ಚಿತ್ರದುರ್ಗ | ಶಿಕ್ಷಣ ಮಾನವನ ವಿಕಾಸದ ಹೆದ್ದಾರಿ: ನ್ಯಾ.ಸಮೀರ್ ಪಿ ನಂದ್ಯಾಲ್

Date:

“ಭಾರತೀಯ ಕಾನೂನಿನಲ್ಲಿ ಶಿಕ್ಷಣ ಮೂಲಭೂತ ಹಕ್ಕು. ಶಿಕ್ಷಣ ಮಾನವನ ವಿಕಾಸದ ಹೆದ್ದಾರಿಯಾಗಿದೆ. ಶಿಕ್ಷಣದಿಂದ ನೈತಿಕ ಮೌಲ್ಯಗಳನ್ನು ಬಿತ್ತುವುದರಿಂದ ಉತ್ತಮ ಸಮಾಜದ ನಿರ್ಮಾಣ ಸಾದ್ಯವಾಗುತ್ತದೆ” ಎಂದು ಚಳ್ಳಕೆರೆ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಸಮೀರ್ ಪಿ ನಂದ್ಯಾಲ್ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಚಿತ್ರದುರ್ಗ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಮಾಜ ಪರಿವರ್ತನಾ ಸೇವಾ ಸಂಸ್ಥೆ ಚಳ್ಳಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಕಾನೂನು ಜಾಗೃತಿ ಕಾರ್ಯಕ್ರಮ’ದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

“ಭಾರತೀಯ ಕಾನೂನಿನಲ್ಲಿ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಲಾಗಿದೆ. ಶಿಕ್ಷಣದಿಂದ ನೈತಿಕ ಮೌಲ್ಯಗಳನ್ನು ಬಿತ್ತುವುದರಿಂದ ಉತ್ತಮ ಸಮಾಜವು ನಿರ್ಮಾಣವಾಗುತ್ತದೆ. ಇದರಿಂದ ಉತ್ತಮ ದೇಶ ನಿರ್ಮಿತವಾಗುತ್ತದೆ. ಈ ಕಾರಣದಿಂದಲೇ ಭಾರತೀಯ ಕಾನೂನಿನಲ್ಲಿ ಶಿಕ್ಷಣವನ್ನು 14 ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನಾಗಿ ಮಾಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಣ ಒಂದು ದೇಶದ ಅಭಿವೃದ್ಧಿಯ ಬಾಗಿಲು ತೆರೆಯುವ ಕೀಲಿ ಕೈ. ಶಿಕ್ಷಣವೇ ಮಾನವನ ವಿಕಾಸದ ಹೆದ್ದಾರಿ. ಹಾಗಾಗಿ ನಾವೆಲ್ಲರೂ ಸುಶಿಕ್ಷಿತರಾಗುವುದರ ಮೂಲಕ, ಭಾರತೀಯ ಸಂವಿಧಾನದ ಮತ್ತು ಕಾನೂನಿನ ಘನತೆ, ಗೌರವ, ಸ್ವಾಭಿಮಾನವನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಬೇಕಿದೆ” ಎಂದು ಅಭಿಪ್ರಾಯಪಟ್ಟರು.

IMG 20250206 175047 edited

“ಭಾರತದಂತಹ ದೇಶದ ಒಳಗೆ ಸಾಮಾಜಿಕ ಮೂಲ ಪಿಡುಗುಗಳಾದ ಬಾಲ್ಯ ವಿವಾಹ, ವರದಕ್ಷಿಣೆ, ಬಾಲಕಾರ್ಮಿಕ ಪದ್ಧತಿ ಹಾಗೂ ಜೀತಪದ್ಧತಿಯಂತಹ ಮೊದಲಾದ ಅನಿಷ್ಟಗಳನ್ನು ಇನ್ನೂ ಹೋಗಲಾಡಿಸಬೇಕಿದೆ” ಎಂದು ಕರೆ ನೀಡಿದರು.

“ಸಮಾನತೆ, ಮಹಿಳಾ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು, ರಾಜ್ಯ ನೀತಿ-ನಿರ್ದೇಶಕ ತತ್ವಗಳು, ಇವುಗಳು ಸಂವಿಧಾನದ ಮತ್ತು ಕಾನೂನಿನ ಆಸ್ತಿ. ಆದ್ದರಿಂದ ಇವುಗಳನ್ನು ರಕ್ಷಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಬೇಕಿದೆ. ಕಾನೂನುಗಳು ನಮ್ಮ ಸಂವಿಧಾನದ ಜೀವಾಳ. ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಆದ್ದರಿಂದ ಸಂವಿಧಾನ ಮತ್ತು ಭಾರತೀಯ ಕಾನೂನಿನ ಆಶಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಪ್ರಜಾಪ್ರಭುತ್ವ ನಮ್ಮ ಧರ್ಮವಾಗಬೇಕು, ಅದರೊಳಗಿನ ಕಾನೂನುಗಳು ಧರ್ಮಗ್ರಂಥವಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿನ್ನದ ಬೆಲೆ ವಿಪರೀತ ಏರಿಕೆ! ಬಡವರ ಪಾಲಿಗೆ ಬಂಗಾರ ಮರೀಚಿಕೆ

ವಕೀಲರ ಸಂಘದ ಅಧ್ಯಕ್ಷ ಕೆಎಂ ನಾಗರಾಜ್ ಮಾತನಾಡಿ “ಸೂರ್ಯನಿಲ್ಲದ ಜಗತ್ತನ್ನು ಹೇಗೆ ಊಹಿಸಿಕೊಳ್ಳಲು ಸಾಧ್ಯವಿಲ್ಲವೋ, ಹಾಗೆಯೇ ಕಾನೂನುಗಳು ಇಲ್ಲದ ದೇಶವನ್ನು ಊಹಿಸಿಕೊಳ್ಳುವುದು ಅಸಾಧ್ಯ. ಕಾನೂನುಗಳು ಒಂದು ದೇಶದ ರಕ್ಷಾ ಕವಚ ಇದ್ದಂತೆ, ಕಾನೂನುಗಳಿಂದಲೇ ಭಾರತದಲ್ಲಿ ನಾವೆಲ್ಲರೂ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ. ಕಾನೂನುಗಳು ಇಲ್ಲದೆ ಹೋದರೆ, ಇಡೀ ದೇಶದಲ್ಲಿ ಅಶಾಂತಿ, ದೌರ್ಜನ್ಯ,ದಬ್ಬಾಳಿಕೆ, ಮೊದಲಾದವುಗಳು ಉಂಟಾಗಿ ದೇಶ ಅವನತಿಯತ್ತ ಸಾಗುತ್ತದೆ. ಆದ್ದರಿಂದ ಕಾನೂನುಗಳನ್ನು ಗೌರವಿಸಿ ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಕಾನೂನುಗಳನ್ನು ನಾವೆಲ್ಲರೂ ರಕ್ಷಿಸೋಣ” ಎನ್ನುವ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ, ಸಮಾಜ ಪರಿವರ್ತನಾ ಸೇವಾ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಮರಿಸ್ವಾಮಿ, ತಾಲ್ಲೂಕು ಅಧ್ಯಕ್ಷ ರಾಮರೆಡ್ಡಿ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸಂತೋಷ್, ಸಂಪತ್ ಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಸುರೇಶ್, ವಕೀಲರ ಸಂಘದ ಉಪಾಧ್ಯಕ್ಷ ಬಿ.ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಎಂ ಸಿದ್ದರಾಜು, ಕೆ ನಾಗರಾಜ್, ಆರಕ್ಷಕ ಇಲಾಖೆಯ ನಾಗೇಂದ್ರಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಲ್ಲೇಶಪ್ಪ, ಸಮಾಜ ಕಲ್ಯಾಣ ಇಲಾಖೆಯ ಮಹಾಲಿಂಗಪ್ಪ, ಮೇಲ್ವಿಚಾರಕ ಆಲಿಜಾನ್, ಕಾರ್ಯದರ್ಶಿ ಮಂಜುಳಾ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...