ಚಿತ್ರದುರ್ಗ | ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ; ಮೊಳಕಾಲ್ಮುರು ಪ.ಪಂ. ಅಧಿಕಾರಿಯ ತಲೆದಂಡ

Date:

ಸರ್ಕಾರದಿಂದ ಬರ ಘೋಷಣೆಯಾದ ದಿನದಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ, ಇಲ್ಲವಾದರೆ ಸೂಕ್ತ ಕ್ರಮ ಜರುಗಿಸಲಾಗುತ್ತದೆಂದು ಚಿತ್ರದುರ್ಗ ಜಿಲ್ಲಾಡಳಿತ ಸರ್ಕಾರ ಎಚ್ಚರಿಕೆ ನೀಡಿತ್ತು. ಆದರೂ ಸಹ ಜಿಲ್ಲೆಯ ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್‌ ವಿ ಮಂಜುನಾಥ್‌ ನಿರ್ಲಕ್ಷ್ಯ ತೋರಿದ್ದರು.

ಕುಡಿಯುವ ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ಹಾಗೂ ಖಾತೆ ಬದಲಾವಣೆ ಅರ್ಜಿಗಳನ್ನು ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿದ್ದರು. ಈ ಎಲ್ಲವನ್ನೂ ಗಮನಿಸಿದ ಜಿಲ್ಲಾಡಳಿತ ಎಲ್‌ ವಿ ಮಂಜುನಾಥ್‌ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಮುಖ್ಯಾಧಿಕಾರಿ ಮಂಜುನಾಥ್‌ ಇಲ್ಲಿಗೆ ವರ್ಗಾವಣೆಯಾಗಿ ಬಂದಾಗಿನಿಂದಲೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಉಡಾಫೆ ಉತ್ತರ ನೀಡುತ್ತಾರೆ. ನಾಗರಿಕರಿಗೆ ಬೇಕಾಬಿಟ್ಟಿ ಉತ್ತರ ನೀಡಿ ಕಳುಹಿಸುತ್ತಾರೆಂದು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರು ಆರೋಪಿಸಿದ್ದರು. ಈಚೆಗೆ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿಯನ್ನೂ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಡಿಯುವ ನೀರಿಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದಾಸೀನ ತೋರಿರುವ ಜತೆಗೆ ಈ ಬಗ್ಗೆ ಪಂಚಾಯಿತಿ ಸಿಬ್ಬಂದಿ ಮಾತಿಗೂ ಸ್ಪಂದನೆ ನೀಡುತ್ತಿರಲಿಲ್ಲ. ಖಾತೆ ಬದಲಾವಣೆ ಮತ್ತು ಇ-ಸ್ವತ್ತು ಮಾಡಿಕೊಡಲು ತಹಶೀಲ್ದಾರ್‌ ಅನುಮತಿ ಅಗತ್ಯ. ಆಸ್ತಿಗಳು ಗ್ರಾಮ ಠಾಣಾ ಹೊರಗಡೆ, ಒಳಗಡೆ ಎಂಬ ವಿಷಯ ಮುಂದಿಟ್ಟುಕೊಂಡು ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವುದು ಕಂಡುಬಂದಿರುವುದನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿ ಟಿ ವೆಂಕಟೇಶ್‌ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೈತ್ರಿ ಪಾಲಿಸಲು ಬಿಜೆಪಿ ನಿರ್ದೇಶನ, ಎನ್‌ಡಿಎ ಅಭ್ಯರ್ಥಿಗೆ ಬೆಂಬಲ: ಮಾಜಿ ಶಾಸಕ ಶಿವಶಂಕರ್

“ಮಾರ್ಚ್‌ 21ರಂದು ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಇ-ಮೇಲ್‌ ಮೂಲಕ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದರೂ ಸ್ಪಂದನೆ ನೀಡದ ಜತೆಗೆ ಮೊಬೈಲ್‌ ಸಂಪರ್ಕಕ್ಕೂ ಸಿಗದ ಕಾರಣ, ಅಂತಿಮವಾಗಿ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದಾಗ ನಾಗರಿಕರು ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಪರಿಗಣಿಸಿ ಅಮಾನತು ಮಾಡಲಾಗಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...