ಚಿತ್ರದುರ್ಗ | ಮೂಲಸೌಕರ್ಯ ಪೂರೈಕೆಗೆ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಆಗ್ರಹ

Date:

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಭೂಮಿ, ವಸತಿ ಹಾಗೂ ಮೂಲ ಸೌಲಭ್ಯ ನೀಡಬೇಕೆಂದು ಅಲೆಮಾರಿ, ಅರೆಅಲೆಮಾರಿ ಒಕ್ಕೂಟದ (ಎಸ್‌ಸಿ/ಎಸ್‌ಟಿ) ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, “ಜಿಲ್ಲೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಲ್ಲಿ ಸುಮಾರು 50,000ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ನಾಗರಿಕ ಮೂಲಭೂತ ಸೌಲಭ್ಯಗಳಿಂದ ವಂಚಿತ ಸಮುದಾಯವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುವ ಅಲೆಮಾರಿಗಳಿಗೆ ಭೂಮಿ, ವಸತಿ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ರಾಜಕೀಯ ವ್ಯವಸ್ಥೆ ಸೇರಿದಂತೆ ಯಾವುದೇ ಸ್ಥನಮಾನಗಳು ಇಲ್ಲದಂತಾಗಿದೆ. ಅಲೆಮಾರಿಗಳು ಊರಿಂದ ಊರಿಗೆ ಅಲೆದು ಭಿಕ್ಷೆ ಬೇಡಿ ಕಲೆಗಳನ್ನು ಪ್ರದರ್ಶನ ಮಾಡಿ ಜೀವನವನ್ನು ನಡೆಸಿಕೊಂಡು ಬಂದ ಈ ನೆಲದ ಸಮುದಾಯವಾಗಿದ್ದು, ಇಂದು ಸರ್ಕಾರಿ ಸೌಲಭ್ಯಗಳು ಸೇರಿದಂತೆ ನಾಗರಿಕ ಮೂಲ ಸೌಲಭ್ಯಗಳಿಂದ ವಂಚಿತವಾಗಿರುವ ಬಹುದೊಡ್ಡ ಸಮುದಾಯವಾಗಿದೆ” ಎಂದು ಮಾಹಿತಿ ನೀಡಿದರು.

“ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 50,000 ಹೆಚ್ಚು ಜನಸಂಖ್ಯೆ ಹೊಂದಿರುವ ಅಲೆಮಾರಿಗಳಾದ ಸುಡಗಾಡು ಸಿದ್ದ, ಬುಡ್ಗಜಂಗಮ, ಸಿಳ್ಳೆಕ್ಯಾತ, ಚನ್ನದಾಸ, ಹಂದಿಜೋಗಿ, ಕೊರಚ, ಕೊರಮ ಸಮುದಾಯಗಳು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಇಂತಹ ಸಮುದಾಯಗಳು ಸರ್ಕಾರದ ಯಾವುದೇ ಸೌಲಭ್ಯಗಳಿಲ್ಲದೆ, ಬಟ್ಟೆಯಿಂದ ನಿರ್ಮಾಣ ಮಾಡಿಕೊಂಡಿರುವ ಟೆಂಟ್‌ಗಳಲ್ಲಿ ವಾಸವಿದ್ದು, ಸರ್ಕಾರ ಅಲೆಮಾರಿ ಸಮುದಾಯಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಬೇಡಿಕೆಗಳನ್ನು ಜಾರಿ ಮಾಡಬೇಕಾದ ಆದ್ಯ ಕರ್ತವ್ಯವಾಗಿದೆ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲೆಮಾರಿ ಜನಾಂಗಕ್ಕಾಗಿ ಸ್ಥಾಪನೆಯಾಗಿರುವ ನಿಗಮಕ್ಕೆ ಪ್ರತಿವರ್ಷ ₹500 ಕೋಟಿ ರೂಪಾಯಿ ನೀಡಬೇಕು. ಅಲೆಮಾರಿ ಜನಾಂಗಕ್ಕೆ ಭೂಮಿ, ವಸತಿ, ವ್ಯವಸ್ಥೆಯನ್ನು ಖಾಯಂಗೊಳಿಸಬೇಕು. ಅಲೆಮಾರಿಗಳು ವ್ಯಾಪಾರ ನಡೆಸಲು ಸರ್ಕಾರದಿಂದ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಸರ್ಕಾರದ ನಿಗಮಗಳಿಗೆ ಅಲೆಮಾರಿ ಜನಾಂಗದವರಿಗೆ ಆದ್ಯತೆ ನೀಡಬೇಕು. ಇತರೆ ಸರ್ಕಾರಿ ಸೌಲಭ್ಯಗಳು ಸೇರಿದಂತೆ ಈ ಸಮುದಾಯಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ಕಮಹಾದೇವಿ ವಿವಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ

ವಿಮುಕ್ತಿ ವಿದ್ಯಾಸಂಸ್ಥೆ ನಿರ್ದೇಶಕ ಆರ್ ವಿಶ್ವಸಾಗರ್, ಸುಡಗಾಡು ಸಿದ್ದರು ಜನಾಂಗದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಅಲೆಮಾರಿ ಸಂಘಟನೆ ಜಿಲ್ಲಾಧ್ಯಕ್ಷ ನಾಗರಾಜು, ಸಿಳ್ಳೆಕ್ಯಾತ ಮುಖಂಡರು, ಅಧ್ಯಕ್ಷರು ಮಾರಿಕಾಂಬ ಕೃಷ್ಣಪ್ಪ, ಚನ್ನದಾಸ ಜನಾಂಗ ಜಿಲ್ಲಾಧ್ಯಕ್ಷ ರಂಗಪ್ಪ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...