ಜಾತಿ ದೌರ್ಜನ್ಯ | ಅಂತರ್ಜಾತಿ ವಿವಾಹವಾಗಿದ್ದ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

Date:

ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯನ್ನು ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿಗ್ರಸ್ತ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಎನ್ ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಆಂಧ್ರ ಪ್ರದೇಶದ ಮಣಿಕಂಠ ಪರಸ್ಪರ ಪ್ರೀತಿಸಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮಣಿಕಂಡ ರೆಡ್ಡಿ ಸಮುದಾಯ ಮತ್ತು ಸಾವಿತ್ರಮ್ಮ ಜೋಗಿ ಸಮುದಾಯಕ್ಕೆ ಸೇರಿದ್ದವರಾಗಿದ್ದು, ಇಬ್ಬರೂ ಬೆಂಗಳೂರಿನಲ್ಲಿ ನೆಲೆಸಿದ್ದರು. ದಂಪತಿಗೆ ಇತ್ತೀಚೆಗೆ ಮಗು ಜನಿಸಿತ್ತು. ಹೀಗಾಗಿ, ಸಾವಿತ್ರಮ್ಮ ಅವರ ತವರು ಮನೆಗೆ ದಂಪತಿಗಳು ತೆರಳಿದ್ದಾರೆ. ಈ ವೇಳೆ, ಸಾವಿತ್ರಮ್ಮ ಬಾಣಂತಿ ಎಂಬುದನ್ನೂ ಲೆಕ್ಕಿಸದೇ ಗ್ರಾಮಸ್ಥರು ಅವರಿಗೆ ಊರಿನಿಂದ ಬಹಿಷ್ಕಾರ ಹಾಕಿದ್ದಾರೆ.

ದಂಪತಿಗಳಿಬ್ಬರಿಗೂ ಹುಟ್ಟಿನಿಂದಲೇ ಶ್ರವಣ ಮತ್ತು ವಾಕ್‌ ದೋಷವಿದೆ ಎಂದು ಹೇಳಲಾಗಿದೆ. ಈ ಹಿಂದೆ, ಮದುವೆಯಾದ ಸಮಯದಲ್ಲಿಯೂ ದಂಪತಿಗಳು ಊರಿಗೆ ತೆರಳಿದ್ದರು. ಆ ವೇಳೆಯೂ ಇಬ್ಬರನ್ನು ಊರಿನಿಂದ ಹೊರಗಟ್ಟಿದ್ದ ಗ್ರಾಮಸ್ಥರು, ಯುವತಿಯ ಪಾಲಕರಿಗೆ 30,000 ರೂ. ದಂಡ ಹಾಕಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಸಾವಿತ್ರಮ್ಮ ಬಾಣಂತಿಯಾದ್ದರಿಂದ ಮತ್ತೆ ತವರಿಗೆ ತೆರಳಿದ್ದರು. ವಿಷಯ ತಿಳಿದ ಜೋಗಿ ಜನಾಂಗದ ಮುಖಂಡರು ಮತ್ತೆ ಆಕೆಯ ಪಾಲಕರನ್ನು ಕರೆಸಿ ಗಲಾಟೆ ಮಾಡಿದ್ದಾರೆ. ಸಾವಿತ್ರಮ್ಮ ದಂಪತಿಗಳನ್ನು ಊರಿನಿಂದ ಹೊರ ಕಳಿಸದಿದ್ದರೆ,ಪಾಲಕರಿಗೂ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಜಾತಿಗ್ರಸ್ತ ಗ್ರಾಮಸ್ಥರ ದಬ್ಬಾಳಿಕೆಯಿಂದ ನೊಂದ ಸಾವಿತ್ರಮ್ಮ ಮತ್ತು ಮಣಿಕಂಠ ಚಳ್ಳಕೆರೆ ಮೂಗ ಮತ್ತು ಕಿವುಡರ ಶಾಲೆ ತೆರಳಿ ಅಲ್ಲಿನ ಸಿಬ್ಬಂದಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಅಲ್ಲಿನ ಶಿಕ್ಷಕರು ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದಯ್ದಿದ್ದಾರೆ. ಬಳಿಕ, ಸ್ಥಳಕ್ಕೆ ತೆರಳಿದ ತಹಶೀಲ್ದಾರ್ ರಹಾನ್ ಪಾಷ ಅವರು ದಂಪತಿಗೆ ಧೈರ್ಯ ಹೇಳಿದ್ದಾರೆ. ಜಾತಿಗ್ರಸ್ತರ ಗ್ರಾಮದ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...