ಚಿತ್ರದುರ್ಗ | ನ.25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ

Date:

ರಾಜಕೀಯ ಜಾಗೃತಿಗಾಗಿ ಬೆಂಗಳೂರಿನಲ್ಲಿ ನವೆಂಬರ್ 25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿ ಕೆ ರಾಮಚಂದ್ರ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು “ನವೆಂಬರ್ 25ರ ಸೋಮವಾರ ಬೆಳಿಗ್ಗೆ 11:30ಕ್ಕೆ ಬೆಂಗಳೂರಿನ ವಸಂತ ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ರಾಜಕೀಯ ಜಾಗೃತಿಯನ್ನು ಮೂಡಿಸಲು ಮತ್ತು ರಾಜಕೀಯದ ಅಧಿಕಾರವನ್ನು ಪಡೆಯುವುದರ ಮೂಲಕ ಸಾಮಾಜಿಕ ಸಮಾನತೆಯನ್ನು ಸಾಧಿಸಲು ಜಾಗೃತಿಗೊಳಿಸುವ ಸಲುವಾಗಿ ಐಕ್ಯತಾ ಸಮಾವೇಶ 2024ನ್ನು ಆಯೋಜಿಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಮಂದಿ ಆಗಮಿಸಲಿದ್ದಾರೆ” ಎಂದು ತಿಳಿಸಿದರು.

“1932 ಸೆಪ್ಟೆಂಬರ್ 24ರ ಪೂನಾ ಒಪ್ಪಂದ ಈ ದೇಶದ ಮೂಲನಿವಾಸಿ ಜನಗಳ ರಾಜಕೀಯ ಅಧಿಕಾರವನ್ನು ಕಸಿದುಕೊಂಡಿತ್ತು. ಅಂದಿನಿಂದಲೂ ರಾಜಕೀಯ, ಸಾಮಾಜಿಕ ಸಮಾನತೆಯನ್ನು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳನ್ನು ಜಾಗೃತಿ ಪಡಿಸುವುದು ಅನಿವಾರ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯೂರು ತಾಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಆರ್ ಮಾತನಾಡಿ “75 ವರ್ಷ ಕಳೆದರೂ ಈ ದೇಶದ ಮೂಲ ನಿವಾಸಿಗಳನ್ನು ಬೇರೆ ಬೇರೆ ಆಯಾಮಗಳಲ್ಲಿ ಗುಲಾಮರಂತೆ ನಡೆಸಿಕೊಳ್ಳುತ್ತಿರುವುದು ದುರಂತ. ಡಾ. ಅಂಬೇಡ್ಕರ್ ಅವರು ಹೇಳಿದಂತೆ ದಾಸ್ಯದ ಬದುಕಿನಲ್ಲಿ ಜೀವಿಸುವುದಕ್ಕಿಂತ ಸಾಯುವುದೇ ಮೇಲು ಎಂಬಂತೆ ನಾವು ಸ್ವಾಭಿಮಾನ, ಸಮಾನತೆ ಮತ್ತು ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಡಬೇಕಾಗಿದೆ. ಸಂವಿಧಾನದ ಅನುಚ್ಛೇದ 38, 39ಎ ಅಡಿಯಲ್ಲಿ ಜಾತಿ, ಧರ್ಮ, ವರ್ಗ, ಭಾಷೆ ಎಲ್ಲ ಕಾರಣದಿಂದ ಅವಕಾಶಗಳ ಸಮಾನತೆ ಪ್ರತಿಪಾದಿಸಿದರೂ ಕೂಡ, ರಾಜಕೀಯ ಪಕ್ಷಗಳು ಸಮಾನತೆ ಕಲ್ಪಿಸದೆ ಬೊಗಳೆ ಬಿಡುತ್ತಿವೆ. ಹಾಗಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜಾಗೃತಿ ಮಾಡಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಸಾವು; ಮೇಲಧಿಕಾರಿಗಳ ನಿರ್ಲಕ್ಷ್ಯದ ಆರೋಪ

“ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ ಜನರು ಆಗಮಿಸಲಿದ್ದು, ಚಿತ್ರದುರ್ಗದಿಂದ ಬಹಳಷ್ಟು ಸಂಖ್ಯೆಯ ಜನರು ಆಗಮಿಸಲಿದ್ದಾರೆ” ಎಂದು ತಿಳಿಸಿದರು.‌

ಈ ವೇಳೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾ ಕಾರ್ಯಧ್ಯಕ್ಷ ತಿಪ್ಪೇಸ್ವಾಮಿ, ವಿನೋದ್ ಕುಮಾರ್, ಎಸ್ ಟಿ ಘಟಕದ ಅಧ್ಯಕ್ಷರಂಗಸ್ವಾಮಿ, ಲಕ್ಷ್ಮಣ್ ರಾವ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...