ಚಿತ್ರದುರ್ಗ | ಮುಗ್ಧರನ್ನು ಪ್ರಬುದ್ಧರನ್ನಾಗಿಸಲು ಶಿಕ್ಷಣ ಕ್ರಾಂತಿ ಮಾಡಿದವರು ಮಂಜರಿ ಹನುಮಂತಪ್ಪ: ಭೋವಿ ಗುರುಪೀಠ ಶ್ರೀ

Date:

ಮುಗ್ಧರನ್ನು ಪ್ರಭುದ್ಧರನ್ನಾಗಿಸಲು ಶಿಕ್ಷಣಕ್ರಾಂತಿ ಮಾಡಿದವರು ಭೋವಿ ಕುಲತಿಲಕ ದಿ. ಮಂಜರಿ ಹನುಮಂತಪ್ಪ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನುಡಿದರು.

ಚಿತ್ರದುರ್ಗ ನಗರದ ತ ರಾ ಸು ರಂಗಮಂದಿರದಲ್ಲಿ ಜರುಗಿದ ಮಂಜರಿ ಹನುಮಂತಪ್ಪರವರ ಸ್ಮರಣೋತ್ಸವ ಹಾಗೂ ಎಸ್ ಜೆ ಎಸ್ ಜ್ಞಾನ ಸಂಭ್ರಮದ ಸಮಾರೋಪ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದ ಅವರು, “ಮಂಜರಿ ಹನುಮಂತಪ್ಪ ಅವರು ಶಿಕ್ಷಣ ಹಾಗೂ ಸಂಘಟನೆ ಮಹತ್ವದ ಅರಿತು, ಅಂದು ನೆಟ್ಟಿದ್ದ ಸಸಿಯ ಫಲವನ್ನು ಇಂದು ಸದೃಢ ಸಂಘಟನೆ, ನೌಕರರು ಮತ್ತು ಮೀಸಲಾತಿಯ ಫಲಾನುಭವಿಗಳಾಗಿ ಇಂದಿನ ಪೀಳಿಗೆ ಅನುಭವಿಸುತ್ತಿದೆ” ಎಂದರು.

“ಗೌರವಯುತ, ಸ್ವಾವಲಂಬಿ ಬದುಕು ಹಾಗೂ ಆಧುನಿಕ ಯುಗದಲ್ಲಿ ಕುಲವೃತ್ತಿಗಳಿಂದ ಸ್ಪರ್ಧಾತ್ಮಕ ವೃತ್ತಿ ಬದುಕಿಗೆ ಶಿಕ್ಷಣವೆಂಬುದು ಭದ್ರ ಅಡಿಪಾಯವಾಗಿದೆ ಎಂಬುದನರಿತು ಶಿಕ್ಷಣ ಸಂಸ್ಥೆ ಪ್ರಾರಂಭಿಸಿ ನೂರಾರು ಮಕ್ಕಳಿಗೆ ಜ್ಞಾನಜ್ಯೋತಿ ಬೆಳಗಿ, ಆ ಮನೆಗಳ ನಂದಾದೀಪಾ ಹಚ್ಚಿದವರು ಶಿಕ್ಷಣ ಪ್ರೇಮಿ ಹನುಮಂತಪ್ಪರವರು. ಅಸಂಘಟಿತ ಅರೆ ಅಲೆಮಾರಿ ಸಮಾಜವಾದ ಭೋವಿ ಸಮಾಜಕ್ಕೆ ಪ್ರಪ್ರಥಮ ಸಂಘಟಿತ ರಾಜ್ಯಸಂಘವನ್ನು ಕಟ್ಟಿ, ಸಾಂಘಿಕ ಶಕ್ತಿಯನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತದ ಪ್ರಥಮ ಪ್ರಧಾನ ಮಂತ್ರಿಗಳ ಮುಂದೆ ಪ್ರಕಾಶಿಸಿದವರು ಮಂಜರಿ ಹನುಮಂತಪ್ಪ ಹಾಗೂ ತಂಡದವರು. ಮಂಜರಿ ಹನುಮಂತಪ್ಪ ಅಖಂಡ ಕರ್ನಾಟಕದ ಭೋವಿ ಸಮಾಜಕ್ಕೆ ಏಕರೂಪದ ಮೀಸಲಾತಿಗಾಗಿ ಹೋರಾಡಿ ಪ್ರಾದೇಶಿಕ ನ್ಯಾಯ ನೀಡಿ, ಸ್ತ್ರೀಕುಲಕ್ಕೆ ಶಿಕ್ಷಣದ ಅವಕಾಶ ನೀಡಿದವರು”ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಡಗಿನ ಮಹಾಂತ ಶ್ರೀಗಳು ಮಾತನಾಡಿ “ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ಅವರು ಭವಿಷ್ಯದ ಸತ್ಪ್ರಜೆಗಳಾಗಲು ಮಾರ್ಗದರ್ಶನ ನೀಡಬೇಕು. ಶಿಕ್ಷಣ ಕೇವಲ ಸರ್ಟಿಫಿಕೇಟ್ ತೆಗೆದುಕೊಳ್ಳಲು, ಕೆಲಸ ಪಡೆಯಲು ಸೀಮಿತವಾಗಬಾರದು. ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವ ಶಿಕ್ಷಣದ ಅವಶ್ಯಕತೆ ಇಂದಿನ ಸಮಾಜಕ್ಕೆ ತುರ್ತು ಅಗತ್ಯವಿದೆ. ವ್ಯಕ್ತಿ ಮತ್ತು ಸಮಾಜದ ಅಂಧಕಾರವನ್ನು ತೊಲಗಿಸುವ ಬೆಳಕಾದ ಜ್ಞಾನದ ಜೊತೆಯಲ್ಲಿ ಸಂಸ್ಕಾರ ಅಳವಡಿಸಿಕೊಂಡಾಗ ನಮ್ಮ ಸಂಸ್ಕೃತಿ ಭವ್ಯ ಹಾಗೂ ದಿವ್ಯತೆಯಿಂದ ಕೂಡಿರುತ್ತದೆ” ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್ ಮಾತನಾಡಿ, “ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಇವರನ್ನು ಉತ್ತಮವಾದ ಸಂಸ್ಕಾರಯುತವಾದ ಪ್ರಜೆಗಳನ್ನಾಗಿ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಜೀವನವನ್ನು ಸುಗಮವಾಗಿಸಬೇಕಿದೆ. ಶ್ರೀಗಳು ತಮ್ಮ ಸಮಾಜದ ಕಾರ್ಯದ ಜೊತೆಗೆ ಶಿಕ್ಷಣದಲ್ಲಿಯೂ ಸಹಾ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಮೂಲಕ ಎಲ್ಲರನ್ನು ಜ್ಞಾನವಂತರನ್ನಾಗಿ ಮಾಡುತ್ತಿದ್ದಾರೆ” ಎಂದರು.

ಕರ್ನಾಟಕ ಸರ್ಕಾರದ 2023ನೇ ಸಾಲಿನ ಶಿಲ್ಪಕಲಾ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿಲ್ಪಿ ಶಿವಶಂಕರ ಅವರಿಗೆ ಹಾಗೂ 2024 ಶಿಲ್ಪಕಲಾ ಅಕಾಡಮಿ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಶ್ರೀನಿವಾಸ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆ

ಕಾರ್ಯಕ್ರಮದಲ್ಲಿ ಯಾದವ ಗುರುಪೀಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಭೋವಿ ಗುರುಪೀಠದ ಕಾರ್ಯನಿರ್ವಾಹಣಾಧಿಕಾರಿ ಗೌನಹಳ್ಳಿ ಗೋವಿಂದಪ್ಪ, ಭೋವಿ ಸಂಘದ ಕಾರ್ಯದರ್ಶಿ ಲಕ್ಷ್ಮಣ, ಜಗಳೂರಿನ ಅರ್ಜುನಪ್ಪ, ಉಡುಪಿಯ ರಾಜು, ಕಂಪ್ಲಿಯ ಮೌನೇಶ, ವಿಧ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...