ಚಿತ್ರದುರ್ಗ | ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

Date:

ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಉತ್ತಮ ಮಳೆಯಿಂದ ವಾಣಿವಿಲಾಸ ಜಲಾಶಯ 89 ವರ್ಷಗಳ ನಂತರ ಎರಡನೇ ಬಾರಿಗೆ ಭರ್ತಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಏಕೈಕ ಸಹಕಾರ ಕ್ಷೇತ್ರದ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್‌ ಆರಂಭಿಸುವ ಬದ್ಧತೆಯನ್ನು ಸರ್ಕಾರ ತೋರಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಎಸ್ ಸಿ ಕುಮಾರ್ ಒತ್ತಾಯಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಸೋಮವಾರ ಎಐಟಿಯುಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. “ವಾಣಿವಿಲಾಸ ಸಕ್ಕರೆ ಕಾರ್ಖಾನೆಯಿಂದ ನಾಲ್ಕು ನೂರಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳಿಗೆ ನೇರವಾಗಿ ಕೆಲಸ ದೊರೆತಿತ್ತು. ರೈತರೂ ಸೇರಿದಂತೆ ಸಾವಿರಾರು ಜನರಿಗೆ ಪರೋಕ್ಷವಾಗಿ ಅನುಕೂಲವಾಗಿತ್ತು. ಹಾಗಾಗಿ ಸರ್ಕಾರ ತಕ್ಷಣ ತಜ್ಞರ ಸಭೆ ಕರೆದು ಸಕ್ಕರೆ ಕಾರ್ಖಾನೆಯನ್ನು ಮತ್ತೆ ಆರಂಭಿಸಬೇಕು” ಎಂದು ಒತ್ತಾಯಿಸಿದರು.

“ಆಮೆಗತಿಯಲ್ಲಿ ನಡೆಯುತ್ತಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಕಾಲಮಿತಿಯ ಒಳಗೆ ಪೂರೈಸಿ ರೈತರಿಗೆ ನೆರವಾಗಬೇಕು. ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗ, ಚಿತ್ರದುರ್ಗ ನಗರದಲ್ಲಿ ರೈಲು ನಿಲ್ದಾಣದ ಸಮೀಪ ಮೇಲ್ಸೇತುವೆ ನಿರ್ಮಿಸಬೇಕು” ಎಂದು ಅವರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಕೃಷ್ಣರಾಜ ಮತ ಕ್ಷೇತ್ರದಲ್ಲಿ ನೀರಿನ ಸಮಸ್ಯೆ; ನೀರು ಸರಬರಾಜು ಕೇಂದ್ರಕ್ಕೆ ಶಾಸಕ ಭೇಟಿ

“ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ರದ್ದುಪಡಿಸಬೇಕು. ರಾಜ್ಯದಲ್ಲಿ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆ, ಆಶಾಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಅವರಿಗೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು” ಎಂದು ಕುಮಾರ್ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ನಿರ್ಮಲಾ, ರಂಗಸ್ವಾಮಿ, ನಾಗರಾಜ್, ಪಿ ಎಂ ಮಂಜುಳ, ಸೀಬಾ, ಇಂದಿರಾ ಈ.ಕೆಂಚಮ್ಮ, ಲಲಿತಮ್ಮ, ಚಿಂತಾಮಣಿ, ಕೆ.ಕೆಂಚಮ್ಮ, ರವಿಕುಮಾರ್, ರಾಮಯ್ಯ, ಮಂಜುಳಾ ಸೇರಿದಂತೆ ಕಾರ್ಮಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...