ಚಿತ್ರದುರ್ಗ | ಅಕ್ರಮವಾಗಿ ವಾಸ: ಗಾರ್ಮೆಂಟ್ಸ್ ಕೆಲಸದಲ್ಲಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

Date:

ಉಡುಪು ತಯಾರಿಕಾ ಕೈಗಾರಿಕಾ ಘಟಕದಲ್ಲಿ (ಗಾರ್ಮೆಂಟ್ಸ್) ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ಗಾರ್ಮೆಂಟ್ಸ್ ಗಳ ಮೇಲೆ ದಾಳಿ ನಡೆದಿದ್ದು, ಬಾಂಗ್ಲಾ ಪ್ರಜೆಗಳನ್ನ ವಶಕ್ಕೆ ಪಡೆಯಲಾಗಿದೆ‌.

ಆರು ಜನ ನುಸುಳುಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇವರಲ್ಲಿ ಶೇಕ್ ಶೈಪುರ್ ರೆಹಮಾನ್ ಹಾಗೂ ಸುಮನ್ ಹುಸೇನ್ ಎಂಬುವವರು ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ನುಸುಳಿರುವ ಮಾಹಿತಿ ಖಚಿತವಾಗಿರುವ ಮಾಹಿತಿ ಇದೆ. ಬಹುತೇಕರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಿತ್ರದುರ್ಗ 14

ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಸಿಪಿಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕೋಟೆ ಪೊಲೀಸ್ ಠಾಣೆ, ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

ಕರ್ನಾಟಕದ ಪೊಲೀಸರು ಕಳೆದ ಹಲವು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ನಾಡಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶ ಪ್ರಜೆಗಳನ್ನು ಇದೇ ವರ್ಷ ಎಪ್ರಿಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇವರ ಬಳಿ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಪತ್ತೆಯಾಗಿದ್ದವು.

ಇದನ್ನು ಓದಿದ್ದಿರಾ? ದಾವಣಗೆರೆ | ವಿವಿಧ ಬೇಡಿಕೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಎಐಕೆಕೆಎಂಎಸ್ ಪ್ರತಿಭಟನೆ

ಶಿವಮೊಗ್ಗದ ಜಯನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಏಳು ಮಂದಿ ಬಾಂಗ್ಲಾದೇಶಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಏಳು ಜನರ ಬಳಿ ಮಂಗಳೂರು ವಿಳಾಸದ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಅಲ್ಲದೇ, ಉಡುಪಿಯಲ್ಲೂ ಮೀನಿನ ಬಂದರು ದಕ್ಕೆಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಕೆಲವು ಮಂದಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...