ಚಿತ್ರದುರ್ಗ | ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ‌ ಕಸವನಹಳ್ಳಿ ರಮೇಶ್ ಆಗ್ರಹ

Date:

ಹಳ್ಳಿಗಳಿಂದ ರಾಜ್ಯದ ಆಡಳಿತ ಎನ್ನುವ ಸಚಿವ ಕೃಷ್ಣಭೈರೇಗೌಡರು ಗ್ರಾಮೀಣ ಭಾಗದ ಜನರ ಜೀವನಾಡಿಗಳಾದ ಗ್ರಾಮ ಆಡಳಿತ ಅಧಿಕಾರಿಗಳನ್ನು ಬೀದಿಯಲ್ಲಿ ನಿಲ್ಲಿಸಿ ಯಾವ ಮಟ್ಟಿಗಿನ ಆಡಳಿತದಲ್ಲಿ ಸುಧಾರಣೆ ತರಲು ಸಾಧ್ಯ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ನೇರವಾಗಿ ಪ್ರಶ್ನಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಕಂದಾಯ ಅಧಿಕಾರಿಗಳು ಕೇಳುತ್ತಿರುವ ಕನಿಷ್ಠ ಬೇಡಿಕೆಗಳನ್ನು ಕಾನೂನು ಮತ್ತು ಮಾನವೀಯ ನೆಲಗಟ್ಟಿನಲ್ಲಿ ಈಡೇರಿಸಬೇಕಾಗುತ್ತದೆ. ಕುಳಿತುಕೊಳ್ಳಲು ಸ್ವಂತ ಕಚೇರಿ ಇಲ್ಲದೆ ಹಳ್ಳಿಗಳಲ್ಲಿರುವ ಅರಳಿ ಕಟ್ಟೆ, ಜಗಲಿಕಟ್ಟೆ, ಹಳೆಯ ಶಿಥಿಲ ಕಟ್ಟಡ, ದೇವಸ್ಥಾನದ ಆವರಣದಲ್ಲಿ ಕುಳಿತು ಕಂದಾಯ ದಾಖಲೆಗಳನ್ನು, ಗ್ರಾಮದ ಆಡಳಿತವನ್ನು ನಿರ್ವಹಣೆ ಮಾಡಬೇಕಾಗುವ ದುಃಸ್ಥಿತಿ ಬಂದಿದೆ” ಎಂದು ಕಿಡಿಕಾರಿದರು.

“ಅಧಿಕಾರಿಗಳಿಗೆ ಒಂದು ಸುಸಜ್ಜಿತ ಕಟ್ಟಡ ಕಟ್ಟಿಸಿಕೊಡಲು ಮನಸ್ಸು ಮಾಡಬೇಕು. ಒಂದೇ ಮೊಬೈಲ್‌ನಲ್ಲಿ ಸರ್ಕಾರದ ಹತ್ತಾರು ಆ್ಯಪ್‌ಗಳ ಕೆಲಸ ಮಾಡಲು ಕಷ್ಟಸಾಧ್ಯ. ಆದ್ದರಿಂದ ಅವರಿಗೆ ಟ್ಯಾಬ್, ಸ್ಕ್ಯಾನರ್, ಪ್ರಿಂಟರ್ ಇತ್ಯಾದಿ ಆಧುನಿಕ ಡಿಜಿಟಲ್ ತಂತ್ರಜ್ಞಾನಕ್ಕೆ ಸರಿಹೊಂದುವ ಸೌಲಭ್ಯಗಳನ್ನು ಕೊಡಬೇಕು. ಅಲ್ಲದೆ ಕಾಲಕಾಲಕ್ಕೆ ತಾಂತ್ರಿಕ ತರಬೇತಿ ಕೊಡಬೇಕು ಹುದ್ದೆಯನ್ನು ಮೇಲ್ದರ್ಜೆಗೇರಿಸಬೇಕು. ಪದೋನ್ನತಿ ಎನ್ನುವುದು ಅವರಿಗೆ ಮರೀಚಿಕೆಯಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿ ಮುಂದುವರಿಯುವ ಅನಿವಾರ್ಯ ಸ್ಥಿತಿಯಲ್ಲಿ ಮಾನಸಿಕವಾಗಿ ತೊಳಲಾಡುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ಪೊಲೀಸ್ ಕಾರ್ಯಾಚರಣೆ; ಅಂತರಾಷ್ಟ್ರೀಯ ಗಾಂಜಾ ಆರೋಪಿಗಳ ಬಂಧನ

“ಈ ಸಮಸ್ಯೆಗಳು ಕೇವಲ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳಲ್ಲ. ಗ್ರಾಮೀಣ ಭಾಗದ ಜನರ ಭಾಗವೇ ಆಗಿರುವ ಇವರು ಸರಿಯಾದ ಸಮಯಕ್ಕೆ ಸರಿಯಾದ ಜಾಗದಲ್ಲಿ ನಮಗೆ ದಾಖಲೆಗಳನ್ನು ಒದಗಿಸದಿದ್ದರೆ ಹಳ್ಳಿಗಳ ಅಭಿವೃದ್ಧಿಯಾಗುವುದಿಲ್ಲ. ಆದ್ದರಿಂದ ದೇಶ ವಿದೇಶಗಳನ್ನು ಸುತ್ತಿ ಬಂದಿರುವ ತಾವುಗಳು ಅವರು ಕೇಳುವ ಬೇಡಿಕೆಗಳನ್ನು ಕಾನೂನು ಹಾಗೂ ಮಾನವಿಯ ನೆಲೆಗಟ್ಟಿನಲ್ಲಿ ಈಡೇರಿಸಬೇಕು” ಎಂದು ಸಚಿವ ಕೃಷ್ಣಭೈರೇಗೌಡ ಅವರಿಗೆ ಒತ್ತಾಯಿಸಿದರು.

“ಕಂದಾಯ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರ ಪರವಾಗಿ ನಾವೂ ಕೂಡಾ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...