ಚಿತ್ರದುರ್ಗ | ಗ್ರಾಮಗಳಿಗಿಲ್ಲ ಸರಿಯಾದ ಬಸ್‌ ವ್ಯವಸ್ಥೆ; ಹೆದ್ದಾರಿಯಲ್ಲಿ ಬಸ್‌ಗಾಗಿ ಕಾಯುವ ವಿದ್ಯಾರ್ಥಿಗಳು

Date:

ಚಿತ್ರದುರ್ಗ ಜಿಲ್ಲೆಯ ಅದೆಷ್ಟೋ ಹಳ್ಳಿಗಳ ವಿದ್ಯಾರ್ಥಿಗಳು ಸರಿಯಾದ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಪ್ರತೀ ನಿತ್ಯ ಪರದಾಡುವ ಸ್ಥಿತಿ ಇದೆ.

ಸಮಯಕ್ಕೆ ಸರಿಯಾಗಿ ಬಸ್‌ ಸಿಗದೆ, ವಿದ್ಯಾರ್ಥಿಗಳು ವಾರದಲ್ಲಿ ಎರಡು-ಮೂರು ದಿನ ಮೊದಲ ತರಗತಿ ತಪ್ಪಿಸಿಕೊಳ್ಳುವುದು ಸಾಮಾನ್ಯವಾಗಿದೆ. ಹೆದ್ದಾರಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ನಿಲ್ಲುವ ಸ್ಥಿತಿ ಈ ಮಕ್ಕಳದ್ದು. ಮಳೆಗಾಲದಲ್ಲಿ ಈ ಸಂಕಷ್ಟ ಇನ್ನೂ ಹೆಚ್ಚುತ್ತದೆ.

ಗ್ರಾಮೀಣ ಭಾಗಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ನಗರದ ಶಾಲಾ-ಕಾಲೇಜುಗಳಿಗೆ ಬರುತ್ತಾರೆ. ಗ್ರಾಮೀಣ ಸಾರಿಗೆ ಬಸ್‌ಗಳು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್‌ ರಸ್ತೆಯಲ್ಲಿ ಸಾಗಬೇಕು. ಆದರೆ, ಚಿತ್ರದುರ್ಗ-ದಾವಣಗೆರೆ, ಚಿತ್ರದುರ್ಗ- ಹಿರಿಯೂರು, ಹಿರಿಯೂರು-ಚಳ್ಳಕೆರೆ, ಚಳ್ಳಕೆರೆ-ಮೊಳಕಾಲ್ಮೂರು ಭಾಗದಲ್ಲಿ ಸಂಚರಿಸುವ ಬಹುತೇಕ ಬಸ್‌ಗಳು ಹೆದ್ದಾರಿಯಲ್ಲೇ ಸಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಾಪುರ-ಗೊಲ್ಲರಹಟ್ಟಿ, ಹಿರೇಕಬ್ಬಿಗೆರೆ-ಗೊಲ್ಲರಹಟ್ಟಿ, ಕಬ್ಬಿಗೆರೆ, ಅಡವಿಗೊಲ್ಲರಹಳ್ಳಿ, ಜಾಲಿಕಟ್ಟೆ, ಈರಜ್ಜನಹಟ್ಟಿ, ಸಿರಿಗೆರೆ, ಸೊಲ್ಲಾಪುರ, ಹಿರಿಯೂರು, ಹುಳಿಯೂರು ಮಾರ್ಗದ ಗ್ರಾಮಗಳಲ್ಲಿ ಬೆಳಗ್ಗೆ 8ಕ್ಕೆ ಬಸ್‌ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ನಿತ್ಯ ಮುಂಜಾನೆ ಶಾಲೆ-ಕಾಲೇಜಿಗೆ ಬರಲು ಸೂಕ್ತ ಬಸ್ ಸೌಲಭ್ಯ ಇಲ್ಲ. ಬರುವ ಕೆಲ ಬಸ್‌ಗಳನ್ನೂ ನಿಲುಗಡೆ ಮಾಡುವುದಿಲ್ಲ. ಕೆಲವರು ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಸಿಗದಿದ್ದರೆ, ಖಾಸಗಿ ಬಸ್‌ಗೆ ಹೆಚ್ಚಿನ ಹಣ ತೆತ್ತು ಹೋಗಬೇಕು. ಹೆಚ್ಚಿನ ಹಣ ಪಾವತಿಸಲಾಗದೆ ಅನೇಕ ವಿದ್ಯಾರ್ಥಿಗಳು ಮನೆಗೆ ವಾಪಸ್ ಹೋಗುತ್ತಿದ್ದಾರೆ. ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಮುಂಜಾನೆ 6 ಗಂಟೆಯಿಂದಲೇ ಬಸ್‌ಗಾಗಿ ಕಾಯುತ್ತಿದ್ದಾರೆ.

ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಹಾಗೂ ಪಾವಗಡ ಘಟಕಗಳಿವೆ. ಹೊಳಲ್ಕೆರೆ, ಮೊಳಕಾಲ್ಮೂರು ಹಾಗೂ ಹಿರಿಯೂರು ಘಟಕಗಳು ಕಾರ್ಯರಂಭದ ಹಂತದಲ್ಲಿವೆ. ಆದಷ್ಟು ಬೇಗ ನಮ್ಮ ಊರುಗಳಿಗೆ ಸಮಪರ್ಕ ಬಸ್‌ ವ್ಯವಸ್ಥೆ ಕಲ್ಪಿಸಿ ಎಂದು ವಿದ್ಯಾರ್ಥಿಗಳು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...