ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಬಸ್ನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.
ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಐದು ವರ್ಷದ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಪಾರ್ವತಮ್ಮ(45) ಮತ್ತು ಮಾಬಮ್ಮ (35), ರಾಯಚೂರು ಜಿಲ್ಲೆಯ ಮಸ್ಕಿ ಮೂಲದ ರಮೇಶ್(40) ಮತ್ತು ರವಿ(23), ಮಾನ್ವಿಯ ನರಸಣ್ಣ(5) ಮೃತ ದುರ್ದೇವಿಗಳು. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಸ್ಥಿತಿಯಲ್ಲಿದ್ದ ಮೂವರು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬಸ್ನಲ್ಲಿದ್ದ 6ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಐಮಂಗಲ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಘಟನೆಯ ಕುರಿತು ಕರ್ನಾಟಕ, ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದು, “ನೀವು ಬಸ್ಸನ್ನು ಊಹಿಸಬಲ್ಲಿರಾ?. ಕೆಎಸ್ಆರ್ಟಿಸಿ ಬಸ್ಸೊಂದು ಲಾರಿಯನ್ನು ಓವರ್ಟೇಕ್ ಮಾಡಲು ಯತ್ನಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಾಲಕನ ಅಜಾರುಕತೆಯಿಂದ ಈ ದುರಂತವಾಗಿದ್ದು, ಚಾಲಕನ ಡಿಎಲ್ ವಶಪಡಿಸಿಕೊಳ್ಳಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ನಿಜಗುಣಾನಂದರಿಗೆ ಜೀವ ಬೆದರಿಕೆ; ಸ್ವಾಮಿಗಳ ಜೊತೆ ನಾವಿದ್ದೇವೆ ಎಂದ ಕರ್ನಾಟಕ
“ಓವರ್ಟೇಕ್ ಮಾಡುವಾಗ ದಯವಿಟ್ಟು ಇಂಡಿಕೇಟರ್ ಹಾಕಿ ಮತ್ತು ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.




