ಚಿತ್ರದುರ್ಗ | ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಕುಂಚಿಟಿಗರ ಆಗ್ರಹ

Date:

ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕೈತಪ್ಪಿ ಹೋಗಿದ್ದು, ಕಳೆದ 27 ವರ್ಷಗಳಿಂದ ಕುಂಚಿಟಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಿರಾ ಕುಂಚಿಟಿಗರ ಸಂಘದ ಆರ್.ವಿ ಪುಟ್ಟಕಾಮಣ್ಣ ಹೇಳಿದರು.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬುರಜಿನರೊಪ್ಪ ರಕ್ಷಾಗಣಪತಿ ದೇವಸ್ಥಾನದ ಹತ್ತಿರ ಕುಂಚಿಟಿಗರ ಎರಡನೇ ದಿನದ ಪಾದಯಾತ್ರೆಗೆ ರಾಷ್ಟ್ರೀಯ ಕುಂಚಿಟಿಗ ಮಹಾಸಭಾದ ಅಧ್ಯಕ್ಷ ಎಚ್ ಪಿ ಗುರುನಾಥ್ ಚಾಲನೆ ನೀಡಿದ ಬಳಿಕ ಆರ್ ವಿ ಪುಟ್ಟಕಾಮಣ್ಣ ಅವರು ಮಾತನಾಡಿದರು.

“ಕುಂಚಿಟಿಗರು ಮಧ್ಯ ಕರ್ನಾಟಕದ ಬಹುತೇಕ ಹಳ್ಳಿಗಾಡಿನ ಕುಗ್ರಾಮಗಳಲ್ಲಿ ನೆಲೆಸಿ ಕೃಷಿ, ಕೂಲಿ, ಪಶುಸಂಗೋಪನೆ, ಹೈನುಗಾರಿಕೆ ಮಾಡಿಕೊಂಡು ಮಳೆಯಾಶ್ರಿತ ವ್ಯವಸಾಯ ಮಾಡಿಕೊಂಡು ಬುಡಕಟ್ಟು ಸಂಸ್ಕೃತಿಯ ಆಚರಣೆ ಮಾಡುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಾದ್ಯಂತ ಹರಿದು ಹಂಚಿ ಹೋಗಿರುವ ಕುಂಚಿಟಿಗರು ಪ್ರಾದೇಶಿಕ ಭಾಷೆಗಳ ವ್ಯತ್ಯಾಸ ಮತ್ತು ಸ್ಥಳೀಯ ಪಟ್ಟಭದ್ರರ ಪ್ರಭಾವಕ್ಕೆ ಮಣಿದು ಕುಂಚಿಟಿಗ ಜಾತಿಯ ಜೊತೆಗೆ ಕುಂಚವಕ್ಕಲ್, ಕಮಾಟಿ, ನಾಮದಾರಿ, ಲಿಂಗಾಯಿತ, ಒಕ್ಕಲಿಗ ಅಂತ ಸೇರಿಸಿಕೊಂಡು ಜಾತಿ ಪಟ್ಟಿಯಲ್ಲಿ ಅಸ್ತಿತ್ವದಲ್ಲಿಲ್ಲದ ಹೆಸರಿನಲ್ಲಿ ಜಾತಿ ಸಿಂಧುತ್ವ ಸಿಗದೆ ತೊಂದರೆ ಅನುಭವಿಸುವಂತಾಗಿದೆ. ಕೆಲ ಪಟ್ಟಭದ್ರರು ಕುಂಚಿಟಿಗ ಜಾತಿಯನ್ನು ಉಪಜಾತಿ ಎಂದು ಕರೆದು ಜೀತಪದ್ದತಿ ಮರು ಸ್ಥಾಪಿಸುವ ಹುನ್ನಾರ ಮಾಡುತ್ತಿದ್ದಾರೆ. ಸ್ವಾಭಿಮಾನಿ ಕುಂಚಿಟಿಗರು ಇದನ್ನು ಸಹಿಸುವುದಿಲ್ಲ” ಎಂದರು.

ಕುಂಚಿಟಿಗರ ರಾಜ್ಯ ಒಕ್ಕೂಟದ ಅಧ್ಯಕ್ಷ ಕಸವನಹಳ್ಳಿರಮೇಶ್ ಮಾತನಾಡಿ, “ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಇದೀಗ ಕುಲ ಬೆಡಗುಗಳ ಆಧಾರ ಮತ್ತು “ಮರಳಿ ಬಾ ಕುಂಚಿಟಿಗ” ಜನಾಂದೋಲನ, ಅಂತರಾಜ್ಯ ಕುಂಚಿಟಿಗರ ಭಾವೈಕ್ಯತಾ ಪ್ರವಾಸ, ಕುಲದೈವ ಯಾತ್ರೆ ಕಾರ್ಯಕ್ರಮದಡಿ ಕುಂಚಿಟಿಗರು ಒಂದುಗೂಡುತ್ತಿದ್ಧಾರೆ” ಎಂದು ಹೇಳಿದರು.

“ಕುಂಚಿಟಿಗರು ಶಾಶ್ವತ ನೀರಾವರಿ ಸೌಕರ್ಯವಿಲ್ಲದೆ, ಮಳೆ ನೆರಳಿನ ಬಯಲು ಸೀಮೆಯಲ್ಲಿ ಬಾರದ ಮಳೆ, ಬತ್ತಿದ ಕೆರೆ, ಏರಿದ ಬಡ್ಡಿ, ತೀರದ ಸಾಲ, ಅತಿವೃಷ್ಟಿ, ಅನಾವೃಷ್ಟಿ, ಬೆಳೆ ನಷ್ಟ, ಬೆಲೆ ಕುಸಿತಗಳಿಂದ ಉತ್ಪಾದನಾ ವೆಚ್ಚ ಕೂಡ ಲಭಿಸದೆ ಕೃಷಿ ಮತ್ತು ಬೆಳೆ ಸಾಲ ತೀರಿಸಲಾಗದೆ ವ್ಯವಸಾಯಕ್ಕೆ ವಿದಾಯ ಹೇಳಿ ನಗರ ಪ್ರದೇಶಗಳಿಗೆ ವಲಸೆ ಹೋಗಿ ಸಣ್ಣ ಪುಟ್ಟ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ” ಎಂದರು.

“ಗ್ರಾಮೀಣ ರೈತಾಪಿ ಮಕ್ಕಳೂ ಕೂಡ ಹಗಲು ರಾತ್ರಿ, ಕಲ್ಲು ಮುಳ್ಳು, ಹಾವು ಚೇಳು ವಿಷ ಜಂತುಗಳ ನಡುವೆ ಜೀವದ ಹಂಗು ತೊರೆದು ವ್ಯವಸಾಯ ಕೆಲಸ ಮಾಡಿಕೊಂಡು, ಸಾರಿಗೆ ಸೌಕರ್ಯವಿಲ್ಲದೆ, ಮೂಲ ಸೌಕರ್ಯವಿಲ್ಲದ ಶಾಲೆಗಳಲ್ಲಿ ಅರೆಕಾಲಿಕ ಶಿಕ್ಷಣ ಪಡೆದು ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಜನರಲ್ ಮೆರಿಟ್‌ನಲ್ಲಿ ಸ್ಪರ್ಧೆ ಮಾಡಬೇಕಾಗಿದೆ. ಆದ್ದರಿಂದ ಕುಂಚಿಟಿಗರಿಗೆ
ಗ್ರಾಮೀಣ ಮತ್ತು ನಗರ ತಾರತಮ್ಯ ಮಾಡದೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸಬೇಕು.
ಈಗಾಗಲೆ ಕೇಂದ್ರ ಒಬಿಸಿ ಮೀಸಲಾತಿ ಇಲ್ಲದ ಆರ್ಥಿಕವಾಗಿ ಹಿಂದುಳಿದ ಕುಂಚಿಟಿಗರಿಗೆ ಇಡಬ್ಲ್ಯೂಎಸ್‌ ಮೀಸಲಾತಿ ಇತ್ತೀಚೆಗೆ ಸಿಕ್ಕಿದ್ದು, ಈಗ ಒಕ್ಕಲಿಗರಿಗೆ ಅನುಸರಿಸಿದ ಮಾದರಿಯಲ್ಲಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಒಬಿಸಿ ಮೀಸಲಾತಿ ಕಲ್ಪಿಸುವ ಮಾತು ಕೇಳಿಬರುತ್ತಿದೆ. ಯಾವುದೇ ಕಾರಣಕ್ಕೂ ಅಂತಹ ತೀರ್ಮಾನ ಮಾಡಬಾರದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಹಿಂದುಳಿದ ವರ್ಗಗಳ ಪರಮೋಚ್ಚ ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮತ್ತು ಕುಂಚಿಟಿಗರ ಹಿರಿಯ ಸಂಸದೀಯ ಪಟು ಮುತ್ಸದ್ದಿ ರಾಜಕಾರಣಿ ಟಿ ಬಿ ಜಯಚಂದ್ರ ಅವರು ಯಾವುದೇ ಕಾರಣಕ್ಕೂ ಗ್ರಾಮೀಣ ಮತ್ತು ನಗರ ಕುಂಚಿಟಿಗರೆಂದು ತಾರತಮ್ಯ ಮಾಡದೆ ಸಮಸ್ತ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಕಲ್ಪಿಸಲು ಶಿಫಾರಸು ಮಾಡಬೇಕು” ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಒಬಿಸಿ ಮೀಸಲಾತಿ ಕೊಟ್ಟರೆ ನಗರ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ಮತ್ತು ಇಡಬ್ಲ್ಯೂಎಸ್‌ ಮೀಸಲಾತಿ ಎರಡೂ ಕೈತಪ್ಪಿ ಹೋಗಿದ್ದು, ಜನರಲ್ ಮೆರಿಟ್‌ನಲ್ಲಿ ಬರುತ್ತಾರೆ. ಮತ್ತೊಮ್ಮೆ ಕುಂಚಿಟಿಗರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುಲಿರಂಗನಾಥ್, ಕುಬೇರಪ್ಪ, ಶಶಿಕಲಾ, ಜಯಪ್ರಕಾಶ, ಚಂದ್ರಗಿರಿ, ಅವಿನಾಶ್, ಡಿ.ಹನುಮಂತರಾಯ, ಪವನ್, ವಿಶ್ವನಾಥ ಸೇರಿದಂತೆ ಇತರರು ಇದ್ಧರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...