ಚಿತ್ರದುರ್ಗ | ಸಮರ್ಪಕ ವಿದ್ಯುತ್, ನೀರು ಪೂರೈಕೆ ಮಾಡಿದರೆ ಸರ್ಕಾರವನ್ನು ನಾವೇ ಸಾಕುತ್ತೇವೆ: ರೈತ ಮುಖಂಡ

Date:

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್‌ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು,  ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ‌ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್, ಅರಸನಘಟ್ಟ, ಚಿಕ್ಕಜಾಜೂರು, ಬಿದುರ್ಗ, ಚನ್ನಪಟ್ಟಣ, ಅಪರಸನಹಳ್ಳಿ, ಕೋಟೆಹಾಳ್, ಎಮ್ಮಿಗನೂರು ಸೇರಿದಂತೆ ಇತರ ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿದರು.

“ಹೊಳಲ್ಕೆರೆ ತಾಲೂಕಿನಲ್ಲಿ ಗುಂಜಿಗನೂರು ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ರೈತರಿಗೆ ಕೇವಲ ಒಂದು ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಅದೂ ಕೂಡ ಅಸಮರ್ಪಕವಾಗಿದ್ದು, ಕಣ್ಣಾ ಮುಚ್ಚಾಲೆಯಾಟ ಆಡುತ್ತಿದೆ. ವಿದ್ಯುತ್ ಇಲಾಖೆ ರೈತರ ಬದುಕಿನಲ್ಲಿ ಆಟವಾಡುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಗಾರು ಮಳೆ ಮತ್ತು ಹಿಂಗಾರು ಮಳೆಗಳು ಕೈ ಕೊಟ್ಟಿದ್ದು, ರೈತ ಬರದ ಪರಿಸ್ಥಿತಿಯಲ್ಲಿ ಕಂಗಾಲಾಗಿದ್ದಾನೆ. ಈ ಸಮಯದಲ್ಲಿ ಸರ್ಕಾರ ಮುಂಜಾಗ್ರತೆ ವಹಿಸಿ ರೈತರಿಗೆ ಅವಶ್ಯಕವಾದ ವಿದ್ಯುತ್ ಪೂರೈಕೆ ಮಾಡಬೇಕಾಗಿತ್ತು. ಆದರೆ ಅದನ್ನು ನಿರ್ವಹಿಸುವಲ್ಲಿ ಸರ್ಕಾರ ಮತ್ತು ವಿದ್ಯುತ್ ಇಲಾಖೆ ವಿಫಲವಾಗಿದೆ. ಕೂಡಲೇ ಪ್ರತಿದಿನ 6ರಿಂದ 7ಗಂಟೆಗಳ ಕಾಲ ಥ್ರೀ ಫೇಸ್ ವಿದ್ಯುತ್‌ ಪೂರೈಸಬೇಕು. ನಿರಂತರವಾಗಿ ಉತ್ತಮ ಗುಣಮಟ್ಟದಲ್ಲಿ ವಿದ್ಯುತ್ ಪೂರೈಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತ ಪ್ರತಿಕ್ರಿಯೆ

“ತಾಲೂಕಿನಲ್ಲಿ ಅತಿ ಹೆಚ್ಚು ವಾಣಿಜ್ಯ ಬೆಳೆಯ ತೋಟಗಳಿದ್ದು, ಅದನ್ನೇ ನಂಬಿ ಬಹುತೇಕ ರೈತ ಕುಟುಂಬಗಳು ಬದುಕಿವೆ. ಇತ್ತ ಮಳೆಯೂ ಬಾರದೆ ತೋಟಗಳಿಗೆ ಕೊಳವೆ ಬಾವಿಗಳಿಂದ ನೀರುಣಿಸಲು ವಿದ್ಯುತ್ ಇಲ್ಲದೆ ತಾಲೂಕಿನ ರೈತರು ಕಂಗಾಲಾಗಿದ್ದು, ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಮೇಲಾಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕು” ಎಂದು ಆಗ್ರಹಿಸಿದರು.

ಈ ಬಗ್ಗೆ ರೈತ ಮುಖಂಡ ಶಶಿಧರ್ ಗುಂಟನೂರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಾವು ಸರ್ಕಾರವನ್ನು ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಒತ್ತಾಯಿಸುತ್ತಿದ್ದೇವೆ. ಇಲ್ಲಿ ರೈತರು ತೋಟಗಾರಿಕೆ ಬೆಳೆಗಳಿಗೆ ಬೋರ್ವೆಲ್ ಮೂಲಕ ನೀರು ಹಾಯಿಸಲು ವಿದ್ಯುತ್ ಅವಲಂಬಿಸಿದ್ದು‌, ವಿದ್ಯುತ್ ಇಲಾಖೆಯವರು ವಿದ್ಯುತ್ ಪೂರೈಸದೆ ಕಂಗಾಲಾಗಿದ್ದೇವೆ. ‌ಸರ್ಕಾರ ರೈತರಿಗೆ ಸರಿಯಾದ ವಿದ್ಯುತ್, ನೀರಾವರಿ ಪೂರೈಕೆ ಮಾಡಿದರೆ ನಾವೇ ಸರ್ಕಾರವನ್ನು ಸಾಕುತ್ತೇವೆ” ಎಂದರು.

ಭೋವಿ ಸಮಾಜದ ಮುಖಂಡ ತಿಪ್ಪೇಸ್ವಾಮಿ ಮಾತನಾಡಿ, “ಈ ಸರ್ಕಾರ ರೈತರಿಂದಲೇ ಅಧಿಕಾರಕ್ಕೆ ಬಂದಿದೆ. ಆದರೆ ಭಾಗ್ಯಗಳ ಮೊರೆ ಹೋಗಿ ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ರೈತರು ತಕ್ಕ ಪಾಠ ಕಲಿಸುತ್ತಾರೆ. ಹಾಗಾಗಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಹೊಳಲ್ಕೆರೆ ತಾಲೂಕು ವಿದ್ಯುತ್ ಇಲಾಖೆಯ ಎಇಇ ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮಾತನಾಡಿ, “ನಮಗೆ ಪೂರೈಕೆಯಾಗುತ್ತಿರುವ ವಿದ್ಯುತ್‌ನಲ್ಲಿ ಕೊರತೆ ಇದ್ದು, ಮಾರ್ಗ ಮಧ್ಯದ ರಿಪೇರಿಗಳು ಕೂಡ ವಿದ್ಯುತ್ ರೇಖೆಗೆ ತಡೆಯಾಗುತ್ತವೆ. ಒಂದೆರಡು ದಿನಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲು ಹಾಗೂ ಹೆಚ್ಚಿನ ವಿದ್ಯುತ್ ಪೂರೈಕೆಗೆ ಮನವಿ ಮಾಡಿದ್ದು, ಬೇಡಿಕೆ ಸಲ್ಲಿಸಲಾಗಿದೆ. ಒಂದೆರಡು ದಿನಗಳಲ್ಲಿ ರೈತರಿಗೆ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ ಕೇಂದ್ರೀಯ ವಿವಿ; ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

ಅಧಿಕಾರಿಗಳು ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಪ್ರತಿಭಟನಾಕಾರರು ಎರಡು ದಿನಗಳು ಸಮಯ ನೀಡುತ್ತೇವೆ. ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ ರೈತರು ಆಗಮಿಸಿ ತೀವ್ರ ಹೋರಾಟಕ್ಕೆ ಮುಂದಾಗುತ್ತೇವೆ” ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ಮುಂದೂಡಿದರು.

ಪ್ರತಿಭಟನೆಯಲ್ಲಿ ವಿಶ್ವನಾಥ್, ಸತೀಶ್, ರುದ್ರೇಶ್, ಶಿವಕುಮಾರ್, ಮನು, ಯೋಗೇಶ್, ಗಿರೀಶ್, ಹರ್ಷ, ಅರುಣ್, ಮಧು, ಜಗದೀಶ್, ದಿವಾಕರ್, ಯೋಗೇಶಪ್ಪ, ರಾಜು, ಉಮೇಶ್ ಸೇರಿದಂತೆ ಹಲವು ರೈತ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ರೈತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...