ಚಿತ್ರದುರ್ಗ | ಮೊಳಕಾಲ್ಮೂರು ಶಾಸಕರು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ: ಮಾಜಿ ಶಾಸಕ ತಿಪ್ಪೇಸ್ವಾಮಿ ಆರೋಪ

Date:

ರಾಜ್ಯದ ಅತಿ ಹಿಂದುಳಿದ ಮೊಳಕಾಲ್ಮೂರು ಕ್ಷೇತ್ರದಲ್ಲಿ ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕಿದ್ದ ಶಾಸಕರಾದ ಎನ್‌ ವೈ ಗೋಪಾಲಕೃಷ್ಣ ಯಾವುದಕ್ಕೂ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಸಕರು ಜನರ ಸಮಸ್ಯೆಗಳಿಗೆ ಗಮನ ಹರಿಸುತ್ತಿಲ್ಲ. ಬದಲಾಗಿ ಕೇವಲ ಶಾಸಕರ ಆಪ್ತರಿಗೆ, ಟೆಂಡ‌ರ್‌ದಾರರ ಜೊತೆ ಸೇರಿಕೊಂಡು ಹಣ ಮಾಡುವ ಉದ್ದೇಶದಿಂದ ಮಾತ್ರ ಶಾಸಕರಾಗಿದ್ದಾರೆಯೇ ಹೊರತು ಕ್ಷೇತ್ರದ ಜನರ ಸ್ಪಂದನೆಗಲ್ಲ. ಕ್ಷೇತ್ರ ಉದ್ದಾರ ಮಾಡಲು ಅಲ್ಲ ಎಂದು ಮಾಜಿ ಶಾಸಕ ದೂರಿದರು.

“ಕ್ಷೇತ್ರದ ಜನರು ಗುಳೆ ಹೋಗುವಂತಹ ಪರಿಸ್ಥಿತಿ ಇದೆ, ರೈತರು ಸಂಕಷ್ಟದಲ್ಲಿದ್ದಾರೆ. ರೈತರ ಬೆಳೆಗಳನ್ನು ಸಮೀಕ್ಷೆ ಮಾಡಿಸಿ, ಬೆಳೆ ನಷ್ಟಕ್ಕೆ ಪರಿಹಾರ ಒದಗಿಸಬೇಕಿತ್ತು. ಆದರೆ ರಾಜ್ಯ ಸರ್ಕಾರ ಪರಿಹಾರ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇನ್ನೂ ಗ್ಯಾರಂಟಿ ಯೋಜನೆಗಳ ಪೂರ್ವದಲ್ಲಿ ಅನುದಾನ ಒದಗಿಸುತ್ತೇವೆ. ರಾಜ್ಯದ ಅಭಿವೃದ್ಧಿಗೆ ಕಂಕಣ ಬದ್ದರಾಗಿದ್ದೇವೆ ಎನ್ನುವ ಇವರುಗಳು, ಎರಡು ವರ್ಷದಲ್ಲಿ ಕ್ಷೇತ್ರದಲ್ಲಿ ಯಾವುದೇ ಜನಪರ ಯೋಜನೆಗಳ ಕಾರ್ಯಕ್ರಮ ಮಾಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಪ್ರೇಮಿಗಳನ್ನು ಒಂದುಗೂಡಿಸಿದ ಭೀಮ್ ಆರ್ಮಿ ಸಂಘಟನೆ

“ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಮೊಳಕಾಲ್ಮೂರು ಕ್ಷೇತ್ರಕ್ಕೆ ವರ್ಗಾವಣೆ ಮಾಡಿಸಿಕೊಳ್ಳುವುದು ಏಕೆ? ಚಿತ್ರದುರ್ಗ ಜಿಲ್ಲೆಯಲ್ಲಿ ದಕ್ಷ ಅಧಿಕಾರಿಗಳಿಲ್ಲವೇ? ಇದರ ಹಿಂದಿನ ಉದ್ದೇಶವಾದರೂ ಏನು? ಕ್ಷೇತ್ರದ ವ್ಯಾಪ್ತಿಯಲ್ಲಿ ಮರಳು ದಂಧೆ ಹೇರಳವಾಗಿ ನಡೆಯುತ್ತಿದೆ. ಇನ್ನೂ ಭೂಮಿಯನ್ನು ಅಕ್ರಮವಾಗಿ ಕಬಳಿಸಿದವರ ಬಗ್ಗೆ ಇದುವರೆಗೆ ಕ್ರಮ ಜರುಗಿಸಿಲ್ಲ. ತಹಶೀಲ್ದಾರ್ ಹಾಗೂ ಮೇಲಿನ ಅಧಿಕಾರಿಗಳು ಕೂಡ ಇವರ ಕಪಿ ಮುಷ್ಠಿಯಲ್ಲಿ ಇದ್ದಾರೆಯೇ ಎಂಬುದು ಅನುಮಾನ ಕ್ಷೇತ್ರದ ಜನರಲ್ಲಿ ಕಾಡುತ್ತಿದೆ ಎಂದು ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...