ಚಿತ್ರದುರ್ಗ | ಧರೆಗುರಳಿತು ಡಿಆರ್‌ಡಿಒ ತಯಾರಿಸಿದ ಚಾಲಕ ರಹಿತ ಡ್ರೋನ್!

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನವೊಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಅನ್ನು ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು, ಅದು ನಿಯಂತ್ರಣ ತಪ್ಪಿ ವದ್ದಿಕೆರೆ ಗ್ರಾಮದ ಜಮೀನಿನಲ್ಲಿ ಬಿದ್ದಿದೆ.

ಮಾನವ ರಹಿತ ವಿಮಾನ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಡಿಆರ್‌ಡಿಒ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವದ್ದಿಗೆರೆ ಬಳಿ ಡ್ರೋನ್‌ ಪತನ

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ‘ತಪಸ್’ ಪತನಗೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಸಿದ್ಧಪಡಿಸಿದ್ಧ ಯುದ್ಧ ವಿಮಾನ ನಾಯಕನಹಟ್ಟಿ ಸಮೀಪದ ಕುದಾಪುರ ವಾಯುನೆಲೆಯಿಂದ ಭಾನುವಾರ ಬೆಳಿಗ್ಗೆ ಹಾರಾಟ ಆರಂಭಿಸಿತ್ತು. ನಿಯಂತ್ರಣ ತಪ್ಪಿ ಸ್ಥಳೀಯ ರೈತ ಸಿದ್ದಪ್ಪ ಎಂಬುವವರ ಜಮೀನಿನಲ್ಲಿ ಧರೆಗುರುಳಿದೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ನಿವೃತ್ತ ಎಎಸ್‌ಐಗೆ ಮಾರಕಾಸ್ತ್ರದಿಂದ ಹಲ್ಲೆ; ಆರೋಪಿಗಳು ಪರಾರಿ

ಚಳ್ಳಕೆರೆಯಲ್ಲಿ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರದಿಂದ 2019 ಸೆಪ್ಟೆಂಬರ್‌ 17ರಂದು ರುಸ್ತುಂ-2 ಪರೀಕ್ಷಾರ್ಥ ಹಾರಾಟ ನಡೆಸಲಾಗಿತ್ತು. ಈ ವೈಮಾನಿಕ ವಾಹನ ಜೋಡಿ ಚಿಕ್ಕನಹಳ್ಳಿಯ ಬಳಿ ಪತನಗೊಂಡಿತ್ತು. ಇದೀಗ ʼತಪಸ್‌ʼ ಎಂಬ ಚಾಲಕ ರಹಿತ ಡ್ರೋನ್‌ ಪತನವಾಗಿದೆ. ವಿಮಾನದ ರೀತಿಯ ಪಳೆಯುಳಿಕೆಗಳನ್ನು ಕಂಡ ಗ್ರಾಮಸ್ಥರು ಕೆಲವು ಸಮಯ ಪೈಲಟ್‌ಗಾಗಿ ಹುಡುಕಾಟ ನಡೆಸಿದರು.

ಸುತ್ತಮುತ್ತಲಿನನ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಡ್ರೋನ್‌ ಅವಶೇಷಗಳನ್ನು ಕುತೂಹಲದಿಂದ ವೀಕ್ಷಿಸಿದರು. ಎಂಜಿನ್‌ ಭಾಗ, ರೆಕ್ಕೆಗಳು, ಡ್ರೋನ್‌ನ ಹಿಂಬದಿಯ ಭಾಗವು ಬೇರೆ ಸ್ಥಳಗಳಲ್ಲಿ ಮುರಿದು ಬಿದ್ದಿದೆ. ಡಿಆರ್‌ಡಿಒ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...