ಚಿತ್ರದುರ್ಗ | ಯಲ್ಲದಕೆರೆಗೆ ಬಸ್‌ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳ ಆಗ್ರಹ

Date:

ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. 10 ಗಂಟೆಯಾದರೂ ವಿದ್ಯಾರ್ಥಿಗಳು ಯಲ್ಲದಕೆರೆ ಬಳಿಯೇ ಇರುತ್ತಾರೆ. ಇದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕೆಲಕಾಲ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಯಲ್ಲದಕೆರೆ ಬಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, “ಯಲ್ಲದಕೆರೆ ವ್ಯಾಪ್ತಿಯಿಂದ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿರಿಯೂರು ಕಾಲೇಜಿಗೆ ಬರುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“9 ಗಂಟೆಗೆ ಬರಬೇಕಾದ ಯಡಿಯೂರು-ಗದಗ ಗಾಡಿ, 9-15ಕ್ಕೆ ಬರುತ್ತದೆ. 9-20ಕ್ಕೆ ಬರಬೇಕಾದ ಗಾಡಿ 9-35ಕ್ಕೆ ಬರುತ್ತದೆ. ಸಮಯಕ್ಕೆ ಸರಿಯಾಗಿ ಬಸ್‌ಗಳು ಬರದ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. 8-45ಕ್ಕೆ ಯಲ್ಲಾಡಕೆರೆಗೆ ಬಸ್ ಬಂದರೆ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಹಿರಿಯೂರು ತಲುಪಲು ಸಾಧ್ಯವಾಗುತ್ತದೆ. 200ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಇರುವುದರಿಂದ ಒಂದೇ ಬಸ್‌ ಸಾಕಾಗುವುದಿಲ್ಲ. ಹಾಗಾಗಿ ಈಗಿರುವ ಬಸ್ಸಿನ ಜತೆಗೆ ಇನ್ನೆರೆಡು ಬಸ್‌ಗಳ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳ್ಳಿಯಿಂದ ಬರುವ ವಿದ್ಯಾರ್ಥಿಗಳಿಗೆ ಒಂದು ಪ್ರತ್ಯೇಕ ಬಸ್ ಬೇಕು, ಹುಳಿಯಾರ್-ಹಿರುಯೂರು ಮಾರ್ಗದಲ್ಲಿ ಒಂದು ಬಸ್‌ ಸಂಚರಿಸಬೇಕು. ಯಲ್ಲದಕೆರೆಗೆ 8-30ಕ್ಕೆ ಬಸ್‌ ಬರಬೇಕು, ದಸುಡಿ ಮಾರ್ಗದಿಂದ, ಬ್ಯಾರಾಮಡು, ಚಿಗಳಿಕಟ್ಟೆ, ಹಂದಿಗನಾಡು, ಯಲ್ಲದಕೆರೆ ಮಾರ್ಗವಾಗಿ 8-45ಕ್ಕೆ ಯಲ್ಲದಕೆರೆಗೆ ಬಂದರೆ, ಹಿರಿಯೂರಿಗೆ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗುತ್ತದೆ. 200ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಇರುವುದರಿಂದ ಈಗ ಇರುವ ಬಸ್‌ನ ಜತೆಗೆ ಇನ್ನರೆಡು ಬಸ್ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

“ಮಧ್ಯಾಹ್ನ 2-30ಕ್ಕೆ ಬಾಗಲಕೋಟೆ-ಮೈಸೂರ್ ಗಾಡಿ ಹಿರಿಯೂರಿಂದ ಹುಳಿಯಾರ್ ಮಾರ್ಗವಾಗಿ ಮೈಸೂರಿಗೆ ಹೋಗುತ್ತದೆ. ಅದಾದ ಬಳಿಕ ಯಾವುದೇ ಬಸ್ ಇಲ್ಲ. 2-30ಕ್ಕೆ ಮೈಸೂರು ಗಾಡಿ ಹೋದ ನಂತರ ಸಂಜೆ 6-30ರವರೆಗೂ ಯಾವುದೇ ಬಸ್ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ಶಾಲೆ-ಕಾಲೇಜು ಮುಗಿಸಿ ಸಂಜೆ 7ರವರೆಗು ಹಿರಿಯೂರಿನಲ್ಲೇ ಇರುತ್ತಾರೆ. 4 ಗಂಟೆಗೆ ಸಿಂಧನೂರು-ಮೈಸೂರು ಗಾಡಿ ಬರುತ್ತಿತ್ತು. ಈಗ ಆ ಗಾಡಿ ಬರುತ್ತಿಲ್ಲ. 4-30ಕ್ಕೆ ತುರುವೇಕೆರೆ-ಮೈಸೂರು ಗಾಡಿ ಬರುತಿತ್ತು ಆ ಗಾಡಿಯೂ ಬರುತ್ತಿಲ್ಲ. ದಯವಿಟ್ಟು ವಿದ್ಯಾರ್ಥಿಗಳ ಭವಿಷ್ಯವನ್ನು ಮನಗಂಡು ಬಸ್ ವ್ಯವಸ್ಥೆ ಮಾಡಿಸಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...