ಚಿತ್ರದುರ್ಗ | ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ; ಹಕ್ಕುಪತ್ರ ನೀಡುವಂತೆ ಆಗ್ರಹ

Date:

ಅನ್ಯ ಸಮುದಾಯದವರು ಮಾದಿಗ ಸಮುದಾಯದ ಆಸ್ತಿ ಅತಿಕ್ರಮಣ ಮಾಡಿದ್ದು, ಮಾದಿಗರ ಆಸ್ತಿಯನ್ನು ಮಾದಿಗರಿಗಾಗಿ ಮೀಸಲಿಡಬೇಕು. ಮಾದಿಗರ ಭೂಮಿಯ ಹಕ್ಕುಪತ್ರಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಮಾದಿಗ ಸಮಾಜದವರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಈ ವೇಳೆ ಮುಖಂಡ ಹಳೆನಗರದ ಜಯಣ್ಣ ಮಾತನಾಡಿ, “ನಮ್ಮ ಪೂರ್ವಜರು ಸಮಾಜದ ಏಳಿಗೆಗಾಗಿ ಚಳ್ಳಕೆರೆ ನಗರದಲ್ಲಿ ನಿರ್ಮಿಸಿದ ಚರ್ಮ ಹದಮಾಡುವ ಕೈಗಾರಿಕೆ ಹಾಗೂ ಚರ್ಮ ಮಾರಾಟ ಮಾಡುವ ಮಳಿಗೆಯನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅತಿಕ್ರಮಣ ಮಾಡುತ್ತಿದ್ದರೂ ಚಳ್ಳಕೆರೆ ನಗರಸಭೆ ಇದರ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಸೋಜಿಗದ ಸಂಗತಿ. ಅಲ್ಲದೆ ಚಿತ್ರದುರ್ಗ ರಸ್ತೆಯಲ್ಲಿರುವ ಬಾಬೂ ಜಗಜೀವನರಾಂ ಭವನ ಹಾಗೂ ಗಾಂಧಿನಗರದಲ್ಲಿರುವ ಪುರಸಭಾ ಕಲ್ಯಾಣ ಮಂಟಪಕ್ಕೆ, ಚಳ್ಳಕೆರೆ ನಗರಸಭೆ ಇದೇ ರೀತಿ ದ್ವಿ-ಮುಖ ನೀತಿಯನ್ನು ಅನುಸರಿಸುತ್ತಿರುವುದು ನಗರಸಭೆಯ ಆಡಳಿತ ಮಾದಿಗ ಸಮಾಜದ ಪರ ಎಂತಹ ನಿಲುವಾಗಿದೆಯೆಂದು ತಾವೇ ಯೋಚಿಸಬೇಕು. ಈಗಾಗಲೇ ಚರ್ಮ ಕೈಗಾರಿಕೆ ಮಳಿಗೆಯನ್ನು ಅನ್ಯ ಧರ್ಮಿಯರ ಸಂಘಟನೆ ವ್ಯಾಪ್ತಿಗೆ ಒಳಪಡಿಸುತ್ತಿರುವ ಹುನ್ನಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿ ಮಾದಿಗ ಸಮಾಜದ ಬೆಲೆ ಬಾಳುವ ಆಸ್ತಿಯನ್ನು ಅತಿಕ್ರಮಣ ಮಾಡುತ್ತಿರುವುದು ನಗರಸಭೆಯ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ನಿರ್ಲಕ್ಷ್ಯ ತೋರುತ್ತಿರುವುದು, ಅತಿಕ್ರಮಣದಾರರಿಗೆ ಕುಮ್ಮಕ್ಕು ನೀಡುತ್ತಿರುವ ಅನುಮಾನ ಮೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ತಾಲೂಕಿನ ಸಮಸ್ತ ಮಾದಿಗ ಸಮಾಜದ ಬೆಲೆಬಾಳುವ ಆಸ್ತಿಯನ್ನು ಅತಿಕ್ರಮಣ ಮಾಡುವಂತಹ ಈ ಕಾನೂನು ಬಾಹಿರ ಕೆಲಸದ ವಿರುದ್ದ ಪ್ರತಿಯೊಬ್ಬ ಪ್ರಜ್ಞಾವಂತ ಮಾದಿಗ ಬಂಧುಗಳು ಈ ಅನ್ಯಾಯದ ವಿರುದ್ಧ ಪ್ರತಿಭಟಿಸಲೇಬೇಕಾದ ಅನಿವಾರ್ಯತೆ ಇದೆ. ಮಾದಿಗ ಸಮಾಜದ ಆಸ್ತಿಯ ಉಳಿವಿಗಾಗಿ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ಹಾಗೂ ಪ್ರತಿಭಟನೆಯಲ್ಲಿ ತಾಲೂಕಿನ ಪ್ರತಿಯೊಬ್ಬ ಮಾದಿಗರೂ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾದಿಗ ಮಹಾಸಭಾ ಅಧ್ಯಕ್ಷ ಎಂ ಶಿವಮೂರ್ತಿ ಮಾತನಾಡಿ, “ಮೂರು ತಲೆಮಾರಿನ ಹಿಂದೆ ನಮ್ಮ ಹಿರಿಯರು ಮಕ್ಕಳ ಭವಿಷ್ಯದ ದೂರದೃಷ್ಟಿಯಿಂದ ಚಳ್ಳಕೆರೆ ನಗರದಲ್ಲಿ ಆದಿಕರ್ನಾಟಕ ಹಾಸ್ಟೆಲ್ ಜಾಗ, ಚರ್ಮ ಕೈಗಾರಿಕಾ ಕುಶಲಕರ್ಮಿ ಭೂಮಿ, ಚರ್ಮ ಕೈಗಾರಿಕಾ ಮಳಿಗೆಗಳೆಂದು ಮೂರು ಕಡೆ ಭೂಮಿಯನ್ನು ಅಂದಿನ ಸರ್ಕಾರದಿಂದ ಮಾದಿಗ ಜನಾಂಗಕ್ಕೆ ಕೊಡುಗೆಯಾಗಿ ಪಡೆದಿದ್ದರು. ಆದರೆ ಅದು ಅತಿಕ್ರಮಣವಾಗುತ್ತಿದೆ. ಅಂದು ನೀಡಿದ ಭೂಮಿಯ ಕಡತಗಳು ಇಂದು ಇಲಾಖೆಯಲ್ಲಿ ಕೊಡಲು ಆದೇಶವಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅ.29,30: ಕಲ್ಯಾಣ ಕರ್ನಾಟಕದ ಬಯಲಾಟ ಪರಂಪರೆ ಕುರಿತು ವಿಚಾರ ಸಂಕಿರಣ; ಬಯಲಾಟ ಪ್ರದರ್ಶನ

ಈ ಸಂಧರ್ಭದಲ್ಲಿ ಮಾದಿಗ ಮಹಾಸಭಾದ ಇಂದ್ರೇಶ್, ಸೂರನಹಳ್ಳಿ ಶ್ರೀನಿವಾಸ್, ಚೆನ್ನಿಗರಾಮಯ್ಯ, ಕೃಷ್ಣಮೂರ್ತಿ, ಪಾಪಣ್ಣ ಜಯಣ್ಣ, ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಚೆನ್ನಾಗನಹಳ್ಳಿ ಮಲ್ಲೇಶ್, ತಿಪ್ಪೇಸ್ವಾಮಿ, ಮಂಜುನಾಥ್, ವೆಂಕಟೇಶ್, ಚೆನ್ನಕೇಶವ ಮೂರ್ತಿ, ನಾಗರಾಜ್, ಅಂಜಿನಪ್ಪ, ಶಿವಮೂರ್ತಿ, ಗಾಂಧಿನಗರದ ಯುವಮುಖಂಡ ಎಲ್ ಸಿದ್ದು, ಚಿರಂಜೀವಿ ಮನು ದೊರೆ, ಇತರ ಹಲವು ಸಮಾಜದ ಮುಖಂಡರು, ಮಾದಿಗ ಸಮಾಜದ ಹಿರಿಯ ರಾಜಕಾರಣಿಗಳು, ನಿವೃತ್ತ ನೌಕರರು, ಕಲಾವಿದರು, ಎನ್‌ಜಿಒ ಸಂಘಟನೆಗಳು, ಮಹಿಳಾ ಮತ್ತು ದಲಿತ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...