ಚಿತ್ರದುರ್ಗ | ಗುರು ಪೌರ್ಣಿಮೆ ಅಂಗವಾಗಿ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳಿಂದ ಮಕ್ಕಳ ಪ್ರಥಮ ಅಕ್ಷರಾಭ್ಯಾಸ

Date:

ಎಸ್.ಜೆ.ಎಸ್ ಸಮೂಹ ವಿದ್ಯಾಸಂಸ್ಥೆ ಚಿತ್ರದುರ್ಗದಲ್ಲಿ ಗುರುಪೂರ್ಣಿಮಾ ನಿಮಿತ್ತ ಹಮ್ಮಿಕೊಂಡಿದ್ದ
ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮಕ್ಕಳ ಪ್ರಥಮ ಅಕ್ಷರಭ್ಯಾಸ ಮಾಡಿಸಿದರು. ಅಕ್ಷರಾಭ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಶ್ರೀಗಳು “ಅಕ್ಷರ ಎಂಬ ಶಬ್ಧಕ್ಕೆ ನಾಶವಿಲ್ಲದಿರುವುದು ಎಂದರ್ಥ. ಮೌಲಿಕವಾಗಿ ಇದು ನಾಶವಿಲ್ಲದ ಪರತತ್ವವನ್ನೇ ಹೇಳುತ್ತದೆ. ಅಭ್ಯಾಸವೆಂದರೆ ಆ ತತ್ವಕ್ಕೆ ತನ್ನನ್ನು ಅಭಿಮುಖವಾಗಿ ಇರಿಸಿಕೊಳ್ಳುವುದು” ಎಂದು ಅರ್ಥೈಸಿದರು.

1002303213
ಎಸ್ ಕೆ ಎಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

“ಚಿಕ್ಕಂದಿನಿಂದಲೇ ಅಸಾಮಾನ್ಯ ಬಾಲ ಪ್ರತಿಭೆಗಳನ್ನು ಗುರುತಿಸಬೇಕು. ಕೆಲವು ಮಕ್ಕಳ ಬುದ್ದಿಮತ್ತೆ ವಿಶೇಷವಾಗಿರುತ್ತದೆ. ವಯಸ್ಸಿಗೂ ಮೀರಿದ ಜ್ಞಾನ, ಬುದ್ದಿವಂತಿಕೆಯಿಂದ ಅವರು ಜಗತ್ತಿನ ಗಮನ ಸೆಳೆಯುತ್ತಾರೆ. ವಿಶೇಷವಾದುದನ್ನು ಸಾಧಿಸುತ್ತಾರೆ” ಎಂದು ಭೋವಿ ಗುರುಪೀಠದ ಶ್ರೀಗಳು ಅಭಿಪ್ರಾಯಪಟ್ಟರು.

1002303214

“ಮಕ್ಕಳಲ್ಲಿ ಶಿಕ್ಷಣದ ಬಗೆಗೆ ಪ್ರೀತಿ ಹುಟ್ಟಿಸುವ ಕಲಿಕೆಯು ಬದುಕಿನ ಮೊದಲ ಆದ್ಯತೆಯಾಗಬೇಕಾದ ಬಗ್ಗೆ ಅರಿವು ಮೂಡಿಸುವ ಬಾಲಜಾಗೃತಿ ಹೆಚ್ಚಾಗಬೇಕು. ಪ್ರತಿ ಮಗುವಿಗೆ ಅನ್ನ, ಆರೋಗ್ಯದೊಂದಿಗೆ ಅಕ್ಷರ ಅತಿ ಅವಶ್ಯಕ. ಬದುಕಿನ ಜಂಜಾಟದಲ್ಲಿ ಏನೇ ಸಮಸ್ಯೆಗಳು ಎದುರಾದರೂ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದಿಂದ ವಂಚಿತರನ್ನಾಗಿಸಬಾರದು. ಉತ್ತಮ ಶಿಕ್ಷಣದ ಮೂಲಕ ತಮ್ಮ ಮಕ್ಕಳನ್ನು ಸಮಾಜದ ಉನ್ನತ ಶ್ರೇಣಿಯಲ್ಲಿ ಅಲಂಕರಿಸುವಂತೆ ಜೀವನೋತ್ಸಾಹ ತುಂಬಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002303211

“ಮಕ್ಕಳು ಅನುಕರಣೆಯನ್ನು ಹೆಚ್ಚು ಮಾಡುವುದರಿಂದ ಮಕ್ಕಳು ಮನೆಯಲ್ಲಿದ್ದಾಗ ಟಿವಿ ಮತ್ತು ಮೊಬೈಲ್ ಗಳಿಂದ ಪೋಷಕರು ಸ್ವತಃ ದೂರವಿರಬೇಕು. ಮಕ್ಕಳೊಂದಿಗೆ ಧ್ಯಾನ, ಅಧ್ಯಯನ ಮಾಡುವ ರೂಢಿಯನ್ನು ಬೆಳೆಸಿಕೊಳ್ಳಬೇಕು. ಮನೆಯೇ ಮೊದಲ ಪಾಠಶಾಲೆ, ತಂದೆ-ತಾಯಿಗಳೇ ಮೊದಲ ಗುರುಗಳಾಗಿರುವುದರಿಂದ ತಂದೆ ತಾಯಿಗಳ ಮೂಲಕ ಉಜ್ವಲ ಬೆಳಕನ್ನು ಮಕ್ಕಳು ಕಾಣಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರೀಕರ ಆಗ್ರಹ

ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ಸಿಬ್ಬಂದಿ, ಶಿಕ್ಷಕೇತರ ಸಿಬ್ಬಂದಿ, ಮಕ್ಕಳು ಹಾಗೂ ಪೋಷಕ ವರ್ಗದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...