ಚಿತ್ರದುರ್ಗ | ರೈತರು ಸ್ವಾಭಿಮಾನದಿಂದ ಇರಬೇಕು: ರೈತ ಸಂಘದ ಸಿದ್ದವೀರಪ್ಪ

Date:

ಚುನಾವಣೆಗಳಲ್ಲಿ ಹಣದ ಮೂಲಕ ಮತವನ್ನು ಕೇಳುವ ಸಂಸ್ಕೃತಿ ನಿಲ್ಲಬೇಕು ಹಣದ ಮೂಲಕ ಮತಗಳನ್ನು ಮಾರಿಕೊಳ್ಳವುದು ತಪ್ಪೆಂದು ನಮ್ಮ ರೈತರಿಗೆ ಅರಿವಾಗಬೇಕು. ಆ ಮೂಲಕ ರೈತರು ಸ್ವಾಭಿಮಾನದಿಂದ ಇರಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಧ್ಯಕ್ಷ ಸಿದ್ದವೀರಪ್ಪ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಮಾಡದಕೆರೆ ಹೋಬಳಿ ತಿಮ್ಮಯ್ಯನ ಹಟ್ಟಿ ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮತನಾಡಿದರು.

“ಸರ್ಕಾರಗಳು ರೈತರಿಗೆ ಬೆಂಬಲ ಮತ್ತು ವೈಜ್ಞಾನಿಕ ಬೆಲೆ ನೀಡಿ, ಬ್ಯಾಂಕ್ ಹಾಗೂ ಇತರೆ ಕ್ಷೇತ್ರಗಳಲ್ಲಿ ರೈತರ ಸಾಲಕ್ಕೆ ರೈತರ ವಸ್ತುಗಳನ್ನು ವಿನಿಮಯ ಮಾಡಿಕೊಳ್ಳುವ ವ್ಯವಸ್ಥೆ ತರಬೇಕು. ತಾನು ಬೆಳೆಯುವ ಬೆಳೆಗೆ ರೈತ ತಾನೇ ಬೆಲೆ ನಿರ್ಧರಿಸುವ ವ್ಯವಸ್ಥೆ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಅಧ್ಯಕ್ಷ ಮಹೇಶ್ವರಪ್ಪ ಮಾತನಾಡಿ, “ಈ ಹಿಂದೆ ತಾಲೂಕಿನಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದ್ದು, ಸುಮಾರು 12 ಸಾವಿರಕ್ಕೂ ಹೆಚ್ಚು ಮಂದಿ ರೈತರಿಂದ ರಾಗಿಯನ್ನು ಖರೀದಿ ಮಾಡಲಾಗಿದೆ. ಅದರಲ್ಲಿ 6000ಕ್ಕೂ ಹೆಚ್ಚು ರೈತರ ರಾಗಿ ಖರೀದಿಗೆ ಹಣವನ್ನು ಸರ್ಕಾರದಿಂದ ಪಾವತಿಸಿಲ್ಲ. ಖರೀದಿಯಲ್ಲಿ ಕೂಡ ಬೆಂಬಲ ಬೆಲೆ ಎಂದು ಹೇಳಿ ಕೃಷಿ ನೀತಿ ಆಯೋಗ ಅಥವಾ ಸ್ವಾಮಿನಾಥನ್ ವರದಿಯ ಪ್ರಕಾರ ಬೆಂಬಲ ಬೆಲೆ ನೀಡಿಲ್ಲ” ಎಂದು ಆರೋಪಿಸಿದರು.

“ಕನಿಷ್ಠ ಬೆಲೆಯಲ್ಲಿ ರೈತರ ರಾಗಿಯನ್ನು ಖರೀದಿಸಿ ಈವರೆಗೂ ಬಿಲ್ ಪಾವತಿಸದೆ ಮಳೆಗಾಲ ಆರಂಭವಾಗುವ ಕಾಲದಲ್ಲಿ ರೈತರು ಬೀಜ, ಗೊಬ್ಬರ, ಮಕ್ಕಳ ಶೈಕ್ಷಣಿಕ ವೆಚ್ಚ ಸೇರಿದಂತೆ ಇತರೆ ವ್ಯವಸ್ಥೆಗಳಿಗೆ ಪರದಾಡುವಂತಾಗಿದೆ. ಅದರಿಂದ ಈ ಕೂಡಲೇ ಮಾನ್ಯ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದು ಸಂಬಂಧಪಟ್ಟ ಇಲಾಖೆಯಿಂದ ರೈತರಿಗೆ ನೇರವಾಗಿ ಹಣಪಾವತಿ ಮಾಡಬೇಕು” ಎಂದು ಒತ್ತಾಯಿಸಿದರು.

“ರೈತರ ಬೇಡಿಕೆಗಳು ಈಡೇರದಿದ್ದಲ್ಲಿ ನೂತನ ಸರ್ಕಾರ ಮತ್ತು ಆಡಳಿತದ ವಿರುದ್ಧ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿದ್ಯುತ್‌ ದರ ಏರಿಕೆ ವಿರೋಧಿಸಿ ಕೆಪಿಆರ್‌ಎಸ್‌ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಡಿ ಎಸ್ ಹಳ್ಳಿ ಮಲ್ಲಿಕಾರ್ಜುನ್, ಜಿಲ್ಲಾ ಕಾರ್ಯದರ್ಶಿ ಬಸವರಾಜಪ್ಪ, ಜಿಲ್ಲಾ ಉಪಾಧ್ಯಕ್ಷ ಮುರುಗೇಶಪ್ಪ, ಸದಾಶಿವಪ್ಪ, ಎಂ ಎಸ್ ಸ್ವಾಮಿ, ತಾಲೂಕು ಗೌರವಾಧ್ಯಕ್ಷ ಕರಿಯಪ್ಪ, ಗೊರವಿನಕಲ್ಲು ಮಹಿಳಾ ಅಧ್ಯಕ್ಷರು ಸಾವಿತ್ರಮ್ಮ ಮತ್ತು ಪಲ್ಲವಿ, ಶಿವಕುಮಾರ್ ಲಕ್ಷ್ಮಿದೇವರಹಳ್ಳಿ, ತಾಲೂಕು ಕಾರ್ಯದರ್ಶಿ ಶಿವಣ್ಣ, ರಂಗನಾಥ್, ತಾಲೂಕು ಕಾರ್ಯದರ್ಶಿ ಸತೀಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...