ಚಿತ್ರದುರ್ಗ | ತೀವ್ರವಾಗುತ್ತಿರುವ ಬಿಸಿಲು; ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ

Date:

ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೆ ಇತ್ತ ತಾಪಮಾನದ ಜತೆಗೆ ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ.

ಮಳೆ ಕೊರತೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣವೂ ಕಡಿಮೆಯಾಗುತ್ತಿದೆ. ಬೆಳೆದವರಿಗೆ ಸರಿಯಾದ ಇಳುವರಿ ಸಿಗದ ಕಾರಣ, ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಪ್ರಮಾಣದಲ್ಲೂ ವ್ಯತ್ಯಯ ಉಂಟಾಗಿದೆ. ಪರಿಣಾಮವಾಗಿ ತರಕಾರಿ ಮತ್ತು ಸೊಪ್ಪಿನ ಬೆಲೆ ಹೆಚ್ಚಾಗಿದೆ ಎನ್ನುತ್ತಿದ್ದಾರೆ ವ್ಯಾಪಾರಿಗಳು.

ಕಳೆದ ಕೆಲ ದಿನಗಳ ಹಿಂದೆ ಕೆಲವು ಭಾಗಗಳಲ್ಲಿ ಮಳೆಯಾಗಿದ್ದರೂ ಬಿಸಿಲಿನ ತೀವ್ರತೆ ಕಡಿಮೆಯಾಗಿಲ್ಲ. ಕೊಳವೆ ಬಾವಿಗಳು ಸರಣಿಯೋಪಾದಿಯಲ್ಲಿ ಸ್ಥಗಿತವಾಗುತ್ತಿವೆ. ಇದರಿಂದ ನೀರಿನ ಕೊರತೆ ಮುಂದುವರಿದಿದೆ. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗುತ್ತಿಲ್ಲ. ಬೇಡಿಕೆ ಹೆಚ್ಚಾದ ಕಾರಣ ಸಹಜವಾಗಿ ಕೆಲ ತರಕಾರಿಗಳ ಬೆಲೆಯಲ್ಲಿ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗ ನಗರದ ಸಂತೆಹೊಂಡ, ಖಾಸಗಿ ಬಸ್‌ ನಿಲ್ದಾಣ ಸಮೀಪದ ಸಂತೆ ಮಾರುಕಟ್ಟೆ, ತ್ಯಾಗರಾಜ ಬೀದಿಯ ಸಣ್ಣ ಮಾರುಕಟ್ಟೆಯಲ್ಲಿ ಹೆಚ್ಚಿನ ತರಕಾರಿ, ಸೊಪ್ಪು ಮಾರಾಟ ಮಾಡಲಾಗುತ್ತದೆ. ಇದರ ಜತೆ ಜೋಗಿಮಟ್ಟಿ ರಸ್ತೆ, ಚಳ್ಳಕೆರೆ ಟೋಲ್‌ ಗೇಟ್‌, ತಿಪ್ಪಜ್ಜಿ ಸರ್ಕಲ್‌, ತುರವನೂರು ರಸ್ತೆಯ ಬ್ಯಾಂಕ್‌ ಕಾಲೊನಿ, ಮೇದೆಹಳ್ಳಿ ರಸ್ತೆ, ದಾರುಕ ಬಡಾವಣೆ, ಐಯುಡಿಪಿ ಲೇಔಟ್‌, ಹೊಳಲ್ಕೆರೆ ರಸ್ತೆ, ಭೀಮಸಮುದ್ರ ರಸ್ತೆ, ಕೆಎಸ್‌ಆರ್‌ಟಿಸಿ ಬಡಾವಣೆ, ಚಿಕ್ಕಪೇಟೆ, ಬುರುಜನಹಟ್ಟಿ, ಜೆಸಿಆರ್‌ ವೃತ್ತ, ಉಮಾಪತಿ ಕಲ್ಯಾಣ ಮಂಟಪ ಸಮೀಪ, ಹಳೆ ವೈಶಾಲಿ ಮುಂಭಾಗ ಹೀಗೆ ಪ್ರತಿ ಬಡಾವಣೆಗಳಲ್ಲಿ ಹೆಜ್ಜೆಗೊಬ್ಬರು ತರಕಾರಿ ಮಾರಾಟಗಾರರಿದ್ದಾರೆ.

ಮಧ್ಯರಾತ್ರಿಯಿಂದಲೇ ಜಿಲ್ಲೆಯ ಗ್ರಾಮೀಣ ಪ್ರದೇಶ, ಬೆಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ ಸೇರಿ ವಿವಿಧ ಭಾಗಗಳಿಂದ ತರಕಾರಿ ಚಿತ್ರದುರ್ಗ ಮಾರುಕಟ್ಟೆಗೆ ಬರುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಕೋಲಾರ, ಬೆಂಗಳೂರು, ಆಂಧ್ರಪ್ರದೇಶ, ಬೆಳಗಾವಿಯಿಂದ ಮಾತ್ರ ಬರುತ್ತಿದೆ. ಸ್ಥಳೀಯವಾಗಿ ಬದನೆಕಾಯಿ ಬಿಟ್ಟರೆ ಬೇರೆ ಯಾವುದೇ ತರಕಾರಿ ಬರುತ್ತಿಲ್ಲ ಎನ್ನುತ್ತಾರೆ ತರಕಾರಿ ವ್ಯಾಪಾರಿಗಳು.

ಚಿಕ್ಕಬಳ್ಳಾಪುರ, ಕೋಲಾರ, ಕುಣಿಗಲ್, ತುಮಕೂರು ಮತ್ತು ತಮಿಳುನಾಡಿನಿಂದ ಮಾರುಕಟ್ಟೆಗೆ ಬರುತ್ತಿದ್ದ ಬೀನ್ಸ್‌ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಬೆಲೆಯೂ ಹೆಚ್ಚಾಗಿದೆ. ಗ್ರಾಹಕರಿಗೆ ಮತ್ತು ಮದುವೆ ಮತ್ತಿತರ ಸಮಾರಂಭ ಆಯೋಜಿಸುವವರಿಗೆ ಸ್ವಲ್ಪ ತೊಂದರೆಯಾಗಿದೆ. ಮತ್ತೊಂದೆಡೆ ಸಮರ್ಪಕ ಇಳುವರಿ ಕಾರಣ ರೈತರಿಗೂ ಲಾಭವಾಗುತ್ತಿಲ್ಲ ಎನ್ನುತ್ತಾರೆ ವ್ಯಾಪಾರಿಗಳು.‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...