ಚಿತ್ರದುರ್ಗ | ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಕೆ; ಸಾವಿತ್ರಿ ಬಾಫುಲೆ ಮಹಿಳಾ ಸಂಘ ಖಂಡನೆ

Date:

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಮಹಿಳಾ ಮುಖಂಡರು, “1980ರಲ್ಲಿ ವಿಶೇಷ ಘಟಕ ಯೋಜನೆ(ಎಸ್‌ಸಿಪಿ), ಬುಡಕಟ್ಟ ಉಪ ಯೋಜನೆ(ಟಿಎಸ್‌ಪಿ) ಜಾರಿಗೋಳಿಸಿದ್ದು, ಪರಿಶಿಷ್ಟ ಜಾತಿ/ಪಂಗಡದವರು ಸಾಮಾನ್ಯ ಜಾತಿಯವರಂತೆ ನಿಗಧಿತ ಸಮಯದೊಳಗೆ ಅಭಿವೃದ್ಧಿ ಆಗಬೇಕೆಂದು ರೂಪಿಸಿದ ಯೋಜನೆಯಾಗಿದೆ. ಈ ಯೋಜನೆ ಜಾರಿಯಾಗಿ ಸುಮಾರು 44 ವರ್ಷ ಕಳೆದರೂ ಪರಿಶಿಷ್ಟ ಜಾತಿ/ಪಂಗಡಗಳು ಸಾಮಾನ್ಯ ಜಾತಿಯವರಂತೆ ಯಾವುದೇ ವಿಷಯದಲ್ಲಿ ಅಭಿವೃದ್ಧಿಯಾಗಿಲ್ಲ. ಆದರೆ ಪ್ರತಿ ವರ್ಷ ಹಣ ಮಾತ್ರ ದುರ್ಬಳಕೆಯಾಗುತ್ತಿದೆ. ಇದನ್ನು ಸಂಪೂರ್ಣವಾಗಿ ಇದೇ ಯೋಜನೆಗಳಿಗೆ ಬಳಸಬೇಕು” ಎಂದು ಆಗ್ರಹಿಸಿದರು.

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ ಸಂಘಟನೆಯ ನಾಯಕಿ ರೇಣುಕಾ ಮಾತನಾಡಿ, “ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಬಳಸುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಬಳಸಬೇಡಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಶಿಷ್ಟ ಜಾತಿ/ಪಂಗಡದವರ ಅಭಿವೃದ್ಧಿಗೆ ಮಾರಕವಾಗುತ್ತಿರುವ 2013ರ ಕಾಯಿದೆಯ 7ಬಿ ಮತ್ತು 7ಸಿ ರದ್ದುಪಡಿಸಿ, ಕಾಯಿದೆಯಲ್ಲಿ ಆಡಳಿತಾತ್ಮಕ ವೆಚ್ಚಗಳನ್ನು ಹೊರತುಪಡಿಸಿ ಎಂದು ತಿಳಿಸಿದರೂ, ಮೀಸಲಿರುವ ಹಣದಲ್ಲಿ ಆಡಳಿತಾತ್ಮಕ ವೆಚ್ಚಗಳನ್ನು ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೊಮ್ಮನಕಟ್ಟೆ ವಾರ್ಡ್‌ಗೆ ಆಧುನಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಿಕೊಡಲು ಮನವಿ

ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ಕಾರ್ಯದರ್ಶಿ ಡಿ ಸುಧಾ, ಪದಾಧಿಕಾರಿಗಳಾದ ಪಿ. ಉಮಾ, ಭಾಗ್ಯಮ್ಮ, ಅನ್ನಪೂರ್ಣ, ರುದ್ರಮ್ಮ, ಕವನ, ಮಂಜುಳಾ, ಶಂಶಿದಾಬಾನು, ಜ್ಯೋತಿ, ರಜಿಯಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...