ಚಿತ್ರದುರ್ಗ | ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆವಹಿಸಲು ಡಿಸಿ ಸೂಚನೆ

Date:

ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಈಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಸೂಚನೆ ನೀಡಿದ್ದಾರೆ.

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಕುರಿತು ಡನೆದ ಸಭೆಯಲ್ಲಿ ಅವರು ಮಾತನಾಡಿದರು. “ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳು ಈಗಾಗಲೇ ಬರಪೀಡಿತ ತಾಲೂಕುಗಳು ಎಂದು ಘೋಷಣೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲೇ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ” ಎಂದರು.

ಆಯಾ ಕ್ಷೇತ್ರ ಶಾಸಕರುಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯನ್ನು ಏರ್ಪಡಿಸಿ, ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕಾಗಿ ಎಲ್ಲೆಲ್ಲಿ ನೀರಿನ ಮೂಲಗಳಿವೆ, ಪೈಪ್ ಲೈನ್ ವಿಸ್ತರಣೆ, ಬೋರೈಲ್‌ಗಳ ದುರಸ್ತಿ, ಟ್ಯಾಂಕರ್ ಮೂಲಕ ಪೂರೈಕೆ ಸೇರಿದಂತೆ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಿ, ಪರಿಹಾರ ಕಾರ್ಯ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ನಡಾವಳಿಯಲ್ಲಿ ಗೊತ್ತುಪಡಿಸಿ, ಪ್ರಸ್ತಾವನೆ ಸಲ್ಲಿಸುವ ಕಾರ್ಯ ತ್ವರಿತವಾಗಿ ಆಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿನ ಸಮಸ್ಯೆಯಾಗದಂತೆ ಖಾಸಗಿ ಬೋರೈಲ್‌ಗಳನ್ನು ಗುರುತಿಸಿಟ್ಟುಕೊಂಡಿರಬೇಕು. ಮಾಲೀಕರ ಮನವೊಲಿಸಿ ಬಾಡಿಗೆ ನಿಗದಿಪಡಿಸಬೇಕು. ಅಂತಹ ಬೋರೈಲ್‌ ಅಗತ್ಯವಿದ್ದರೆ ತ್ವರಿತವಾಗಿ ಗುರುತಿಸುವ ಕೆಲಸ ಆಗಬೇಕು ಎಂದು ಸೂಚಿಸಿದರು.

ಅಗತ್ಯವಿದ್ದರೆ ಪೈಪ್‌ಲೈನ್ ಮಾಡಿಕೊಳ್ಳಬಹುದು. ಒಂದು ವೇಳೆ ನೀರು ಲಭ್ಯವಾಗದೇ ಇರುವ ಪಕ್ಷದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಕೊನೆಯ ಆದ್ಯತೆಯಾಗಬೇಕು ಎಂದು ಹೇಳಿದರು.

ಚಳ್ಳಕೆರೆ ತಾ.ಪಂ ಇಒ ಮಾತನಾಡಿ, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಅಲ್ಪಮಟ್ಟಿಗೆ ಕುಸಿದಿದೆ, ಈಗಾಗಲೆ 53 ಹಳ್ಳಿಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳು ಎಂದು ಗುರುತಿಸಲಾಗಿದೆ. 18 ಹಳ್ಳಿಗಳಿಗೆ ಖಾಸಗಿ ಬೋರೈಲ್‌ಗಳನ್ನು ಗುರುತಿಸಲಾಗಿದೆ. ಇದರಲ್ಲಿಯೂ ನೀರು ಕಡಿಮೆಯಾಗುವ ಸಂಭವ ಇದೆ. ಇನ್ನೂ 14 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡುವ ಪರಿಸ್ಥಿತಿ ಬರಬಹುದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಪರಿಸ್ಥಿತಿ ಗಂಭೀರವಾದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ, ಒಟ್ಟಾರೆಯಾಗಿ ಕುಡಿಯುವ ನೀರು ಪೂರೈಕೆ ಮಾಡಲೇಬೇಕು. ಪ್ರತೀ ತಾಲೂಕಿಗೆ ತುರ್ತು ಕಾರ್ಯಗಳಿಗಾಗಿ 40 ಲಕ್ಷ ರೂ. ಅನುದಾನ ಒದಗಿಸಲಾಗಿದೆ ಎಂದರು.

ಅಲ್ಲದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಪೂರೈಕೆ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ತುರ್ತಾಗಿ ಅಗತ್ಯವಿರುವೆಡೆ ತಹಸಿಲ್ದಾರರ ಸೂಚನೆ ಮೇರೆಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವವರಿಗೆ ಟೆಂಡರ್ ನಲ್ಲಿ ಅಂತಿಮವಾಗಿ ನಿಗದಿಯಾಗುವ ದರಕ್ಕೆ ಅನುಗುಣವಾಗಿ ಮೊತ್ತ ಪಾವತಿಸಲಾಗುವುದು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಗ್ರಾಮೀಣ ಕುಡಿಯುವ ನೀರು ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪಾತಪ್ಪ, ನಗರಸಭೆ ಪೌರಾಯುಕ್ತ ರೇಣುಕಾ ಸೇರಿದಂತೆ ತಹಶೀಲ್ದಾಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...