ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯ ರಕ್ಷಣೆ; ಪೋಷಕರಿಗೆ ಎಚ್ಚರಿಕೆ

Date:

ಚಿತ್ರದುರ್ಗ ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯನ್ನು ತಡೆಯುವ ಮೂಲಕ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯನ್ನು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಚಿತ್ರದುರ್ಗ ನಗರದ ಹೊರವಲಯದ ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಹೊಳಲ್ಕೆರೆ ನಗರದ 17 ವರ್ಷ 3 ತಿಂಗಳಿನ ಬಾಲಕಿಯನ್ನು ಚಿತ್ರದುರ್ಗ ನಗರದ ಹುಡುಗನೊಂದಿಗೆ ವಿವಾಹ ನೆರವೇರಿಸಲು ಪೋಷಕರು ಹಾಗೂ ಕುಟುಂಬಸ್ಥರು ಮದುವೆ ಆಯೋಜಿಸಿ ತಯಾರಿ ನಡೆಸಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿದ ಅಧಿಕಾರಿಗಳು ಜನ್ಮ ದಾಖಲೆ ಪರಿಶೀಲಿಸಿದಾಗ ಹುಡುಗಿ ಅಪ್ರಾಪ್ತೆಯೆಂದು ತಿಳಿದುಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಕಾನೂನಿನ ಪ್ರಕಾರ ಬಾಲ್ಯ ವಿವಾಹ ಜರುಗಿಸಿದರೆ ಕನಿಷ್ಠ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಪೋಷಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಗೆ 18 ವರ್ಷ ತುಂಬಿ ಪ್ರಾಪ್ತ ವಯಸ್ಕಳಾಗುವವರೆಗೂ ಮದುವೆ ಮಾಡದಂತೆ ಬಾಲಕಿ ಹಾಗೂ ಹುಡುಗನ ಪೋಷಕರಿಂದ ಮುಚ್ಚಳಿಕೆ ಬರಸಿಕೊಂಡಿದ್ದು, ಮದುವೆಯನ್ನು ತಡೆದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿ

“ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಪೋಷಕರು ಹಾಗೂ ಕಲ್ಯಾಣ ಮಂಟಪದ ಮುಖ್ಯಸ್ಥರನ್ನು ಕರೆದು ಎಚ್ಚರಿಕೆ ಮತ್ತು ಮಾಹಿತಿ ನೀಡಲಾಗಿದೆ. ಬಾಲಕಿಗೆ 18 ವರ್ಷ ತುಂಬುವವರೆಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣದ ಬಗ್ಗೆ ನಿಗಾ ಇಡಲಾಗುತ್ತದೆ” ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಸಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...