇಳುತ್ತಿದ್ದಾರೆ” ಎಂದು ಆರೋಪಿಸಿದರು.

“ಗುತ್ತಿಗೆದಾರರೊಂದಿಗೆ ನೇರವಾಗಿ ದೂರವಾಣಿಯಲ್ಲಿ ಸಮಸ್ಯೆಯ ಕುರಿತು ಮಾತನಾಡಿದಾಗ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ವಿಶ್ರಾಂತಿಯಲ್ಲಿದ್ದೇನೆ. ಮುಂದಿನ ವಾರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆಂದು ತಿಳಿಸಿದ್ದಾರೆ. ಇದೇ ರೀತಿ ಹಲವು ಆಶ್ವಾಸನೆಗಳನ್ನು ನೀಡಿದ್ದು, ಈವರೆಗೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಊರಿನ ಹಲವು ಮುಖಂಡರೂ ಸೇರಿ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...