ಚಿತ್ರದುರ್ಗ | ಸ್ಮಶಾನ ಭೂಮಿ ಒತ್ತುವರಿ ತೆರವಿಗೆ ದಸಂಸ ಆಗ್ರಹ

Date:

ಕೊಂಡಾಪುರ ಗ್ರಾಮದ ಸರ್ವೆ ನಂಬರ್ 22ರಲ್ಲಿ 2.34 ಎಕರೆ ಸರ್ಕಾರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿರಿಸಲಾಗಿದೆ. ಆ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದ್ದು, ಹೊಳಲ್ಕೆರೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, “ಸುಮಾರು ಎರಡ್ಮೂರು ತಲೆಮಾರುಗಳಿಂದ ಈ ಜಾಗದಲ್ಲಿ ಎಸ್‌ಸಿ ಜನಾಂಗದವರು ಸ್ಮಶಾನವನ್ನು ಮಾಡಿಕೊಂಡು ತಮ್ಮ ಹಿರಿಯರನ್ನು ಅಲ್ಲಿಯೇ ಶವ ಸಂಸ್ಕಾರ ಮಾಡುತ್ತಾ ಬಂದಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕೊಂಡಾಪುರ ಗ್ರಾಮದ ಕೆಲ ರೈತರುಗಳು ಈ ಜಾಗವನ್ನು ಒತ್ತುವರಿ ಮಾಡಿದ್ದಾರೆ” ಎಂದು ಆರೋಪಿಸಿದರು.

“ಈ ವಿಷಯ ಸಂಬಂಧ ತಹಶೀಲ್ದಾರ್ ಮತ್ತು ಪೊಲೀಸ್ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಈಗ ಶವಸಂಸ್ಕಾರ ಮಾಡಲು ಒಂದು ಗೆರೆ ಕೂಡ ಜಾಗ ಇಲ್ಲದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಮಾಪನ ಇಲಾಖೆಯ ಸರ್ವೇಯರ್ ಕಳುಹಿಸಿ ಸ್ಥಳ ಪರಿಶೀಲಿಸಿ ಸರ್ವೆ ನಂಬರ್ 22ರ ಸರ್ಕಾರಿ ಜಾಗವನ್ನು ಬಿಡಿಸಿಕೊಟ್ಟು, ಈ ಜಾಗವನ್ನು ಎಸ್‌ಸಿ ರುದ್ರ ಭೂಮಿಯಾಗಿ ಮೀಸಲಿಟ್ಟು ಅಭಿವೃದ್ಧಿ ಮಾಡಿಕೊಡಬೇಕು. ಹಾಗಾಗಿ ತಾವುಗಳು ಕೂಡಲೇ ಮಧ್ಯ ಪ್ರವೇಶಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸಂಘರ್ಷ ಸಮಿತಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಒತ್ತುವರಿದಾರರಿಂದ ನಮಗೆ ತೊಂದರೆಯಾಗುತ್ತಿದ್ದು, ಶವ ಸಂಸ್ಕಾರಕ್ಕೆ ಜಾಗವಿಲ್ಲದಂತಾಗಿದೆ. ಅವರಿಂದ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ಬಿಡಿಸಿಕೊಟ್ಟು ಶವ ಸಂಸ್ಕಾರಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ದಸಂಸ ಮುಖಂಡ ಕೆಂಗುಂಟೆ ಜಯಣ್ಣ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಮನವಿ ಸ್ವೀಕರಿಸಿ ಮಾತನಾಡಿ, “ಭೂಮಾಪನ ಇಲಾಖೆಯಲ್ಲಿ ಸರ್ವೆಯರ್‌ಗಳ ಸಂಖ್ಯೆ ಕಡಿಮೆ ಇದೆ. ಶೀಘ್ರದಲ್ಲಿ ಅಳತೆ ನಡೆಸುವಂತೆ ಹೇಳಿದ್ದೇನೆ. ಜಾಗವನ್ನು ಗುರುತಿಸಿದ ಬಳಿಕ ಕ್ರಮ ಕೈಗೊಂಡು ಸ್ಮಶಾನಕ್ಕೆ ಜಾಗ ಕೊಡಿಸಲು ತಾಲೂಕು ಆಡಳಿತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ತಾಲೂಕು ಸಂಚಾಲಕ ಕೆ ಆರ್‌ ಸುಂದರ ಮೂರ್ತಿ, ವಿಜಯಕುಮಾರ್ ಮೂರ್ತಪ್ಪ, ನವೀನ್ ಮದ್ದೇರು, ಎನ್ ಪ್ರಭಾಕರ್, ವಿಜಯ್, ಶಿವಮೂರ್ತಿ, ಕರಿಯಪ್ಪ, ಮಂಜುನಾಥ, ಸಂಗಪ್ಪ, ವೆಂಕಟೇಶ್, ರಮೇಶ್, ರಘು ಹಾಗೂ ಕೊಂಡಾಪುರ ಗ್ರಾಮಸ್ಥರು, ದಲಿತ ಸಂಘರ್ಷ ಸಮಿತಿಯ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...