ಚಿತ್ರದುರ್ಗ | ಅಭಿವೃದ್ಧಿ ಕೆಲಸಗಳಿಗೆ ಪಿಡಿಒ ನಿರ್ಲಕ್ಷ್ಯ ಆರೋಪ; ರಾಜೀನಾಮೆ ನೀಡಿದ ಗ್ರಾಪಂ ಸದಸ್ಯರು

Date:

ಪಿಡಿಒ ನಿರ್ಲಕ್ಷ್ಯಕ್ಕೆ ಬೇಸತ್ತು ಸರ್ವಾನುಮತದಿಂದ ಸಾಮೂಹಿಕವಾಗಿ 11 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆಹಳ್ಳಿ ಹೋಬಳಿ ವ್ಯಾಪ್ತಿಯ ಕರಿಯಾಲ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ರಾಜೀನಾಮೆ ನೀಡಿ ಮಾತನಾಡಿದ ಸದಸ್ಯರು, ಕರಿಯಾಲ ಗ್ರಾ.ಪಂ ಪಿಡಿಒ ಚಂದ್ರಕಲಾರವರು ಸರಿಯಾಗಿ ಕರ್ತವ್ಯ ಪಾಲನೆ ಮಾಡುತ್ತಿಲ್ಲ ಹಾಗೂ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಸಾರ್ವಜನಿಕ ಕೆಲಸ ಹಾಗೂ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾತಿಗೆ ಸ್ಪಂದಿಸದೇ ದುರ್ವತನೆ ತೋರುತ್ತಿರುವುದನ್ನು ಮನಗಂಡು ಸರ್ವ ಸದಸ್ಯರು ರಾಜೀನಾಮೆ ನೀಡಲು ತೀರ್ಮಾನಿಸಿದೆವು ಎಂದು ಹೇಳಿದ್ದಾರೆ.

ಗುರುವಾರ (ಫೆ.29) ಸದಸ್ಯರಾದ ಕೆ.ಬಸವರಾಜ್, ಎಂ.ಮಾರಪ್ಪ, ಸಾಕಮ್ಮ ರಾಜನಾಯ್, ಈರಣ್ಣ, ಪಿ.ಪ್ರಸನ್ನ ಕುಮಾ‌ರ್, ಡಿ.ವೆಂಕಟೇಶ್, ಭಾಗ್ಯಮ್ಮ, ಸುಶೀಲಮ್ಮ, ಆ‌ರ್. ಎಂ.ಮಂಜುಳಾ ಸೇರಿದಂತೆ 11 ಮಂದಿ ಸದಸ್ಯರು ಗ್ರಾಪಂ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳಿದಂತೆ ಮೂವರು ಸದಸ್ಯರು ಕಾರ್ಯ ನಿಮಿತ್ತ ಕೇಂದ್ರಸ್ಥಾನದಲ್ಲಿ ಇಲ್ಲದ ಕಾರಣ ಅವರು, ಶುಕ್ರವಾರ ರಾಜೀನಾಮೆ ನೀಡಲಿದ್ದು, ಅಧ್ಯಕ್ಷರು ಈ ಎಲ್ಲ ರಾಜೀನಾಮೆ ಜತೆಗೆ ತನ್ನ ರಾಜೀನಾಮೆಯನ್ನು ಚಿತ್ರದುರ್ಗ ಉಪವಿಭಾಗಾಧಿಕಾರಿಗೆ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ವ್ಯಾಪಕವಾಗಿ ಉಲ್ಬಣಗೊಂಡಿದೆ. ಸಮಸ್ಯೆ ಬಗೆಹರಿಸುವಲ್ಲಿ ಪಿಡಿಒ ವಿಫಲರಾಗಿದ್ದಾರೆ. ಅವರ ಬೇಜವಾಬ್ದಾರಿಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಯಾವುದೇ ಸದಸ್ಯರಿಗೆ ಗೌರವ ಕೊಡುವುದಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಈ-ಸ್ವತ್ತು ಮಾಡಿಕೊಡುತ್ತಿಲ್ಲ. ವಸತಿ ಯೋಜನೆ ಮನೆಗಳಿಗೆ ಹಣ ಬಿಲ್‌ಪಾಸ್ ಮಾಡುತ್ತಿಲ್ಲ. ನರೇಗಾ ಯೋಜನೆಯಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುವುದಿಲ್ಲ. ಎನ್‌ಆರ್‌ಜಿ ಕಾಮಗಾರಿ ರೈತರ ಸಾಮಗ್ರಿಗಳ ವೆಚ್ಚದ ಬಿಲ್ ಮಾಡದೇ, ಕುಡಿವ ನೀರಿನ ಹಾಗೂ ವಿದ್ಯುತ್ ಬಲ್ಟ್ ಖರೀದಿಯ ಬಿಲ್ ನೀಡದೇ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿರುವ ಸದಸ್ಯರು, ಇಂತಹ ಅನೇಕ ಸಮಸ್ಯೆಗಳಿದ್ದು, ಆಡಳಿತದಲ್ಲಿ ಅಸಹಾಯಕತೆ ತೋರಿರುವ ಪಿಡಿಒ ನಿರ್ಲಕ್ಷತೆಗೆ ಬೇಸತ್ತು ನಾವೆಲ್ಲರೂ ರಾಜೀನಾಮೆ ನೀಡಿದ್ದೇವೆ ಎಂದು ಸದಸ್ಯರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...