ಚಿತ್ರದುರ್ಗ | ಗೊಲ್ಲಹಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ; ಅಪರ ಜಿಲ್ಲಾಧಿಕಾರಿಗೆ ಮನವಿ

Date:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಎಸ್‌ಸಿ ಕಾಲೋನಿಗೆ ಮೂಲಸೌಕರ್ಯ ಕೊರತೆಯಾಗಿದ್ದು, ಇಲ್ಲಿನ ನಿವಾಸಿಗಳ ಬದುಕು ಹೈರಾಣಾಗಿದೆ. ಹಾಗಾಗಿ ಶೀಘ್ರವೇ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಆದಿಕರ್ನಾಟಕ ಜನಾಂಗದವರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಬಾಳಿ ಬದುಕಿದ ಮನೆ ಅಕ್ಕಪಕ್ಕದ ಖಾಲಿ ನಿವೇಶನ ಜಾಗಗಳನ್ನು ರಾಷ್ಟ್ರೀಯ ಹೆದ್ದಾರಿಗೆ ಬಿಟ್ಟುಕೊಟ್ಟು ಈಗ ಬಹುತೇಕ ಮೂಲ ಸೌಕರ್ಯಗಳಿಲ್ಲದ ಜಾಗಕ್ಕೆ ಬಂದು ಅತಂತ್ರರಾಗಿದ್ದೇವೆ. ಇರುವುದನ್ನು ಬಿಟ್ಟುಕೊಟ್ಟು ಇಲ್ಲದಿರುವುದನ್ನು ಹುಡುಕುವಂತಾಗಿದೆ ನಮ್ಮ ಬದುಕು. ಹಾಗಾಗಿ ನಮಗೆ ಚರಂಡಿ, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಶೀಘ್ರವೇ ಕಲ್ಪಿಸಿ” ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆ ಅಗಲೀಕರಣಕ್ಕಾಗಿ ಮನೆ, ಖಾಲಿ ನಿವೇಶನಗಳನ್ನು ಬಿಟ್ಟುಕೊಟ್ಟು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಬದಲಿಯಾಗಿ ನಿವೇಶನಕ್ಕೆ ಗೋಮಾಳದಲ್ಲಿ ಮೂರು ಎಕರೆ ಜಮೀನು ಮಂಜೂರಾಗಿದ್ದು, ಈವರೆಗೂ ಹಕ್ಕುಪತ್ರಗಳನ್ನು ನೀಡಿಲ್ಲ. ಶಾಶ್ವತ ಹಕ್ಕುಪತ್ರ, ಖಾತೆಯಂತಹ ದಾಖಲಾತಿಗಳು ಇಲ್ಲದೆ ಬೇರೆ ಬೇರೆ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ಜೀವಿಸುತ್ತಿದ್ದೇವೆ. ರಾತ್ರಿಯಾದರೆ ಮಕ್ಕಳು, ಮುದುಕರು, ಮಹಿಳೆಯರು, ಪುರುಷರು ಬೆಳಕಿಲ್ಲದೆ ಹೊರಬರಲು ಹೆದರುವ ಸ್ಥಿತಿ ಉಂಟಾಗಿದೆ. ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಂಡು ವಾಸಮಾಡುವಂತಾಗಿದೆ. ಕೂಡಲೇ ವಿದ್ಯುತ್ ಸೇರಿದಂತೆ ಇತರ ವ್ಯವಸ್ಥೆಯಾಗಬೇಕು” ಎಂದು ಗೊಲ್ಲಹಳ್ಳಿಯ ಎಸ್‌ಸಿ ಕಾಲೋನಿ ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದೇಶಾದ್ಯಂತ ಮುಸ್ಲಿಂ ಅಲ್ಪಸಂಖ್ಯಾತರ ಮೇಲೆ ದಾಳಿ; ಕ್ರಮಕ್ಕೆ ಆಗ್ರಹ

ಈ ವೇಳೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ ಟಿ ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ನಿಸಾರ್, ಗೊಲ್ಲಹಳ್ಳಿ ನಿವಾಸಿಗಳಾದ ರಂಗಮ್ಮ, ಮಂಜಮ್ಮ, ಯಶೋಧಮ್ಮ, ಗುರುಸಿದ್ದಮ್ಮ, ನಿರ್ಮಲ, ಜಯಣ್ಣ, ರಂಗಸ್ವಾಮಿ, ಹಿಮಂತರಾಜು, ಹರೀಶ, ತಿಪ್ಪಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...