ದಾವಣಗೆರೆ | 12 ವರ್ಷಗಳೇ ಕಳೆದರೂ ಬಳಕೆಗೆ ಸಿಗದ ಸಾಂಸ್ಕೃತಿಕ ಭವನ

Date:

ಕನ್ನಡದ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿ ಎಂಬ ಉದ್ದೇಶದಿಂದ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎನ್‌ಜಿಓ ಬಡಾವಣೆಯಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿ 12 ವರ್ಷಗಳೇ ಆಗಿವೆ. ಆದರೆ, ಭವನ ಇನ್ನೂ ಸಾರ್ವಜನಿಕರ ಬಳಕೆಗೆ ಹಸ್ತಾಂತರ ಗೊಳ್ಳದೆ ಉಳಿದಿದ್ದು, ಖಾಸಗಿಯವರ, ಗುತ್ತಿಗೆದಾರರ ಸಿಮೆಂಟ್ ಗೋದಾಮಾಗಿ ಪರಿವರ್ತನೆಯಾಗಿದೆ.

ಸಾಂಸ್ಕೃತಿಕ ಭವನವನ್ನು 2008ರಲ್ಲಿ ಭೂಮಿಪೂಜೆ ನೆರವೇರಿಸಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. 2011ರಲ್ಲಿ ಶಾಸಕರಾಗಿದ್ದ ಎಸ್.ವಿ.ರಾಮಚಂದ್ರ ಅವರು ಉದ್ಘಾಟನೆ ಮಾಡಿದ್ದರು. ಆದರೆ ಅಲ್ಲಿಂದ ಇಲ್ಲಿಯವರೆಗೂ ಅಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿಲ್ಲ. ಭವನವನ್ನು ಗುತ್ತಿಗೆದಾರೊಬ್ಬರು ತಮ್ಮ ಸೀಮೆಂಟ್ ಚೀಲ, ಪೈಪ್, ಕಬ್ಬಿಣ ಸೇರಿದಂತೆ ಕಟ್ಟಡಗಳಿಗೆ ಬೇಕಾದ ಸಾಮಾಗ್ರಿಗಳನ್ನು ದಾಸ್ತಾನು ಮಾಡಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

“ಸರ್ಕಾರದ ಆದೇಶದಲ್ಲಿ ಸರ್ಕಾರಿ ಸ್ವತ್ತನ್ನು ಸ್ವಂತಕ್ಕೆ ಬಳಸುವಂತಿಲ್ಲ. ಆದರೂ, ಗುತ್ತಿಗೆದಾರರಿಗೆ ಭವನದ ಬೀಗದ ಕೀ ಕೊಟ್ಟಿದ್ದು ಯಾರು? ಸಿಮೆಂಟ್ ದಾಸ್ತಾನು ಮಾಡಲು ಪರ್ಮಿಶನ್ ಕೊಟ್ಟಿದ್ದು ಯಾರು? ಅಧಿಕಾರಿಗಳು ತಕ್ಷಣವೇ ಭವನದಲ್ಲಿರುವ ಸಿಮೆಂಟ್ ಮತ್ತು ಇತರ ಸಾಮಗ್ರಿಗಳನ್ನು ಜಪ್ತಿಮಾಡಬೇಕು” ಎಂದು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 08 22 at 11.17.19 AM

“ಭವನದ ಸಮೀಪವೇ ಶಾಲೆಯೂ ಇದ್ದು, ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ಇದೇ ದಾರಿಯಲ್ಲಿ ಸಾಗುತ್ತಾರೆ. ಈ ದಾರಿಯಲ್ಲಿ ಸಿಮೆಂಟನ್ನು ಹೊತ್ತು ಬರುವ ಸಿಮೆಂಟ್ ಲಾರಿಗಳ ಓಡಾಟದಿಂದಾಗಿ ಮಕ್ಕಳು ಧೂಳು ಕುಡಿಯುವಂತಾಗಿದೆ. ಅಲ್ಲದೆ, ಭಾರದ ಲಾರಿಗಳ ಓಡಾಟದಿಂದ ರಸ್ತೆಯೂ ಹಾಳಾಗಿದೆ. ಆದ್ದರಿಂದ, ಸಾಂಸ್ಕೃತಿಕ ಭವನದಲ್ಲಿರುವ ಸಿಮೆಂಟ್ ಚೀಲಗಳನ್ನು ಜಪ್ತಿ ಮಾಡಬೇಕು. ರಸ್ತೆಯನ್ನು ಗುತ್ತಿಗೆದಾರರ ಹಣದಿಂದಲೇ ದುರಸ್ತಿ ಮಾಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ‘ದೇವ್ರು ಕೊಟ್ರು ಪೂಜಾರಿ ಕೊಡ್ತಿಲ್ಲ’ ಎಂಬಂತೆ ನಿಂತಿದೆ ಹೊಸ ಸಂಚಾರಿ ಚಿಕಿತ್ಸಾ ವಾಹನ

ಸಾರ್ವಜನಿಕರ ಬಳಕೆಗೆ ದೊರೆಯದ ಭವನದ ಬಗ್ಗೆ ಕಸಾಪ ತಾಲೂಕು ಪದಾಧಿಕಾರಿಗಳು ಒಬ್ಬರನ್ನು ಈದಿನ.ಕಾಮ್ ಮಾಡಿತಾನಾಡಿಸಿದ್ದು, “ಸಾಂಸ್ಕೃತಿಕ ಭವನ ನಿರ್ಮಾಣವಾಗಿ ಅನೇಕ ವರ್ಷಗಳಾದರೂ ನಮ್ಮ ಸುಪರ್ಧಿಗೆ ಹಸ್ತಾಂತರಿಸಿಲ್ಲ. ಪಟ್ಟಣ ಪಂಚಾಯತಿ ಆಡಳಿತಕ್ಕೆ ಪತ್ರಬರೆದು ಗಮನಕ್ಕೆ ತರಲಾಗಿದೆ. ಅಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ದೂರವಾಗುತ್ತದೆ ಎನ್ನುವ ಕಾರಣಕ್ಕೆ ನಾವು ಆ ಭವನದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಮಾಡಿಲ್ಲ” ಎಂದರು.

“ಈಗಲಾದರೂ ಸಂಬಂಧಪಟ್ಟ ಇಲಾಖೆ, ಪಟ್ಟಣ ಪಂಚಾಯತ್ ಆಡಳಿತ ವರ್ಗ ಅಥವಾ ಅಧಿಕಾರಿಗಳು ಎಚ್ಚೆತ್ತುಕೊಂಡು ಗುತ್ತಿಗೆದಾರರಿಂದ ಸಾಂಸ್ಕೃತಿಕ ಭವನವನ್ನು ತೆರವುಗೊಳಿಸಿ ಸಾಹಿತ್ಯ ಪರಿಷತ್‌ ಅಥವಾ ಸಾರ್ವಜನಿಕರ ಅನುಕೂಲಕ್ಕೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗಲು ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...