ಚಿತ್ರದುರ್ಗ | ವಾಣಿವಿಲಾಸ ಸಾಗರ ನೀರಗಂಟಿ ನೌಕರರ ವೇತನ ಬಿಡುಗಡೆಗೆ ಒತ್ತಾಯ

Date:

ವಾಣಿವಿಲಾಸ ಸಾಗರ ನೀರಗಂಟಿ ನೌಕರರಿಗೆ (ವಾಟರ್‌ ಮ್ಯಾನ್) ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿವಿ ಸಾಗರ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

“ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರದಿಂದ ಹಗಲು ರಾತ್ರಿ ಎನ್ನದೆ ಸಾರ್ವಜನಿಕರಿಗೆ ನೀರು ಪೂರೈಕೆ ಮಾಡುವ ನೀರಗಂಟಿಗಳಿಗೆ ಕಳೆದ 4 ತಿಂಗಳಿನಿಂದ ಸಂಬಳ ಕೊಡದೆ ಎಲ್‌ಒಸಿ ಬಂದಿಲ್ಲವೆಂದು ಕುಂಟುನೆಪ ಹೇಳುತ್ತಾ ಸತಾಯಿಸುತ್ತಿದ್ದಾರೆ” ಎಂದು ಕಸವನಹಳ್ಳಿ ರಮೇಶ್ ಆರೋಪಿಸಿದರು.

“ನೀರಗಂಟಿಗಳಿಗೆ ನಾಲ್ಕು ತಿಂಗಳ ಹಿಂದಿನಿಂದಲೂ ಸಂಬಳ ಇಲ್ಲದೆ ಮಕ್ಕಳ ಶಾಲಾ-ಕಾಲೇಜು ಶೈಕ್ಷಣಿಕ ವೆಚ್ಚ, ಅನಾರೋಗ್ಯ ಸಮಸ್ಯೆಗಳಿಗೆ ದೈನಂದಿನ ಖರ್ಚು, ಕುಟುಂಬ ನಿರ್ವಹಣೆ ಸೇರಿದಂತೆ ಇತರೆ ಖರ್ಚುಗಳಿಗೆ ತುಂಬಾ ತೊಂದರೆ ಆಗಿದೆ. ಆದ್ದರಿಂದ ತುರ್ತಾಗಿ ವೇತನ ಬಿಡುಗಡೆ ಮಾಡಬೇಕು” ಎಂದು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವಿವಿ ಸಾಗರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನವ ಸಂಪನ್ಮೂಲ ಹೊರಗುತ್ತಿಗೆ ಸಂಸ್ಥೆಯ ಮುಖ್ಯಸ್ಥ ಜೆ ಬಿ ರಾಜು ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ “ಎರಡು ತಿಂಗಳ ಸಂಬಳವನ್ನು ಸೋಮವಾರ ನೀರಗಂಟಿ ನೌಕರರ ಖಾತೆಗೆ ಜಮಾ ಮಾಡುತ್ತೇನೆ” ಎಂದು ಭರವಸೆ ನೀಡಿದರು.

“ಸರ್ಕಾರದಿಂದ ಈವರೆಗೆ ಅವರ ಸಂಬಳ, ಪಿಎಫ್ ಮತ್ತು ಇಎಸ್ಐ ಅನುದಾನ ಬಂದಿಲ್ಲ. ಆದರೂ ತನ್ನ ಕಡೆಯಿಂದ ಪ್ರತಿ ತಿಂಗಳು ಪಿಎಫ್ ಮತ್ತು ಇಎಸ್ಐ ಅನುದಾನವನ್ನು ಜಮಾ ಮಾಡುತ್ತಿದ್ದೇನೆ. ಆದ್ದರಿಂದ ಕೇವಲ ಎರಡು ತಿಂಗಳ ಸಂಬಳವನ್ನು ಬಿಡುಗಡೆ ಮಾಡುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

ಭದ್ರಾ ಮೇಲ್ದಂಡೆ ಎ ಇ ಇ ವಿಜಯ್ ಕುಮಾರ್ ಅವರ ಸಮ್ಮಖದಲ್ಲಿ ಮುಖ್ಯ ಎಂಜಿನಿಯರ್ ಶಿವಪ್ರಕಾಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತಾಡಿ ತುರ್ತಾಗಿ ಸಂಬಳ ಹಾಕಲು ಒತ್ತಾಯಿಸಲಾಯಿತು.

ನೀರುಗಂಟಿ ನೌಕರರ ಮುಖಂಡ ದ್ಯಾಮಣ್ಣ, ರವಿ, ಐನಳ್ಳಿ ಇಬ್ರಾಹಿಂ, ಬಿದರಿಕೆರೆ ರಮೇಶ್, ರಾಜಣ್ಣ ಸೇರಿದಂತೆ ಜೂನಿಯರ್ ಎಂಜಿನಿಯರ್ ನಿಜ್ಜೇಗೌಡ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...