ಚಿತ್ರದುರ್ಗ | ಮಹಿಳೆಯರು, ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಎಐಎಂಎಸ್ಎಸ್ ಆಂದೋಲನ

Date:

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ 25 ನವೆಂಬರ್ 2025ರಿಂದ 25 ಮಾರ್ಚ್ 2026ರವರೆಗೆ ರಾಜ್ಯವ್ಯಾಪಿ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಭಾಗವಾಗಿ ಎಐಎಂಎಸ್ಎಸ್ (AIMSS) ಚಿತ್ರದುರ್ಗ ಜಿಲ್ಲಾ ಸಮಿತಿ ಇಂದು ಪತ್ರಿಕಾಗೋಷ್ಠಿ ನಡೆಸಿತು.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಎಸ್) ರಾಜ್ಯ ಜಂಟಿ ಕಾರ್ಯದರ್ಶಿ ಶ್ರೀಮತಿ ಕಲ್ಯಾಣಿ ಮಾತನಾಡಿ, “ಒಂದೆಡೆ ಮಹಿಳೆಯರು ವಿಜ್ಞಾನ, ಕ್ರೀಡೆ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವಾಗ, ಮತ್ತೊಂದೆಡೆ ಲಕ್ಷಾಂತರ ಮಹಿಳೆಯರು ಮತ್ತು ಮಕ್ಕಳು ಪ್ರತಿದಿನವೂ ಅತ್ಯಾಚಾರ, ದೌರ್ಜನ್ಯ, ಹಿಂಸೆಗೆ ಬಲಿಯಾಗುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

1003436564

“ಮಹಿಳೆಯರು–ಮಕ್ಕಳ ಮೇಲಿನ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಠಿಣ ಕಾನೂನು ಜಾರಿಯಲ್ಲಿ ಸರ್ಕಾರದ ವ್ಯವಸ್ಥೆಗಳ ನಿಷ್ಕ್ರಿಯತೆ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಹಾಗೂ ದೇಶದಾದ್ಯಂತ ನಡೆದ ಭೀಕರ ಪ್ರಕರಣಗಳು, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ದ(NCRB) ಅಂಕಿ–ಅಂಶಗಳ ವರದಿಯ ಪ್ರಕಾರ 2022ರಲ್ಲಿ 4.45 ಲಕ್ಷ ಮಹಿಳೆಯರ ಮೇಲಿನ ಅಪರಾಧಗಳು, 2019-2024ರ ಮೇ ವರೆಗೆ ಒಟ್ಟು 2.99 ಲಕ್ಷ ಮಕ್ಕಳ ಮೇಲಿನ ದೌರ್ಜನ್ಯ (POCSO) ಪ್ರಕರಣಗಳು ದಾಖಲಾಗಿವೆ. ಇನ್ನು ಕರ್ನಾಟಕದಲ್ಲಿ 2023-2025 ಜುಲೈ ವರೆಗಿನ ಅವಧಿಯಲ್ಲಿ 16,273 ಲೈಂಗಿಕ ದೌರ್ಜನ್ಯ, 5,456 ವರದಕ್ಷಿಣೆ ಕಿರುಕುಳ, 10,510 ಪೋಕ್ಸೋ, 417 ಬಾಲ್ಯ ವಿವಾಹಗಳ ಜೊತೆಗೆ ಇತರೆ ಸೇರಿದಂತೆ ಒಟ್ಟು 43,052 ಪ್ರಕರಣಗಳು ದಾಖಲಾಗಿವೆ. ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್ ಪ್ರಕಾರ 80,813 ಬಾಲ ಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ರಾಜ್ಯ ರಾಜಧಾನಿಯೇ ಬಾಲ ಗರ್ಭಿಣಿಯರ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಮಕ್ಕಳೇ ಈ ಸಮಾಜದ ಭವಿಷ್ಯವನ್ನು ರೂಪಿಸುವವರು. ದುರಂತವೆಂದರೆ ಅವರ ಭವಿಷ್ಯವೇ ನಾಶವಾಗುತ್ತಿದೆ. 2019-2021ರ ವರೆಗೆ ಕೇವಲ ಎರಡು ವರ್ಷಗಳಲ್ಲಿ 40 ಸಾವಿರ ಹೆಣ್ಣು ಮಕ್ಕಳು ಕಾಣೆಯಾಗಿದ್ದಾರೆ. ಇನ್ನು ದಾಖಲಾಗದ ಪ್ರಕರಣಗಳು ಎಷ್ಟೋ ಇವೆ” ಎಂದು ಆತಂಕ ವ್ಯಕ್ತಪಡಿಸಿದರು.

“ಬಾಲ ಗರ್ಭಿಣಿ, ಹೆಣ್ಣು ಭ್ರೂಣ ಹತ್ಯೆ, ಪೋಕ್ಸೋ ಪ್ರಕರಣಗಳ ಹೆಚ್ಚಳ ಸಮಾಜದ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ. ಮೊಬೈಲ್, ಚಲನಚಿತ್ರ, ಟಿವಿ, ಸಾಮಾಜಿಕ ಮಾಧ್ಯಮಗಳಲ್ಲಿನ ಅಶ್ಲೀಲತೆ, ಕ್ರೌರ್ಯ, ಹಿಂಸೆ , ದೌರ್ಜನ್ಯ, ಮದ್ಯ–ಮಾದಕ ವಸ್ತುಗಳು ಅಪರಾಧ ಪ್ರವೃತ್ತಿಗೆ ಕಾರಣವಾಗುತ್ತಿವೆ” ಎಂದು ಕಳವಳಪಟ್ಟರು.

1003436566

“ಈ ಹಿನ್ನೆಲೆಯಲ್ಲಿ AIMSS ಕರ್ನಾಟಕ ರಾಜ್ಯ ಸಮಿತಿ ಸಹಿ ಸಂಗ್ರಹಣೆ, ಪ್ರತಿಭಟನೆ, ಸಭೆ–ಸಮಾವೇಶ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಹಿಳೆಯರನ್ನು ಜಾಗೃತಗೊಳಿಸುವ ಕಾರ್ಯ ಕೈಗೊಂಡಿದೆ. ಇದರ ಭಾಗವಾಗಿ ಜನವರಿ 7, 2026ರಂದು ಬೆಂಗಳೂರಿನ ಗಾಂಧಿಭವನದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ವಿವಿಧ ಕ್ಷೇತ್ರಗಳ ಹಿರಿಯ ವಕೀಲರು, ಬರಹಗಾರರಾದ ಶ್ರೀಮತಿ ಹೇಮಲತಾ ಮಹಿಷಿ, ನಿಮ್ಹಾನ್ಸ್ ಮನಶಾಸ್ತ್ರ ವಿಭಾಗ ವೈದ್ಯೆ ಡಾ ಶ್ರೀದೇವಿ ಕುಮಾರ್, ವೈದ್ಯೆ ಡಾ.ಸುಧಾಕಾಮತ್,
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಸಬಿಹಾ ಭೂಮಿಗೌಡ, ಪ್ರಸಿದ್ಧ ರಂಗಕರ್ಮಿ ಪ್ರೊ. ರಾಮೇಶ್ವರಿ ವರ್ಮಾ ಹಾಗೂ ಗಣ್ಯರು ಭಾಗವಹಿಸಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಹಿಳೆಯರು ಸೇರಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆಆರ್ ಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ

“ಈ ನಿಟ್ಟಿನಲ್ಲಿ ಅತ್ಯಾಚಾರ, ದೌರ್ಜನ್ಯ ತಡೆಗಟ್ಟಲು ಮಹಿಳೆ–ಮಕ್ಕಳ ಭದ್ರತೆಗೆ ಕಟ್ಟುನಿಟ್ಟಿನ ಕ್ರಮ, ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗಳು, ಅಪರಾಧಿಗಳಿಗೆ ಕಠಿಣ ಶಿಕ್ಷೆ, ಅಶ್ಲೀಲತೆ–ಮಾದಕ ವಸ್ತುಗಳ ನಿಷೇಧ, ಶಿಕ್ಷಣ–ಆರೋಗ್ಯ ಖಾಸಗೀಕರಣ ನಿಲ್ಲಿಸುವುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಂಘಟನೆ ಮುಂದಿಡುತ್ತದೆ” ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕಿ ಸುಜಾತ ಡಿ, ಸಹಸಂಚಾಲಕಿ ಕುಮುದ, ಬಿಂದು, ಜ್ಯೋತಿ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...