ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

Date:

ಹೊಸದಾಗಿ ಬರುವಂತಹ ಆಟೋಗಳಿಗೆ ಆರ್‌ಟಿಒ ಇಲಾಖೆ ಪರವಾನಗಿ(ಪರ್ಮಿಟ್) ನೀಡಬಾರದು. ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮತ್ತು ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದರು.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ವಾಸವಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿದ, ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ಪರವಾನಗಿ ಇಲ್ಲದಿರುವ ಹೊರ ಪರವಾನಗಿ ಹೊಂದಿರುವ ಆಟೋಗಳನ್ನು ಹಿಡಿದು ಹಾಕಬೇಕು. ಆಟೋ ಚಾಲಕರ ಸಂಘಟನೆಗಳು ನಿಗದಿ ಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಜಿಲ್ಲಾ ಆಡಳಿತ ಈ ಕೂಡಲೇ ನಿರ್ಮಿಸಿಕೊಡಬೇಕು. ಹಳ್ಳಿಗಳಿಗೆ ಸೀಟು ಹೊಡೆಯುವ ಆಪೇ ಆಟೋಗಳನ್ನು ಈ ಕೂಡಲೇ ನಗರದಿಂದ ಬಹಿಷ್ಕರಿಸಬೇಕು, ರಾಜ್ಯಸರ್ಕಾರದಿಂದ ಬರುವ ಆಶ್ರಯ ಮನೆ ಯೋಜನೆಯಡಿಯಲ್ಲಿ ನಿರ್ಗತಿಕ ಆಟೋಚಾಲಕರಿಗೆ ಕಡ್ಡಾಯವಾಗಿ ಆಶ್ರಯ ಮನೆ ನೀಡಬೇಕು. ನಗರಸಾರಿಗೆ ಬಸ್ಸುಗಳಿಗೆ ನಿಗಧಿತ ಸಮಯ, ಸ್ಥಳ ಕಡ್ಡಾಯವಾಗಿ ಕೂಡಲೇ ನಿಗಧಿಪಡಿಸಬೇಕು” ಎಂದು ಒತ್ತಾಯಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 20 ವರ್ಷಗಳಿಂದ ಹಲವು ಆಟೋ ಸಂಘಟನೆಗಳು ಹೋರಾಟ ಮಾಡುತ್ತಾ ಮನವಿ ಸಲ್ಲಿಸಿದ್ದರೂ ಕೂಡ ಈ ಹಿಂದೆ ಇದ್ದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ತಾವು ಮುಂದಿನ 15 ದಿನಗಳೊಳಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವ್ಯವಸಾಯಗಾರರ ಪರಿವರ್ತನಾ ಕೈಗಾರಿಕಾ, ವ್ಯಾಪಾರೋದ್ಯಮ ಸಹಕಾರ ಸಂಘದಲ್ಲಿಅಕ್ರಮ: ತನಿಖೆಗೆ ಆಗ್ರಹ

“ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನು ನೀಡಿದರು.

ಈ ವೇಳೆ ಆಟೋ ಚಾಲಕ ಸಂಘಟನೆ ಒಕ್ಕೂಟದ ಬಹುತೇಕ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...