ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

Date:

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ ಶೋಷಿತರ ಏಳಿಗೆ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಚಿತ್ರದುರ್ಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ 25ನೇ ವರ್ಷದ ರಜತದೀಕ್ಷಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

“ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬು ಮಾಡಿಕೊಂಡು ಹಿಂದೆ ಉಳಿದರು. ಅಸ್ಪೃಶ್ಯತೆ, ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಹಲವು ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದಲೇ ಶೋಷಿತ, ತಳಸಮುದಾಯಗಳು ವಿದ್ಯೆಯಿಂದ ವಂಚಿತರಾಗಿ ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು” ಎಂದು ಕರೆ ನೀಡಿದರು.

“ಎಸ್‌ಸಿ/ಎಸ್‌ಟಿ ಸಮುದಾಯಗಳು ರಾಜ್ಯದ ಜನಸಂಖ್ಯೆಯಲ್ಲಿ ಶೇ.24ರಷ್ಟಿದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ.24ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು, ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ” ಎಂದರು.

“ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮ ಎಂದು ಮರುನಾಮಕರಣ ಮಾಡಬೇಕೆನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಸಿದ್ದರಾಮೇಶ್ವರ ಅಧ್ಯಯನ ಪೀಠಕ್ಕಾಗಿ ಬೇಡಿಕೆ ಇದೆ, ಈ ಬೇಡಿಕೆಯನ್ನೂ ಮುಂದಿನ ದಿನಗಳಲ್ಲಿ ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಚಿವರಾದ ಶಿವರಾಜ್ ತಂಗಡಗಿ, ಡಿ ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್ ವಿ ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಚಂದ್ರಪ್ಪ ಸೇರಿ ಹಲವು ಮಂದಿ ಸಮಾಜದ ಮುಖ್ಯಸ್ಥರು ಮತ್ತು ಸಮುದಾಯದ ಶ್ರೀಗಳು ಹಾಗೂ ವಿವಿಧ ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...