ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ

Date:

ಅಂಗನವಾಡಿ ಕಾರ್ಯಕರ್ತೆಯರ ಸಂಘಟಿಸಿದ ಮುಂದಾಳು, ಸಿಐಟಿಯು ಸಂಘಟನೆ ನಾಯಕಿ ಎಸ್‌.ವರಲಕ್ಷ್ಮಿಯವರನ್ನು ಪ್ರತಿಷ್ಠಿತ ರೈತ ನಾಯಕ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರು ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿಸೆಂಬರ್ ತಿಂಗಳಲ್ಲಿ ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನದ ಮುಖಂಡರು ತಿಳಿಸಿದ್ದಾರೆ.

“ಕಳೆದ ವರ್ಷ ಅಗಲಿದ ಚಿತ್ರದುರ್ಗ ಜಿಲ್ಲೆಯವರಾದ ಹಿರಿಯ ರೈತ ಹೋರಾಟಗಾರ ಟಿ.ನುಲೇನೂರು ಶಂಕರಪ್ಪ ಅವರ ಹೆಸರಿನಲ್ಲಿ ಪ್ರತಿಷ್ಠಾನ ರಚಿಸಲಾಗಿದ್ದು   ಸಾಮಾಜಿಕ, ರೈತ, ಕಾರ್ಮಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರಿಗೆ ರಾಜ್ಯಮಟ್ಟದಲ್ಲಿ ಪ್ರತಿ ವರ್ಷ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಥಮ ವರ್ಷದಲ್ಲಿ ಮಹಿಳಾ ಹೋರಾಟಗಾರ್ತಿಗೆ  ಪ್ರಶಸ್ತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ” ಎಂದು ಪ್ರತಿಷ್ಠಾನದ ಪರವಾಗಿ ಡಾ.ರವಿಶಂಕರ್ ನುಲೇನೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

1003111279

ಎಸ್ ವರಲಕ್ಷ್ಮಿ ಅವರು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ವೀರಕಪುತ್ರ ಗ್ರಾಮದವರು. ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಮಡಿಕೆ ತಯಾರಿಕೆ ಅವರ ಕುಟುಂಬದ ಕುಲಕಸುಬು. ಒಂದು ಹೊತ್ತಿನ ಊಟಕ್ಕೂ ಇಡೀ ಕುಟುಂಬ ದುಡಿಯಬೇಕಾಗಿದ್ದ ಸ್ಥಿತಿಯ ಕಾರಣ ಪದವಿ ವಿದ್ಯಾಭ್ಯಾಸ ಗಗನಕುಸುಮವಾಗಿತ್ತು. ಚೆನ್ನಾಗಿ ಓದಿ ಅಪ್ಪ-ಅಮ್ಮನ ಕಷ್ಟ ನಿವಾರಿಸಬೇಕೆಂದುಕೊಂಡಿದ್ದ  ವರಲಕ್ಷ್ಮಿ ಅವರ ಕನಸು ನನಸಾಗಲಿಲ್ಲ. ಆದರೆ, ಬಡತನವನ್ನು ಮೀರಬೇಕೆಂಬ ಮಹತ್ವಾಕಾಂಕ್ಷೆ, ಛಲ ಅವರನ್ನು ದಿಟ್ಟ ಹೋರಾಟಗಾರ್ತಿಯಾಗಿ ರೂಪಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ರಂಗಾಯಣದ ಕಲಾವಿದರಿಂದ ‘ಅಮೀರಬಾಯಿ ಕರ್ನಾಟಕಿ’ ಕೃತಿ ಪ್ರೇರಿತ ‘ಪ್ರತಿಗಂಧರ್ವ’ ನಾಟಕ

ಬರಗಾಲದ ಕಾರಣ ವರಲಕ್ಷ್ಮಿ ಅವರ ಕುಟುಂಬವು ತಾಯಿಯವರ ತವರುಮನೆ ಬೆಂಗಳೂರಿನ ಕುಂಬಳುಗೋಡಿಗೆ ಬಂದು ನೆಲೆಸಿತು. ಹಣದ ತೊಂದರೆ ಇದ್ದ ಕಾರಣ ವರಲಕ್ಷ್ಮಿ ಅವರು ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಅಲ್ಲಿಂದ ಯೂನಿಯನ್‌ ಸಂಪರ್ಕಕ್ಕೆ ಬಂದರು.  ನಾನಾ ಹೋರಾಟಗಳಲ್ಲಿ ಭಾಗಿಯಾದ ಅವರು ಜೈಲುವಾಸವನ್ನೂ ಅನುಭವಿಸಿದರು. ಕೆಲಸ ಬಿಟ್ಟು ಪೂರ್ಣಾವಧಿಗೆ ಚಳವಳಿಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದರು. ಅಂಗನವಾಡಿ ಕಾರ್ಯಕರ್ತೆಯರನ್ನು ಸಂಘಟಿಸುವ ಜವಾಬ್ದಾರಿ ಹೊತ್ತರು. 40 ಸಾವಿರ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಗೌರವಧನ ಹೆಚ್ಚಳಕ್ಕೆ ಹೋರಾಡಿ ಯಶಸ್ಸು ಕಂಡಿದ್ದು ಮರೆಯಲಾಗದ ಸಾಧನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...