ಚಿತ್ರದುರ್ಗ | ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿ: ಕರುನಾಡ ವಿಜಯಸೇನೆ ಪ್ರತಿಭಟನೆ

Date:

ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಅಂಚೆ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಗ್ರಾಹಕರ ಹತ್ತಿರ ಹಿಂದಿ-ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವುದರಿಂದ ವ್ಯವಹಾರ ಮಾಡಲು ತುಂಬಾ ತೊಂದರೆಯಾಗಿದ್ದು, ಕೂಡಲೇ ಕಡ್ಡಾಯವಾಗಿ ಕನ್ನಡ ಬರುವ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಂತೆ ಕೋರಿ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.‌

ಈ ವೇಳೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ ಟಿ ಶಿವಕುಮಾರ್ ‍ “ಕರ್ನಾಟಕದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕನ್ನಡ ಭಾಷೆ ಬರದ ಸಿಬ್ಬಂದಿಗಳನ್ನು, ಹೊರ ರಾಜ್ಯದವರನ್ನು ನೇಮಕ ಮಾಡಿಕೊಂಡಿರುವುದು ಕನ್ನಡಿಗರಿಗೆ ಮತ್ತು ಕನ್ನಡಭಾಷೆಗೆ ಅವಮಾನಿಸಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

IMG 20250131 WA0014

“ಸಿಬ್ಬಂದಿಗಳು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವುದರಿಂದ ಬಹಳಷ್ಟು ಗ್ರಾಹಕರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವ್ಯವಹಾರ ಮಾಡಲು ತೊಂದರೆಯಾಗಿರುತ್ತದೆ. ಕೆಲವು ಗ್ರಾಹಕರು ಎಷ್ಟೋ ಮಂದಿ ಬ್ಯಾಂಕಿಗೆ ಬರದೇ ಖಾಸಗಿ ಬ್ಯಾಂಕುಗಳಲ್ಲಿ ವ್ಯವಹಾರ ಮಾಡುತ್ತಿರುತ್ತಾರೆ. ಕನ್ನಡ ಭಾಷೆ ಬರುವ ಸಿಬ್ಬಂದಿಗಳನ್ನು ಕರ್ನಾಟಕದ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಮತ್ತು ಅಂಚೆ ಕಛೇರಿಗಳಲ್ಲಿ ನೇಮಕ ಮಾಡಬೇಕು “ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಲಿ ಕರ್ನಾಟಕದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 2-3 ಬಾರಿ ಕನ್ನಡ ಪುಸ್ತಕಗಳನ್ನು ಸಂಘಟನೆಯಿಂದ ನೀಡಿ ಕನ್ನಡದಲ್ಲಿಯೇ ಮಾತನಾಡುವಂತೆ ಮತ್ತು ಕನ್ನಡವನ್ನು ಕಲಿಯುವಂತೆ ಸಿಹಿತಿನಿಸಿ ಮನವಿ ಸಹ ಮಾಡಿಕೊಂಡಿರುತ್ತೇವೆ. ರಾಜ್ಯ ಸರ್ಕಾರ ಕಳೆದ ವರ್ಷ ಎಲ್ಲಾ ಅಂಗಡಿ ಮುಂಗಟ್ಟುಗಳು, ಕಛೇರಿಗಳಲ್ಲಿ ಕಡ್ಡಾಯವಾಗಿ ನಾಮಫಲಕಗಳು 60% ರಷ್ಟು ಕನ್ನಡದಲ್ಲಿರಬೇಕೆಂದು ಆದೇಶಿಸಿರುತ್ತದೆ. ಆದರೂ ಸಹ ಇದುವರೆಗೂ ಕನ್ನಡವನ್ನು ಬಳಸದೇ ಇರುವುದು ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ಮಾಡಿದ ದ್ರೋಹವಾಗಿರುತ್ತದೆ” ಎಂದು ಕಿಡಿಕಾರಿದರು.

IMG 20250131 WA0013

“ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಭಾಷೆಯನ್ನು ಮಾತನಾಡಲು ಬರೆಯಲು ಬರುವ ಸಿಬ್ಬಂದಿಗಳನ್ನು ಮಾತ್ರ ನೇಮಕ ಮಾಡಬೇಕು. ಸಿಬ್ಬಂದಿಗಳಿಗೆ ಕನ್ನಡವನ್ನು ಕೂಡಲೇ ಕಲಿಯುವಂತೆ ಅಥವಾ ಕನ್ನಡ ಕಲಿಯದಿರುವ ಸಿಬ್ಬಂದಿಗಳನ್ನು ನಮ್ಮ ರಾಜ್ಯ ಬಿಟ್ಟು ಬೇರೆಡೆ ವರ್ಗಾವಣೆ
ಮಾಡಬೇಕು. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮುಂದೆ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ” ಎಂದು ಎಚ್ಚರಿಸಿದರು.

ಇದೇ ವೇಳೆ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ಮುಖಂಡರಾದ ಗೋಪಿನಾಥ್, ಸಂತೋಷ್, ನಾಗೇಶ್ ಅವಿನಾಶ್, ಹರೀಶ್ ಕುಮಾರ್, ತಿಪ್ಪೇಸ್ವಾಮಿ, ನಿರಂಜನ್, ಅಖಿಲೇಶ್ ನಾಯ್ಕ, ಜಗದೀಶ್, ಮಧುಸೂದನ, ರತ್ನಮ್ಮ, ಎರ್ರಿಸ್ವಾಮಿ, ನಿಸಾರ್ ಅಹಮದ್, ನಾಗರಾಜ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...