ಚಿತ್ರದುರ್ಗ | ಡೆಂಗ್ಯೂ ರೋಗ ತಡೆಗೆ ಜಾಗೃತಿ ಜಾಥಾ

Date:

ಪರಿಸರ, ಡೆಂಗ್ಯೂ ರೋಗ ತಡೆ ಹಾಗೂ ಶುದ್ಧ ಕುಡಿಯುವ ನೀರಿನ ಕುರಿತು ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಪ್ರದೇಶದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ನಡೆಸಿದ್ದಾರೆ. ಸ್ವಚ್ಛತೆ ಮತ್ತು ನೈರ್ಮಲ್ಯ ಸಂಬಂಧಿತ ಕರಪತ್ರಗಳನ್ನು ಹಂಚಿ, ಗುಂಪು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಎನ್‌.ಎಸ್‌. ಮಂಜುನಾಥ್‌, “ಮನೆಗಳ ಸುತ್ತ-ಮುತ್ತ ನೀರು ನಿಲ್ಲದಂತೆ, ನೀರಿನಲ್ಲಿ ಲಾರ್ವ, ಹುಳಗಳು ಬೆಳೆಯದಂತೆ ಎಚ್ಚರವಹಿಸಬೇಕು. ಸ್ವಚ್ಛತೆ ಕಾಪಾಡುವುದರಿಂದ ಡೆಂಗ್ಯೂ ಜ್ವರದಿಂದ ಪಾರಾಗಬೇಕು. ಕೀಟ ಜನ್ಯ ರೋಗಗಳು ನಮ್ಮನ್ನು ಆಳುವ ಮುನ್ನ, ಸಾರ್ವಜನಿಕರು ಎಚ್ಚರವಹಿಸಿ ಜಾಗೃತರಾಬೇಕು. ಪರಿಸರ ಸ್ವಚ್ಛತೆ, ಘನ ತ್ಯಾಜ್ಯ ವಸ್ತುಗಳ ಸರಿಯಾದ ವಿಲೇವಾರಿ, ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು” ಎಂದರು.

ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ್ ರೆಡ್ಡಿ ಮಾತನಾಡಿ, “ಕಲುಷಿತ ನೀರು ಮತ್ತು ಆಹಾರದಿಂದ ಹರಡಬಹುದಾದ ಕರುಳು ಬೇನೆ, ಕಾಮಾಲೆ, ವಿಷಮಶೀತ ಜ್ವರ, ಇತ್ಯಾದಿಗಳು ನಮ್ಮನ್ನು ಬಾಧಿಸುವ ಮುನ್ನ ಮುನ್ನೆಚ್ಚರಿಕೆ ಕ್ರಮಗಳನ್ನು ನಾವು ಪಾಲಿಸಬೇಕು” ಎಂದರು. ಶುದ್ಧ ನೀರು ಆಹಾರ ಸೇವನೆ, ಸಾಬೂನು ಬಳಸಿ ಕೈತೊಳೆದುಕೊಳ್ಳುವುದು, ನೊಣಗಳಿಂದ ಆಹಾರ ಸಂರಕ್ಷಣೆ, ಕೈ ತೊಳೆಯೋ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಮೂಗಪ್ಪ ಮಾತನಾಡಿ, “ಸಮರ್ಪಕ ಘನತ್ಯಾಜ್ಯ ಸಮರ್ಪಕ ಘನತ್ಯಾಜ್ಯ ವಸ್ತುಗಳ ವಿಲೇವಾರಿ ನೀರು ಪೂರೈಕೆ ಸುರಕ್ಷಿತ ನೀರು ಶೇಖರಣೆ ಆರೋಗ್ಯಕರ ಪರಿಸರವನ್ನು ನಿರ್ಮಾಣ ಸಂಸ್ಥೆ ಮಾಡುವ ಜವಾಬ್ದಾರಿ ಎಲ್ಲರದ್ದಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಫಾರೂಕ್, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್ ರಂಗಾರೆಡ್ಡಿ, ಸುಪ್ರೀತಾ, ರೂಪಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಬಡಾವಣೆಯ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಡಾವಣೆಯ 300 ಮನೆಗಳ ಲಾರ್ವ ಸಮೀಕ್ಷೆ ಕೈಗೊಂಡು ಕಲುಷಿತಗೊಂಡಿರುವ ನೀರಿನ ಮೂಲಗಳನ್ನು ಪತ್ತೆ ಹಚ್ಚಿ, ಖಾಲಿ ನಿವೇಶನಗಳಲ್ಲಿ ಕಳೆ ಮತ್ತು ಸ್ವಚ್ಛತೆ ಇಲ್ಲದಿರುವ ಅಂಶವನ್ನು ನಗರಸಭೆಗೆ ಸರಿಪಡಿಸಲು ತಿಳಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...