ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

Date:

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು, ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಟಿಕೆಟ್ ಕೈತಪ್ಪಿದೆ ಎಂದು ಆರೋಪಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗುರುವಾರ ಮಧ್ಯಾಹ್ನದವರೆಗೂ ನನ್ನ ಮಗನ ಹೆಸರು ಫೈನಲ್‌ ಆಗಿತ್ತು. ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿಲ್ಲ, ಅಂದ್ರೆ ಕ್ಯಾಂಪೇನ್ ಮಾಡಲ್ಲವೆಂದು ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿಯೇ, ನನ್ನ ಮಗನಿಗೆ ಟಿಕೆಟ್ ತಪ್ಪಿಸಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನನ್ನ ಮಗನಿಗೆ 2019ರಲ್ಲಿ ಟಿಕೆಟ್ ಕೇಳಿದ್ದೆ, ಆಗ ಮುಂದಿನ ಸಾರಿ ಎಂದು ಹೇಳಿದ್ದರು. ನಾರಾಯಣ ಸ್ವಾಮಿ ಪರ ಪ್ರಚಾರ ಮಾಡಿ, 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದೆವು. 2024ರ ಎಲೆಕ್ಷನ್‌ನಲ್ಲಿ ಟಿಕೆಟ್ ಕೊಡ್ತೇವೆ ಎಂದು ಸಂತೋಷ್ ಅವರು ಕೂಡಾ ಹೇಳಿದ್ದರು. ಇದೇ ಗೋವಿಂದ ಕಾರಜೋಳ ನನ್ನ ಮಗನ ಓಡಾಡಲು ಹೇಳಿದ್ದರು. ಪಕ್ಷದ ಸಭೆಯಲ್ಲಿ ಕೂಡಾ ಹೊರಗಿನ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದಾಗಿ ಧ್ವನಿ ಎತ್ತಿದ್ದೆ. ಸರ್ವೇ ಬಂದವರಿಗೆ ನಮ್ಮ ಜಿಲ್ಲೆಯವರಿಗೆ ಟಿಕೆಟ್ ನೀಡಿ ಎಂದಿದ್ದೆ. ಮೋದಿ, ಅಮಿತ್ ಷಾ ಸರ್ವೇಯಲ್ಲಿ ರಘುಚಂದನ್ ಹೆಸರಿತ್ತು. ಸಿಇಸಿ ಕಮಿಟಿಯಲ್ಲಿ ನನ್ನ ಮಗನ ಹೆಸರು ಫೈನಲ್ ಆಗಿತ್ತು. ನಿನ್ನೆ ಸಂಜೆ ಯಡಿಯೂರಪ್ಪ ಅವರಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ” ಎಂದು ಯಡಿಯೂರಪ್ಪರವರ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಡಿಯೂರಪ್ಪ ಕೆ.ಜೆ ಪಿ.ಕಟ್ಟಿದ್ದಾಗ ಅವರ ಸಮಾಜದವರು ಬರ್ಲಿಲ್ಲ. ನಾನು 6 ತಿಂಗಳ ಮುಂಚೆಯೇ ನಾನು ರಾಜೀನಾಮೆ ಕೊಟ್ಟಿದ್ದೆ. ನಾನು ಇವರನ್ನ ಎಂದೂ ಕೈಬಿಟ್ಟು ಹೋಗಿರಲಿಲ್ಲ. ನಮಗೆ ಯಡಿಯೂರಪ್ಪ ಈ ಬಹುಮಾನ ಕೊಟ್ಟಿದ್ದಾರೆ ಎಂದು ಚಂದ್ರಪ್ಪ ನೊಂದು ನುಡಿದರು.

ಕಾರಜೋಳ ಯಡಿಯೂರಪ್ಪ ನಡುವೆ ಅದೇನು ಸಂಮ್ತಿಂಗ್ ಇದೆಯೋ ಗೊತ್ತಿಲ್ಲ. 550 ಕಿಲೋಮೀಟರ್ ದೂರ ವ್ಯಕ್ತಿಗೆ ಟಿಕೆಟ್ ಕೊಡುವಂತದ್ದು ಏನಿತ್ತು. ನಮಗೆ ತುಂಬಾನೇ ಅನ್ಯಾಯ ಮಾಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದ ನಂತರ ಮುಂದಿನ ನಿರ್ಧಾರ. ವಿಜಯೇಂದ್ರ ಯುವಕ ಎಂದು ಅಧ್ಯಕ್ಷ ಮಾಡಿದ್ದಾರೆ. ನನ್ನ ಮಗನಿಗೆ ಟಿಕೆಟ್ ಕೊಡ್ಲಿಲ್ಲ. ನಮ್ಮ ಸಮಾಜದ ಎಲ್ಲರೂ ಕೈಬಿಟ್ಟು ಹೋಗಿದ್ದಾರೆ, ನಾನು ಮಾತ್ರ ಆಧಾರವಾಗಿದ್ದೆ. ಈಗ ನಮ್ಮ ಸಮಾಜ ಮುಂದಿನ ಹೆಜ್ಜೆ ಇಡುತ್ತದೆ. ಮೋದಿ ದೇಶ & ರಾಜ್ಯಕ್ಕೆ ಅಗತ್ಯ ಎಂದು ನಾನು ಭಾವಿಸಿದ್ದೇನೆ. ಬೊಮ್ಮಾಯಿ ಸಂಪುಟದಲ್ಲಿ ನನಗೆ ಅನ್ಯಾಯ ಮಾಡಿದ್ರು. ಹಗಲು ರಾತ್ರಿ ಯಡಿಯೂರಪ್ಪ ಮನೆಗೆ ನಾನು ದುಡಿದೆ, ನಾನು ಏನು ಅನ್ಯಾಯ ಮಾಡಿದ್ದೆ. ನಿನ್ನೆ ಮಧ್ಯಾಹ್ನ ಘೋಷಣೆ ಮಾಡ್ತಾ ಇದ್ರು, ಇದನ್ನ ತಪ್ಪಿಸಿದ್ದಾರೆ ಎಂದು ಆರೋಪ ಮಾಡಿದರು.

ನಮ್ಮ ಕಾರ್ಯಕರ್ತರ ಸಭೆ ಬಳಿಕ ಮುಂದಿನ ತೀರ್ಮಾನ. ನೂರಾರು ಬಾರಿ ಯಡಿಯೂರಪ್ಪ ಜೊತೆ ಚರ್ಚೆ ಮಾಡಿದ್ದೆ, ಅವರು ಕಾಳಜಿ ತೋರಿಲ್ಲ. ಯಡಿಯೂರಪ್ಪ ಕಿಚನ್ ಕ್ಯಾಬಿನೆಟ್ ನಲ್ಲಿ ಇದಿದ್ದಕ್ಕೆ ಈ ಬಹುಮಾನ. ಚುನಾವಣೆಗೆ ನಾನು ನಿಂತಾಗ ನಯಾ ಪೈಸೆ ಪಾರ್ಟಿ ಫಂಡ್ ಕೊಡ್ಲಿಲ್ಲ ಎಂದರು.

ಚಿತ್ರದುರ್ಗದಲ್ಲಿ ಮಹಾನ್ ನಾಯಕ ಒಬ್ಬ ಇದ್ದಾನೆ, ಅವನದ್ದು ಜಾಸ್ತಿ ಆಗಿದೆ,  ಈಗಾಗಲೇ ಶಾಸ್ತಿ ಆಗಿದೆ, ಮುಂದಿಯೂ ಶಾಸ್ತಿ ಆಗುತ್ತದೆ. ನಮ್ಮ ಪಕ್ಷದಲ್ಲಿ ಸೋತವರನ್ನ ಕರೆತಂದು ಎಂಪಿ ಮಾಡಿದ್ವಿ ಅಷ್ಟು ನಿಯತ್ತಿಂದ ಮಾಡಿದ್ದೇವೆ, ನಾನು ನಂಬಿಸಿ ಮೋಸ ಮಾಡಲ್ಲ ಆ ಮಹಾನ್ ನಾಯಕನನ್ನ ಅರ್ಥ ಮಾಡಿಕೊಂಡು ಹೇಳುತ್ತೇನೆ. ಮದಕರಿ ಕೋಟೆಗೆ ನುಗ್ಗಲು ಸಂಧಿ ತೋರಿಸಲು ಒಬ್ಬ ಇರ್ಬೇಕು, ಅಂಥವರು ಇದ್ದಾರೆ ಒಳಗೆ ಬಂದಾಗ ಏನಾಯ್ತು, ಮುಂದೆ ಮಹಾನ್ ನಾಯಕನಿಗೆ ಅದೇ ಆಗುತ್ತೆ ಪರೋಕ್ಷವಾಗಿ ಮಾಜಿ ಶಾಸಕ ತಿಪ್ಪಾರೆಡ್ಡಿ ವಿರುದ್ದ ಚಂದ್ರಪ್ಪ ಗುಡುಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...