ಚಿತ್ರದುರ್ಗ | ಮದ್ಯದಂಗಡಿ ಬಂದ್‌ ಮಾಡುವಂತೆ ಆಗ್ರಹ

Date:

ಜೆಜೆ ಹಟ್ಟಿಯ ಮದ್ಯದ ಅಂಗಡಿಯನ್ನು ಬಂದ್ ಮಾಡಬೇಕು. ಇಲ್ಲವೇ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜೆ ಜೆ ಹಟ್ಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಚಿತ್ರದುರ್ಗ ನಗರದ ಜೆ ಜೆ ಹಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಲಿತರು ವಾಸವಾಗಿದ್ದು, ಇಂದು ಇದರ ಸಮೀಪದಲ್ಲಿಯೇ ಇರುವ ಉಮಾಪತಿ ಸಮುದಾಯ ಭವನದಲ್ಲಿ ಕಾರ್ತಿಕ್ ರೆಸಿಡೆನ್ಸಿ (ಬಾರ್ ಅಂಡ್ ರೆಸ್ಟೋರೆಂಟ್)ನಲ್ಲಿ ಸಿಎಲ್-7. ಮದ್ಯದಂಗಡಿ ತಲೆಯೆತ್ತಿದೆ. ಇಲ್ಲಿ ಜೆ ಜೆ ಹಟ್ಟಿಯ ಯುವಕರು ಬೆಳಿಗ್ಗೆಯಿಂದ ಸಂಜೆವರೆಗೂ ಈ ಮದ್ಯದಂಗಡಿಯಲ್ಲಿ ಕುಳಿತು ಮದ್ಯ ಸೇವಿಸುತ್ತಾ ಕಾಲ ಕಳೆಯುತ್ತಿದ್ದಾರೆ. ಕೆಲಸಗಳಿಗೆ ಹೋಗುತ್ತಿಲ್ಲ. ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗುತ್ತಿಲ್ಲ. ಕುಡಿದು ಮನೆಗೆ ಬಂದು ಕುಟುಂಬಸ್ಥರೊಂದಿಗೆ ಗಲಾಟೆ ಮಾಡುತ್ತಾರೆ. ಇಲ್ಲಿನ ಮನೆಗಳಲ್ಲಿ ನೆಮ್ಮದಿ ಹಾಳಾಗಿ ಹೋಗಿದೆ. ಹೆಣ್ಣುಮಕ್ಕಳ ಗೋಳು ಹೇಳತೀರದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಡಿದು ಬಂದು ಪ್ರತಿನಿತ್ಯ ಅಕ್ಕ-ಪಕ್ಕದವರೊಂದಿಗೆ ಜಗಳವಾಡುತ್ತಾರೆ. ಮನೆಯಲ್ಲಿರುವ ವಸ್ತುಗಳನ್ನು ಮಾರಾಟ ಮಾಡಿ ಕುಡಿಯುತ್ತಿದ್ದಾರೆ. ಚಿಕ್ಕ ವಯಸ್ಸಿನ ಯುವಕರು ಕುಡಿದು ಸಾವನಪ್ಪುತ್ತಿದ್ದಾರೆ. ಇದರಿಂದ ದಲಿತರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಕುಡಿತದಿಂದ ಗಂಡನನ್ನು ಕಳೆದುಕೊಂಡಿದ್ದು, ಈಗ ಮಗನೂ ಅರ್ಧ ಸತ್ತಂತಾಗಿದ್ದಾನೆ” ಎಂದು ವೃದ್ಧೆ ಸುಶೀಲಮ್ಮ ಆತಂಕ ವ್ಯಕ್ತಪಡಿಸಿದರು.

ದುರುಗೇಶಪ್ಪ ಮಾತನಾಡಿ, “ಬಾರ್‌ನವರು ಅಪ್ರಾಪ್ತರಿಗೂ ಕೂಡ ಮದ್ಯಮಾರಾಟ ಮಾಡುತ್ತಿದ್ದಾರೆ. ಅಪ್ರಾಪ್ತರು ಮದ್ಯಪಾನದ ಚಟಕ್ಕೆ ದಾಸರಾಗಿದ್ದಾರೆ. ಈ ಮದ್ಯದಂಗಡಿ ಇರುವ ರಸ್ತೆಯು ದಟ್ಟ ಜನಸಂದಣಿ ಹೊಂದಿದೆ. ಕುಡುಕರು ಬಾರ್‌ನಲ್ಲಿ ಕುಡಿದು ತೇಲಾಡುತ್ತ ರಸ್ತೆಯಲ್ಲಿ ನಡೆದು ಮನೆಗೆ ಬರುವಾಗ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಬಾರ್‌ ಮುಂಭಾಗದಲ್ಲಿ ಕಲ್ಯಾಣ ಮಂಟಪವಿದೆ. ಇಲ್ಲಿ ಸಾಕಷ್ಟು ಮದುವೆ ಸಮಾರಂಭಗಳು ನಡೆಯುತ್ತವೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಸಮಾರಂಭಗಳಲ್ಲಿ ಭಾಗವಹಿಸುತ್ತಾರೆ. ಆದರೆ ಕುಡುಕರು ಅಶ್ಲೀಲವಾಗಿ ಬೈದಾಡುತ್ತಾ, ಓಲಾಡುತ್ತ ಕಲ್ಯಾಣ ಮಂಟಪದ ಮುಂಭಾಗದಲ್ಲಿ ನಡೆದಾಡುವುದರಿಂದ ಸಾರ್ವಜನಿಕರಿಗೆ ಬಹಳ ಕಿರಿಕಿರಿ ಉಂಟಾಗುತ್ತಿದೆ. ಕೀರ್ತಿ ಹಾಸ್ಪಿಟಲ್‌ಗೆ ಮತ್ತು ಪೆಟ್ರೋಲ್ ಬಂಕ್‌ಗೆ ಹೋಗುವವರಿಗೂ ತೊಂದರೆ ಆಗುತ್ತಿದೆ. ಸಂಚಾರಕ್ಕೂ ಅಡೆತಡೆ ಆಗುತ್ತಿದೆ” ಎಂದು ಆರೋಪಿಸಿದರು.

“ಮದ್ಯದಂಗಡಿ ಆವರಣದ ಮುಂಭಾಗದಲ್ಲೇ “ದ್ವಾರಕಾ ಇನ್ ಲಾಡ್ಜ್” ಇದೆ. ಈ ಲಾಡ್ಜ್‌ಗೆ ಅಪ್ರಾಪ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಬರುತ್ತಾರೆ. ಇಲ್ಲಿ ಬಂದು ಮದ್ಯ ಸೇವಿಸುತ್ತಾರೆ. ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಾರೆಂದು ಸ್ಥಳೀಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಮಹೇಶಪ್ಪ ಮಾತನಾಡಿ, “ಕಳೆದ 40 ವರ್ಷಗಳ ಹಿಂದೆ ದಸಂಸ ಸಂಸ್ಥಾಪಕ ಬಿ ಕೃಷ್ಣಪ್ಪ ಅವರ ಮುಂದಾಳತ್ವದಲ್ಲಿ ರಾಜ್ಯಾದಾದ್ಯಂತ “ಹೆಂಡ-ಬೇಡ, ಸಾರಾಯಿ-ಬೇಡ, ಹೋಬಳಿಗೊಂದು ವಸತಿ ಶಾಲೆ ಕೊಡಿ” ಎಂಬ ಘೋಷ ವಾಕ್ಯದೊಂದಿಗೆ ಮಾಡಿದ ಹೋರಾಟದ ಪ್ರತಿಫಲವಾಗಿ ಇಂದು ಹೆಂಡ-ಸಾರಾಯಿ ಸಂಪೂರ್ಣವಾಗಿ ನಿಂತಿವೆ. ವಸತಿ ಶಾಲೆಗಳು ಪ್ರಾರಂಭಿಸಲ್ಪಟ್ಟಿವೆ ಎನ್ನುವುದು ಇತಿಹಾಸ” ಎಂದು ಸ್ಮರಿಸಿದರು.

“ಕಾರ್ತಿಕ್ ರೆಸಿಡೆನ್ಸಿ (ಬಾರ್ ಅಂಡ್ ರೆಸ್ಟೋರೆಂಟ್) ಸಿ.ಎಲ್-7 ಮದ್ಯದಂಗಡಿಯ ಸಿ ಎಲ್ -7 ಸನ್ನದು ಷರತ್ತಿನ ಅನ್ವಯ, ಲಾಡ್ಜ್‌ನಲ್ಲಿ ವಾಸ್ತವ್ಯ ಹೂಡಿರುವ ಗ್ರಾಹಕರಿಗೆ ಮಾತ್ರ ಊಟದ ಜೊತೆಗೆ ಮದ್ಯಪಾನ ಸೇವಿಸಲು ಅವಕಾಶ ಕಲ್ಪಿಸಬೇಕು. ಲಾಡ್ಜ್‌ನಲ್ಲಿ ವಾಸ್ತವ್ಯವಿಲ್ಲದ ಹೊರಗಿನ ಗ್ರಾಹಕರಿಗೆ ಮದ್ಯವನ್ನು ಮಾರಾಟ ಮಾಡುವಂತಿಲ್ಲ. ಆದರೆ ಇವರು ಕಾನೂನು ಉಲ್ಲಂಘಿಸಿ ಹೊರಗಿನ ಗ್ರಾಹಕರಿಗೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಸ್ಥಳದಲ್ಲಿಯೇ ಕುಳಿತು ಮದ್ಯಪಾನ ಸೇವಿಸಲು ಅವಕಾಶ ಕಲ್ಪಿಸಿರುತ್ತಾರೆ. ಇದು ಸಿಎಲ್-7 ಸನ್ನದು ಷರತ್ತಿನ ಉಲ್ಲಂಘನೆ ಆಗಿರುತ್ತದೆ” ಎಂದು ಆರೋಪಿಸಿದರು.

“ಈ ಸನ್ನದುದಾರರು ಬೆಳಗಿನ ಜಾವದಲ್ಲಿಯೇ ಮದ್ಯದಂಗಡಿ ತೆರೆದು ಮದ್ಯ ಮಾರಾಟವನ್ನು ಮಾಡುತ್ತಿದ್ದಾರೆ. ದಲಿತ ಕಾಲೋನಿಯ ಯುವಕರು ಆ ವೇಳೆಯಲ್ಲಿಯೇ, ಮದ್ಯ ಸೇವನೆ ಮಾಡುತ್ತಿದ್ದು, ವ್ಯಸನಕ್ಕೆ ಬಲಿಯಾದ ಯುವಕರು ಅಡ್ಡದಾರಿ ಹಿಡಿಯುತ್ತಿದ್ದಾರೆ, ದಿಕ್ಕು ತಪ್ಪುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ಎಲ್ಲ ಹಿನ್ನೆಲೆಯಲ್ಲಿ ಮಾನವೀಯ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಈ ಮದ್ಯದಂಗಡಿಯನ್ನು ಬಂದ್ ಮಾಡಿಸಬೇಕು. ಇಲ್ಲವೇ ಸ್ಥಳಾಂತರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೊಬ್ಬರಿ ಖರೀದಿ ಕೇಂದ್ರ ಶೀಘ್ರ ಆರಂಭಿಸದಿದ್ದರೆ ಮಾರ್ಚ್11ಕ್ಕೆ ತೀವ್ರ ಹೋರಾಟ: ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ಚರಿಕೆ

“ನಮ್ಮ ಮನವಿಗೆ ತಕ್ಷಣ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರ ಗೊಳಿಸುತ್ತೇವೆ. ಕಳೆದ 40 ವರ್ಷಗಳ ಹಿಂದೆ ಮಾಡಿದಂತಹ ಹೋರಾಟವನ್ನು ಮುಂದುವರಿಸಲಾಗುವುದು” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಚಿಕ್ಕಣ್ಣ, ರಾಮು ಗೋಸಾಯಿ, ಟಿ ರಾಮು, ಹನುಮಂತಪ್ಪ ಗುಬ್ಬಿ, ಶಶಿಕುಮಾರ್, ಮಲ್ಲಿಕಾರ್ಜುನ್, ಹೊಯ್ಸಳ, ಹನುಮಂತಪ್ಪ ದುರ್ಗ, ರವಿ, ಕೌನ್ಸಿಲರ್ ನಸ್ರುಲ್ಲಾ ಹಾಗೂ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...