ಚಿತ್ರದುರ್ಗ | ಒಳಮೀಸಲಾತಿ ಜಾರಿಗೊಳಿಸದಿದ್ದರೆ ಸಿಎಂ ಮನೆಗೆ ಪಾದಯಾತ್ರೆ: ಪಾವಗಡ ಶ್ರೀರಾಮ್

Date:

ಸಾಮಾಜಿಕ ನ್ಯಾಯದ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ, ಪರಿಶಿಷ್ಟ ಜಾತಿಯ ಉಪಜಾತಿಗಳ ಮೇಲಿನ ಕಾಳಜಿ ತೋರಿಸಬೇಕು. ನೀವು ದಲಿತ ವಿರೋಧಿಯಲ್ಲ ಎನ್ನುವುದನ್ನು ನಿರೂಪಿಸಿ ಎಂದು ದಲಿತ ನಾಯಕ ಪಾವಗಡ ಶ್ರೀರಾಮ್ ಒತ್ತಾಯಿಸಿದರು.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಪಟ್ರಹಳ್ಳಿಯಿಂದ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ವರೆಗೆ ಒಳಮೀಸಲಾತಿ ಅನುಷ್ಠಾನಕ್ಕಾಗಿ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಸುಪ್ರೀಂ ಕೋರ್ಟ್ ನೀಡಿರುವ ಆದೇಶದನ್ವಯ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯದಿದ್ದಲ್ಲಿ ಸಿಎಂ ನಿವಾಸಕ್ಕೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ” ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2003ರಲ್ಲಿ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಮಠದಿಂದ ಒಳಮೀಸಲಾತಿಗಾಗಿ ಮೊದಲ ಪಾದಯಾತ್ರೆ ಪ್ರಾರಂಭವಾಗಿತ್ತು. ಮೂರು ದಶಕಗಳಿಂದಲೂ ಎಲ್ಲ ಪಕ್ಷಗಳು ಮಾದಿಗ ಜನಾಂಗವನ್ನು ರಾಜಕೀಯಕ್ಕಾಗಿ ಬಳಸಿಕೊಂಡು ಒಳಮೀಸಲಾತಿಯ ಆಮಿಷವೊಡ್ಡಿ ಜಾರಿಗೊಳಿಸದೆ ಮೋಸ ಮಾಡುತ್ತಿವೆ. ನೀವು ಜಾರಿಗೊಳಿಸದಿದ್ದಲ್ಲಿ 101 ಜಾತಿಗಳು ಸೇರಿ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ. ಪರಿಶಿಷ್ಟ ಜಾತಿಗಳಲ್ಲಿ ಒಡಕು ಮೂಡಿಸುವ ಸಲುವಾಗಿ ಮಲ್ಲಿಕಾರ್ಜುನ ಖರ್ಗೆಯವರತ್ತ ಬೆಟ್ಟು ಮಾಡುವುದು ಸಮರ್ಥನೀಯವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

chit2

“ಚಿತ್ರದುರ್ಗದಲ್ಲಿ ನಡೆದ ಪರಿಶಿಷ್ಟ ಜಾತಿಗಳ ಸಮಾವೇಶದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿದ್ದೀರಿ. ಸುಪ್ರೀಂ ಕೋರ್ಟ್ ತೀರ್ಪು ನೀಡಿ ಎರಡು ತಿಂಗಳಾದರೂ ಈವರೆಗೆ ಅದರ ಬಗ್ಗೆ ಚಕಾರವಿಲ್ಲ. ಒಳಮೀಸಲಾತಿಯ ಆಸೆ ತೋರಿಸಿ ರಾಜಕೀಯವಾಗಿ ಬಳಸಿಕೊಳ್ಳಬೇಡಿ. ಸಾಮಾಜಿಕ ನ್ಯಾಯ, ಭದ್ರತೆಯ ಬಗ್ಗೆ ಮಾತನಾಡುವ ನೀವು ಒಳ ಮೀಸಲಾತಿ ಜಾರಿಗೊಳಿಸಿ, ಇಲ್ಲವಾದಲ್ಲಿ ಕುರ್ಚಿ ಖಾಲಿ ಮಾಡಿ. ಇಲ್ಲದಿದ್ದಲ್ಲಿ ಪಾದಯಾತ್ರೆಯ ಮೂಲಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದು ಪಾವಗಡ ಶ್ರೀರಾಮ್ ಎಚ್ಚರಿಕೆ ನೀಡಿದರು.

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಹಿರಿಯೂರಿನ ದಲಿತ ಸಂಘಟನೆಗಳ ಒಕ್ಕೂಟ ಚಿತ್ರದುರ್ಗಕ್ಕೆ ಪಾದಯಾತ್ರೆ ಮೂಲಕ ಆಗಮಿಸಿ, ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರ್ವೋಚ್ಛ ನ್ಯಾಯಾಲಯ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸಂವಿಧಾನಬದ್ಧ ಎಂದು ಘೋಷಿಸಿದೆ. ತೀರ್ಪು ಹೊರಬಂದು 60 ದಿನಗಳಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಲಹರಣ ಮಾಡುತ್ತಿರುವುದು ಖಂಡನೀಯ. ಯಾವುದೇ ಸಬೂಬು ಹೇಳದೆ ತಕ್ಷಣ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಹಿರಿಯೂರಿನ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿತು.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು

ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ದಲಿತ ಮುಖಂಡರಾದ ಬಿ.ಪಿ.ಪ್ರಕಾಶ್‌ಮೂರ್ತಿ, ಹುಲ್ಲೂರು ಕುಮಾರಸ್ವಾಮಿ, ಹರಿರಾಮ್, ಕೋಡಿಹಳ್ಳಿ ಸಂತೋಷ, ರಾಘವೇಂದ್ರ , ಕೆ.ಟಿ.ಶಿವಕುಮಾರ್, ಬಿ.ಎನ್.ಜೀವೇಶ್, ಬಿ.ಜಿ.ಸಾಗರ್, ರವಿ, ಕೆ.ಮಂಜುನಾಥ್ ಹೆಗ್ಗೆರೆ, ಮಹಾಂತೇಶ್, ಕೆ.ರಾಮಚಂದ್ರ, ಓಂಕಾರಪ್ಪ, ಮಾರುತೇಶ್, ಶ್ರೀನಿವಾಸ್, ತಿಪ್ಪೇಸ್ವಾಮಿ, ರಾಘವೇಂದ್ರ, ಬೋರನಕುಂಟೆ ಕರಿಯಣ್ಣ, ಉಮೇಶ್, ಹನುಮಂತಪ್ಪ, ಸಿದ್ದಾರ್ಥ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

WhatsApp Image 2024 10 05 at 1.32.32 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...