ಚಿತ್ರದುರ್ಗ | ಎನ್‌ಡಿಎ ಆಡಳಿತದಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ: ಪಿ ಸಾಯಿನಾಥ್

Date:

ಮೋದಿ ನೇತೃತ್ವದ ಎನ್‌ಡಿಎ ಅವಧಿಯಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ. ವಿಶ್ವಗುರು ಎಂದುಕೊಳ್ಳುವ ಮೋದಿ ಹತ್ತು ವರ್ಷಗಳಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿಯನ್ನೇ ನಡೆಸದೇ ಪ್ರಜಾಪ್ರಭುತ್ವ ತತ್ವಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪತ್ರಕರ್ತ ಮ್ಯಾಗ್ಗೆಸೆ ಪುರಸ್ಕೃತ ಪಿ.ಸಾಯಿನಾಥ್ ಹೇಳಿದರು.

ಚಿತ್ರದುರ್ಗ ನಗರದ ಎಸ್‌ಆರ್‌ಎಸ್ ಸಮೂಹ ಸಂಸ್ಥೆಯ ಡಾ. ಬಿ.ವಿ. ವೈಕುಂಠರಾಜು ವೇದಿಕೆಯಲ್ಲಿ ಸೋಮವಾರ (ಏ.1) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಮೋದಿ ಮಾಧ್ಯಮ ರಂಗಕ್ಕೆ ಮಾಡಿದ ಒಂದೇ ಒಳ್ಳೆಯ ಕೆಲಸವೆಂದರೆ ಕೋವಿಡ್ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರವನ್ನು ಅಗತ್ಯ ಸೇವೆಗಳ ವ್ಯಾಪ್ತಿಗೆ ತಂದಿರುವುದು. ಇದು ಒಳ್ಳೆಯ ಬೆಳವಣಿಗೆ. ಆದರೆ, ಅಗತ್ಯ ಸೇವೆಗಳ ವ್ಯಾಪ್ತಿಗೆ ಪತ್ರಕರ್ತರು ಸೇರಿದರೂ ಸಾವಿರಾರು ಪತ್ರಕರ್ತರು ಕೆಲಸವನ್ನು ಕಳೆದುಕೊಂಡರು. ಮಾಧ್ಯಮ ಸಂಸ್ಥೆಗಳ ಮಾಲೀಕರ ಈ ಕಾನೂನು ಬಾಹಿರ ವರ್ತನೆಯನ್ನು ಕೇಂದ್ರ ಸರ್ಕಾರ ಗಮನಿಸಲೇ ಇಲ್ಲ. ಅಗತ್ಯ ಸೇವೆಯ ವ್ಯಾಪ್ತಿಯಲ್ಲಿರುವವರನ್ನು ಕೆಲಸದಿಂದ ತೆಗೆಯುವಂತಿಲ್ಲ. ಹೀಗೆ ಮೋದಿ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿಯೇ ತನ್ನ ನಿಲುವನ್ನು ಪ್ರದರ್ಶಿಸುತ್ತ ಹೋಗುತ್ತಿದೆ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಪೊರೇಟ್  ಮಾಲೀಕರುಗಳು ಪತ್ರಕರ್ತರ ಸೇವಾ ಭದ್ರತೆಯನ್ನೂ ಪರಿಗಣಿಸದೇ ಬಹುದೊಡ್ಡ ಅನಾಚಾರವನ್ನು ಎಸಗುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮತ್ತು ನಂತರದ ಈ ವರ್ಷಗಳಲ್ಲಿ ದೇಶದ ಸುಮಾರು 3500 ಪತ್ರಕರ್ತರನ್ನು ಕೆಲಸದಿಂದ ತೆಗೆಯಲಾಗಿದೆ. ಭಾರತೀಯ ಪ್ರೆಸ್ ಕೌಂನ್ಸಿಲ್ ಬಗ್ಗೆ ವಿವರಣೆ ಕೇಳಿದಾಗ ಸರಿಯಾದ ಉತ್ತರವನ್ನೂ ಕೊಟ್ಟಿಲ್ಲ. ಮಾಲೀಕರುಗಳ ಇಂತಹ ಧೋರಣೆಗೆ ಪೂರಕವಾಗಿ ಇತ್ತೀಚಿನ ವರ್ಷಗಳಲ್ಲಿ ಹವ್ಯಾಸಿ ಪತ್ರಕರ್ತ ಎಂಬ ಹಣೆ ಪಟ್ಟಿಯೊಂದಿಗೆ ಉದ್ಯೋಗ ನೀಡಲಾಗುತ್ತಿದೆ. ಇದು ಆರೋಗ್ಯಕರ ಮಾಧ್ಯಮಕ್ಕೆ ವ್ಯತಿರಿಕ್ತವಾದ ಬೆಳವಣಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಸನ್ನಿವೇಶದಲ್ಲಿ ಎಲ್ಲ ಮಾಧ್ಯಮಗಳು ಬಂಡವಾಳ ಶಾಹಿಗಳ ಹಿಡಿತದಲ್ಲಿವೆ. ಪತ್ರಕರ್ತರು ಬರ ವಣಿಗೆಯ ಸ್ವಾತಂತ್ರ್ಯ , ತನ್ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ ಎರಡನ್ನೂ ಕಳೆದುಕೊಂಡಿದ್ದಾರೆ. ಇದು ಒಳ್ಳೆಯ  ಬೆಳವಣಿಗೆ ಅಲ್ಲ ಎಂದರು. ಇಂದು ಮಾಧ್ಯಮವನ್ನು ದಮನ ಮಾಡುವ ವ್ಯವಸ್ಥಿತ ಹುನ್ನಾರವಾಗುತ್ತಿದೆ, ನಿಜವಾದ ವಿಷಯವನ್ನು ಜಗತ್ತಿಗೆ ತಿಳಿಸಬೇಕು ಎಂಬ ಪ್ರಾಮಾಣಿಕ ಪತ್ರಕರ್ತರೂ ಕೂಡ ‘ಮೋದಿ ಪ್ರಿಯ’ ಬಂಡವಾಳಶಾಹಿ ಮಾಲೀಕರಿಂದಾಗಿ ಅಸಹಾಯಕ ಮೌನ ತಳೆಯಬೇಕಿದೆ ಎಂದು ಸಾಯಿನಾಥ್ ಮಾರ್ಮಿಕವಾಗಿ ನುಡಿದರು.

ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸಬೇಕಾದ ಹೊಣೆ ಪತ್ರಕರ್ತರ ಸಂಧರ್ಭಗಳಲ್ಲಿ ಸಂಪಾದಕೀಯಗಳ ಜವಾಬ್ದಾರಿ.  ಧೈರ್ಯವಾಗಿ ಸಂಪಾದಕೀಯ ಮುಖಾಂತರ ಸಮಾಜದ ಒಳಿತಿಗಾಗಿ ಧ್ವನಿ ಎತ್ತಬೇಕು. ಹೀಗಾಗದೇ ಇರುವುದು ದುರಂತ. ಫೆ.12ರಂದು ಹರಿಯಾಣದಲ್ಲಿ ರೈತರ ಮೇಲೆ ಡೋಣ್ ಮೂಲಕ ಅಶ್ರವಾಯು ಸಿಡಿಸಿದ್ದನ್ನೂ ಕೂಡ ಒಂದೇ ಒಂದು ಪತ್ರಿಕೆ ಸಂಪಾದಕೀಯದ ಮೂಲಕ ಖಂಡಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಕೆ.ರವಿ ಮಾತನಾಡಿ, ವಾಣಿಜ್ಯಕರಣ ಮತ್ತು ಖಾಸಗೀಕರಣ ಭರಾಟೆಯಲ್ಲಿ ಪತ್ರಕರ್ತರು ಇಡೀ ಸಮಾಜದ ರಕ್ಷಣೆ ಮಾಡುತ್ತಾರೆ. ಆದರೆ, ಪತ್ರಕರ್ತರಿಗೆ ಸೇವಾ ಭದ್ರತೆಯೇ ಇಲ್ಲದಂತಾಗಿದೆ. ಆಗಂತ ಹಣವೇ ಬೇಡ ಎಂದು ಹೇಳಲು ಸಾಧ್ಯವಿಲ್ಲ. ಸಾಮಾಜಿಕ ಹೊಣೆಗಾರಿಕೆ ಇರುವ ಲಾಭದಾಯಕ ಉದ್ಯಮ ಇರಬೇಕು. ಜನರ ಹಿತ ಕಾಪಾಡುವುದಕ್ಕೆ ಮೊದಲ ಆದ್ಯತೆ ನೀಡುವುದು ಪತ್ರಿಕಾ ಧರ್ಮದ ಮೊದಲ ಆದ್ಯತೆ ಆಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ. ಲೋಕೇಶ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಎಸ್‌ಆರ್‌ಎಸ್ ಸಮೂಹ ಸಂಸ್ಥೆ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ, ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...