ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಒತ್ತಾಯ; ಚಳ್ಳಕೆರೆ ಬಂದ್‌ ಯಶಸ್ವಿ

Date:

ಭದ್ರಾಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನ ಮತ್ತು ಅನುದಾನ ಬಿಡುಗಡೆಗೆ ಆಗ್ರಹಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಂದ್‌ಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, ಬಂದ್‌ ಯಶಸ್ವಿಯಾಗಿದೆ.

ಶುಕ್ರವಾರ (ಫೆ.9) ಬೆಳಿಗ್ಗೆಯಿಂದಲೇ ಜನರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಾಗಿಲು ತೆಗೆಯದೆ ಬೆಂಬಲ ಸೂಚಿಸಿದರು. ನಗರದ ಮುಖ್ಯ ರಸ್ತೆ ಬಿಕೋ ಎನ್ನುತ್ತಿದ್ದು, ವಾಹನಗಳ ಸಂಚಾರ ಸಹ ಸ್ಥಗಿತವಾಗಿತ್ತು.

ಬಂದ್‌ಗೆ ರೈತಪರ ಸಂಘಟನೆಗಳು, ಎಐಟಿಯುಸಿ, ಕಾರ್ಮಿಕರ ಸಂಘ, ದಲ್ಲಾಲರ ಸಂಘ, ವಾಣಿಜ್ಯ ಸಂಘಟನೆ, ಕೆಆರ್‌ಎಸ್ ಪಕ್ಷ, ಛೇಂಬರ್ ಆಫ್‌ ಕಾಮರ್ಸ್‌, ಕನ್ನಡ ರಕ್ಷಣಾ ವೇದಿಕೆ ಸೇರಿ ಹತ್ತಕ್ಕೂ ಹೆಚ್ಚು ಸಂಘಟನೆಗಳು ಬಂದ್‌ ಬೆಂಬಲಿಸಿ ರಸ್ತೆಗಿಳಿದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಳ್ಳಕೆರೆ-ಮೊಳಕಾಲ್ಮುರು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇದಕ್ಕೆ ಪರಿಹಾರವಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹ 5,300 ಕೋಟಿ ಅನುದಾನ ಇದುವರೆಗೂ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 20 ವರ್ಷಗಳಿಂದ ಜಿಲ್ಲೆಯ ಜನರನ್ನು ವಂಚಿಸುತ್ತಲೇ ಬಂದಿವೆ. ಭದ್ರಾದಿಂದ ಕೆರೆಗಳಿಗೆ ನೀರು ಹರಿಯದಿರುವ ಕಾರಣ ಜಿಲ್ಲೆಯ ಜನರು ಬರಗಾಲ ಅನುಭವಿಸುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಚ್ಚಾಶಕ್ತಿ ಕೊರತೆಯಿಂದಾಗಿ ಕುಂಟುತ್ತಾ ಸಾಗಿರುವುದು ರೈತಾಪಿ ಸಮುದಾಯದಲ್ಲಿ ಕಳವಳ ಮೂಡಿಸಿದೆ. ರಾಜ್ಯ ಸರ್ಕಾರದ ಉದಾಸೀನ ಮನೋಭಾವ, ಕೇಂದ್ರ ಸರ್ಕಾರ ಘೋಷಿತ ವಚನ ಈಡೇರಿಸದೇ ಇರುವುದು ಪ್ರಮುಖ ಕಾರಣವಾಗಿದೆ.

22 ಸಾವಿರ ಕೋಟಿ ರೂ. ವೆಚ್ಚದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಇದುವರೆಗೂ ರಾಜ್ಯ ಸರ್ಕಾರ ಮಾಡಿದ ವೆಚ್ಚ ಹತ್ತು ಸಾವಿರ ಕೋಟಿ ರೂ ದಾಟಿಲ್ಲ. ಕಾಮಗಾರಿ ಆರಂಭವಾಗಿ ಸುಮಾರು ಇಪ್ಪತ್ತು ವರ್ಷಗಳು ಕಳೆದರೂ ಅರೆಬರೆಯಾಗಿದೆ. ಯೋಜನೆ ಕಾಲಮಿತಿ ಅನುಸಾರ ಕಾಮಗಾರಿ ಕೈಗೊಂಡಿದ್ದರೆ ಇಷ್ಟೊತ್ತಿಗೆ ಪೂರ್ಣಗೊಳ್ಳುತ್ತಿತ್ತು. ಜನತೆ ನಿತ್ಯವೂ ಬೀದಿಗೆ ಬಂದು ನೀರಿಗಾಗಿ ಕೂಗುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲ.

ಭದ್ರಾ ಮೇಲ್ದಂಡೆಯ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಕೇಂದ್ರದಿಂದ ಅನುದಾನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದು , 2023-24ರ ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರುಪಾಯಿ ಮೀಸಲಿಡಲಾಗಿತ್ತು. ವರ್ಷಗಳು ಉರುಳಿದರೂ ಒಂದು ಪೈಸೆ ಅನುದಾನ ಬಿಡಗಡೆಯಾಗಿಲ್ಲ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಜಲಶಕ್ತಿ ಸಚಿವರ ಭೇಟಿ ಮಾಡಿ ಅನುದಾನಕ್ಕೆ ವಿನಂತಿಸಿದರೂ ಮನ್ನಣೆ ದೊರೆಯದೇ ಇರುವುದು ವಿಷಾಧನೀಯವಾಗಿದೆ.

ಯೋಜನೆ ತ್ವರಿತಗೊಳಿಸಲು ಆಗ್ರಹಿಸಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಬಂದ್ ಸೇರಿದಂತೆ ಹಲವು ಸರಣಿ ಹೋರಾಟಗಳ ಕೈಗೆತ್ತಿಕೊಂಡಿದೆ. ಜಿಲ್ಲೆಯ ಎಲ್ಲ ಜನಪರ , ಕನ್ನಡಪರ, ಕಾರ್ಮಿಕ ಸಂಘಟನೆಗಳು, ಉದ್ದಿಮೆ ವಲಯಗಳು ಹೋರಾಟಕ್ಕೆ ಬೆಂಬಲ ನೀಡಿವೆ. ಜನರ ಆಕ್ರೋಶಗಳು ಇಮ್ಮಡಿಯಾಗುವ ಮೊದಲು ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು. ರಾಜ್ಯ ಸರ್ಕಾರ ಕೇಂದ್ರದ ಅನುದಾನ ಕಾದು ಕುಳಿತುಕೊಳ್ಳದೇ ಭದ್ರಾ ಮೇಲ್ದಂಡೆ ಕಾಮಗಾರಿಗೆ ಶರವೇಗ ನೀಡಿ ಪೂರ್ಣಗೊಳಿಸಬೇಕು. ಎಲ್ಲ ಅಡೆ ತಡೆಗಳ ನಿವಾರಿಸಬೇಕು. ಕೇಂದ್ರ ಸರ್ಕಾರ ₹ 5300 ಕೋಟಿ ನೆರವು ನೀಡಿ ತನ್ನ ವಚನ ಬದ್ಧತೆ ಮೆರೆಯಬೇಕೆಂದು ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸಿತು.

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ , ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಮುಖಂಡ ಕೆ.ಪಿ.ಭೂತಯ್ಯ ಕರುನಾಡ ವಿಜಯಸೇನೆ ಕಾರ್ಯಕರ್ತರು ಹಾಗು ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಐಟಿಯುಸಿ ಮುಖಂಡ ಸಿ.ವೈ.ಶಿವರುದ್ರಪ್ಪ, ರೈತ ಸಂಘದ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ತಾಲೂಕು ಶಾಖೆ ಮಾಜಿ ಅಧ್ಯಕ್ಷ ಒ.ಟಿ. ತಿಪ್ಪೇಸ್ವಾಮಿ, ಹಮಾಲರ ಸಂಘಟನೆ ಮುಖಂಡ ಟಿ.ತಿಪ್ಪೇಸ್ವಾಮಿ, ಟಿ.ನಿಂಗಣ್ಣ, ಕನ್ನಡ ರಕ್ಷಣಾ ವೇದಿಕೆಯ ಚೇತನ್‍ಕುಮಾರ್, ದೊಡ್ಡುಳ್ಳಾರ್ತಿ ಕರಿಯಣ್ಣ, ದಲ್ಲಾಲರ ಸಂಘದ ಅಧ್ಯಕ್ಷ ಅರವಿಂದ್, ಛೇಂಬರ್ ಆಫ್‌ ಕಾಮರ್ಸ್ ಅಧ್ಯಕ್ಷ ರಘುನಾಥ ಬಾಬು, ಕೆಆರ್‌ಎಸ್ ಪಕ್ಷದ ಮಹೇಶ್, ಸಾಮಾಜಿಕ ಹೋರಾಟಗಾರ ಎಚ್.ಎಸ್.ಸೈಯದ್, ಬಂಡೆ ತಿಪ್ಪೇಸ್ವಾಮಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...