ಚಿತ್ರದುರ್ಗ | ಕವಾಡಿಗರ ಹಟ್ಟಿಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

Date:

ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇಡೀ ಗ್ರಾಮವೇ ಆತಂಕದಲ್ಲಿ ದಿನಗಳನ್ನು ದೂಡಿದೆ. ಇದೀಗ, ಆರೋಗ್ಯ ಇಲಾಖೆಯು ಗ್ರಾಮದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದು, ‘ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರಂತೆ’ ಎಂಬಂತೆ ಇಲಾಖೆ ಕೆಲಸ ಮಾಡುತ್ತಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಚಿತ್ರದುರ್ಗ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳ ಕುರಿತು ಕವಾಡಿಗರ ಹಟ್ಟಿಯಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಕಾರ್ಯಕ್ರಮ ನಡೆಸಿದೆ. “ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವುದರಿಂದ, ವಾಂತಿಭೇದಿ ಪ್ರಕರಣಗಳು ಹರಡದಂತೆ ತಡೆಗಟ್ಟಬಹುದು. ಊಟ ಮಾಡುವ ಮುನ್ನ, ಶೌಚಾಲಯ ಬಳಕೆ ಮಾಡಿದ ನಂತರ, ಸೋಪಿನಿಂದ ಕೈ-ಕಾಲುಗಳನ್ನು ತೊಳೆದುಕೊಳ್ಳಬೇಕು. ಬಿಸಿ ಬಿಸಿ ಆಹಾರ ಪದಾರ್ಥಗಳನ್ನು ಮಾತ್ರ ಸೇವನೆ ಮಾಡಬೇಕು. ತಂಗಳು
ತಡಿಗಳನ್ನ ತಿನ್ನಬಾರದು. ಹಣ್ಣು ತರಕಾರಿಗಳನ್ನ ಉಪ್ಪು ನೀರಿನಿಂದ ತೊಳೆದು ಉಪಯೋಗಿಸಬೇಕು. ಆಹಾರ ಪದಾರ್ಥಗಳ ಮೇಲೆ ನೊಣಗಳು ಕೂರದಂತೆ ಮುಚ್ಚಿಟ್ಟು ಬಳಸಬೇಕು. ಕುದಿಸಿ ಆರಿಸಿದ ನೀರನ್ನು ಮಾತ್ರ ಕುಡಿಯಬೇಕು” ಎಂದು ಜಾಗೃತಿ ಮೂಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...