ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

Date:

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ಜರುಗಿತು.

ದುಃಖ, ಬಲಿದಾನ, ಶೋಕದ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ. ಅದಕ್ಕಾಗಿಯೇ ಮೊಹರಂ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಒಂಬತ್ತು ದಿನಗಳ ಕಾಲ ಆಚರಿಸುವ ಮೊಹರಂ ಹಬ್ಬದ ಕೊನೆ ಹತ್ತನೆಯ ದಿನವೇ ಪಂಜ ಮೆರವಣಿಗೆ ಹೊರಡುತ್ತದೆ. ಪೀರ್, ಅಲಿ ದೇವರು ಸೇರಿದಂತೆ ಇನ್ನಿತರ ದೇವರುಗಳನ್ನು ವಿಶೇಷವಾಗಿ ಅಲಂಕರಿಸಿ ಮೆರವಣಿಗೆಯನ್ನು ಮಾಡಲಾಗುತ್ತದೆ. ಹಬ್ಬದ ವಿಶೇಷವಾಗಿ ಸಾರ್ವಜನಿಕರಿಗೆ ತಿನಿಸು ಮತ್ತು ಪಾನೀಯಗಳನ್ನು ವಿತರಿಸಲಾಗುತ್ತದೆ.

ಉಪವಾಸ ಆಚರಿಸುವ ಸಂಕಲ್ಪ ಮಾಡುವುದು ಹಬ್ಬದ ವಿಶೇಷ. ಚೇಳುಗುಡ್ಡ, ಬುರುಜನಹಟ್ಟಿ, ಮಠದ ಕುರುಬರಹಟ್ಟಿಯಿಂದ ಮೆರವಣಿಗೆ ಮೂಲಕ ಬಂದ ಪಂಜಗಳು ಸೈಯದ್ ನಾ ಹಜರತ್ ಇಮಾಂ ಹಸನ್ ಸೈಯದಾನಾ, ಹಜರತ್ ಇಮಾಂ ಹುಸೇನ್ ಅಶೋರಖಾನ್‌ ಇವರುಗಳ ದರ್ಗಾ ಬಳಿ ತೆರಳಿ ಪೂಜೆ ಸಲ್ಲಿಸಿದವು. ಗಾಂಧಿವೃತ್ತದಿಂದ ಹಿಡಿದು ದೊಡ್ಡಪೇಟೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ಹಿಂದೂ-ಮುಸಲ್ಮಾನರು ಜಮಾಯಿಸಿ ಮೆರವಣಿಗೆ ವೀಕ್ಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಗುಂಪು ಗುಂಪಾಗಿ ಜಮಾಯಿಸಿದ್ದ ಯುವಕರು ಡೊಳ್ಳು, ತಮಟೆಗಳನ್ನು ಬಾರಿಸಿ ಕುಣಿದು ಕುಪ್ಪಳಿಸಿ ಮೊಹರಂ ಆಚರಿಸಿದರು.

ಬೃಹತ್ ಹಾರಗಳು, ಹೂವು ಮತ್ತು ಸುನೇರಿಗಳಿಂದ ಅಲಂಕರಿಸಿದ್ದ ಪಂಜಗಳ ಮೇಲೆ ಜನ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸುತ್ತಿದ್ದರೆ, ಇನ್ನು ಕೆಲವರು ಕೆಳಗೆ ಬಿದ್ದ ಮಂಡಕ್ಕಿಗಳನ್ನು ಆಯ್ದುಕೊಳ್ಳುತ್ತಿದ್ದಿದ್ದು ಮೊಹರಂ ಹಬ್ಬದ ವಿಶೇಷವಾಗಿತ್ತು.

ಈ ಸುದ್ದಿ ಓದಿದ್ದೀರಾ? ‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ಚಿತ್ರದುರ್ಗ ನಗರದ ಮುಸ್ಲಿಂ ಹಿರಿಯರೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಕೆಲವು ವರ್ಷಗಳ ಹಿಂದೆ ಇದೇ ರೀತಿಯಾಗಿ ಎಲ್ಲರೂ ಒಟ್ಟಾಗಿ ಸೇರಿ ಮೊಹರಂ ಆಚರಿಸುತ್ತಿದ್ದೆವು. ಇತ್ತೀಚೆಗೆ ಅದಕ್ಕೆ ಸ್ವಲ್ಪ ಅಡೆತಡೆ ಉಂಟಾಗಿತ್ತು.‌ ಈಗ ಮತ್ತೆ ಎಲ್ಲ ಬಾಂಧವರು ಸೇರಿ ಮೊಹರಂ ಆಚರಿಸುತ್ತಿರುವುದು ಸಂತಸವನ್ನು ಇಮ್ಮಡಿಗೊಳಿಸಿದೆ” ಎಂದು ಪ್ರತಿಕ್ರಿಯಿಸಿದರು.

ಮೊಹರಂ ಹಬ್ಬದ ಪ್ರಯುಕ್ತ ದೊಡ್ಡಪೇಟೆ ಹಾಗೂ ಗಾಂಧಿ ವೃತ್ತದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...