ಚಿತ್ರದುರ್ಗ | ದೂರು, ಅಹವಾಲು ಸ್ವೀಕರಿಸದ ಅಧಿಕಾರಿಗಳು: ತಹಶೀಲ್ದಾರ್ ವಾಹನಕ್ಕೆ ಬೆಂಕಿ ಹಚ್ಚಿದ ಯುವಕ!

Date:

ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸದ ಆಡಳಿತ, ಪೊಲೀಸ್ ವ್ಯವಸ್ಥೆಯ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬ ಸರ್ಕಾರಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಮಿನಿ ವಿಧಾನಸೌಧದ ಮುಂದೆ ನಡೆದಿದೆ.

ತನ್ನ ತಾಯಿ ನೀಡಿದ ದೂರು ಸ್ವೀಕರಿಸಲಿಲ್ಲವೆಂಬ ಕಾರಣಕ್ಕೆ ಆಡಳಿತ ವ್ಯವಸ್ಥೆ ಹಾಗೂ ಪೊಲೀಸ್‌ ಇಲಾಖೆ ಮೇಲೆ ಅಸಮಾಧಾನ ವ್ಯಕ್ತಪಡಿಸಿ ಚಳ್ಳಕೆರೆಯ ಮಿನಿ ವಿಧಾನಸೌಧದ ಸರ್ಕಾರಿ ವಾಹನಕ್ಕೆ ಬೆಂಕಿ ಹಚ್ಚಿದ್ದಾನೆ. ಯುವಕನನ್ನು ಚಳ್ಳಕೆರೆಯ ಪೃಥ್ವಿರಾಜ್ ಎಂದು ಗುರುತಿಸಲಾಗಿದೆ.

ಇದೇ ಯುವಕ ಪೃಥ್ವಿರಾಜ್, ಕಳೆದ ತಿಂಗಳು ಬೆಂಗಳೂರಿನ ವಿಧಾನಸೌಧದ ಮುಂಭಾಗ ತನ್ನ ಸ್ಕೂಟರ್‌ಗೆ ಬೆಂಕಿ ಹಾಕಿ, ಅಸಮಾಧಾನ ವ್ಯಕ್ತಪಡಿಸಿದ್ದನು. ತಾನು ಪ್ರವಾಸಕ್ಕೆಂದು ತೆರಳಿದ ವೇಳೆ ಆತಂಕಗೊಂಡ ಅವನ ತಾಯಿ ಕಾಣೆಯಾದ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಆಗಮಿಸಿದಾಗ ಚಳ್ಳಕೆರೆ ನಗರದ ಪೊಲೀಸ್ ಠಾಣೆ ಮತ್ತು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯ ಪೊಲೀಸರು ದೂರು ಸ್ವೀಕರಿಸದೆ ನಿರ್ಲಕ್ಷ್ಯ ತೋರಿದ್ದಾರು. ಮನೆಗೆ ಹಿಂದಿರುಗಿದ ನಂತರ ಈ ವಿಷಯ ತಿಳಿದು ಕರ್ತವ್ಯಲೋಪ ತೋರಿದ್ದಾರೆ ಎಂದು ಪೊಲೀಸರನ್ನು ಪ್ರಶ್ನಿಸಲು ಹೋಗಿದ್ದಾಗ, ಮೊಬೈಲ್ ಕಿತ್ತುಕೊಂಡು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸರ್ಕಾರಿ ವಾಹನ

ಈ ಬಗ್ಗೆ ದೂರು ನೀಡಿದ್ದರೂ ಹಿರಿಯ ಅಧಿಕಾರಿಗಳೂ ಕೂಡ ಗಮನಹರಿಸಿಲ್ಲವೆಂದು ಆಕ್ರೋಶಗೊಂಡ ಯುವಕ ಆಗಾಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಸಿಟ್ಟನ್ನು ವ್ಯಕ್ತಪಡಿಸಿದ್ದ ಎಂದು ತಿಳಿದುಬಂದಿದೆ.

ಈ ಎಲ್ಲ ಹಿನ್ನೆಲೆಯಲ್ಲಿ ಮೊದಲು ವಾಹನಕ್ಕೆ ಬೆಂಕಿ ಹಚ್ಚಲು ಇಂದು ಬೆಳಗ್ಗೆ 11ಕ್ಕೆ ಚಳ್ಳಕೆರೆಯ ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಅಲ್ಲಿ ಯಾವುದೇ ವಾಹನ ಇಲ್ಲದಿದ್ದನ್ನು ಕಂಡು ಹತ್ತಿರದಲ್ಲೇ ಇರುವ ಮಿನಿ ವಿಧಾನಸೌಧಕ್ಕೆ ಬಂದಿದ್ದಾನೆ.‌ ಮುಂಭಾಗದಲ್ಲಿ ನಿಲ್ಲಿಸಿದ್ದ ಸರ್ಕಾರಿ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ‌ಬೆಳಗಾವಿ | ಸಾಲದ ಸುಳಿಗೆ ಸಿಲುಕಿ ನೇಕಾರ ಕೂಲಿ ಕಾರ್ಮಿಕ ಆತ್ಮಹತ್ಯೆ

ಬೆಂಕಿ ಹೆಚ್ಚುತ್ತಿದ್ದಂತೆ ಎಚ್ಚರಗೊಂಡ ಸಿಬ್ಬಂದಿ ಮತ್ತು ಸಾರ್ವಜನಿಕರು ಬೆಂಕಿ ನಂದಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲವೆಂದು ತಿಳಿದುಬಂದಿದೆ. ವಾಹನಕ್ಕೂ ಕೂಡ ಹೆಚ್ಚಿನ ಹಾನಿ ಉಂಟಾಗಿಲ್ಲವೆಂದು ತಿಳಿದುಬಂದಿದೆ. ತಹಶೀಲ್ದಾರ್ ರೆಹಮಾನ್ ಪಾಷ ನೀಡಿದ ದೂರಿನಂತೆ ಪೊಲೀಸರು ಯುವಕನನ್ನು ಬಂಧಿಸಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...