ಚಿತ್ರದುರ್ಗ | ಎಲ್ಲ ಸಮಸ್ಯೆಗಳಿಗೆ ಕೇಂದ್ರದ ಕಡೆ ಬೊಟ್ಟು‌ ಮಾಡುತ್ತಿದೆ ಕಾಂಗ್ರೆಸ್

Date:

ರಾಜ್ಯದಲ್ಲಿನ ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಕಡೆ ಬೊಟ್ಟು ತೋರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಲ್ಲೇನು ಕತ್ತೆ ಕಾಯುತ್ತಿದೆಯಾ? ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್ ಕಿಡಿಕಾರಿದ್ದಾರೆ.

ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲ ರಾಜ್ಯದೆಲ್ಲೇಡೆ ಭೀಕರವಾಗಿ ತಾಂಡವ ಆಡುತ್ತಿದೆ. ಇದರ ಬಗ್ಗೆ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವುದನ್ನು ಬಿಟ್ಟು ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರ ನಮಗೆ ಸ್ಪಂದಿಸುತ್ತಿಲ್ಲ, ಹಣ ನೀಡುತ್ತಿಲ್ಲ ಎಂದು ಆರೋಪಿಸುವ ಕೆಲಸ ಮಾಡುವುದಾದರೆ, 6.5ಕೋಟಿ ಜನರಿಂದ ಆಯ್ಕೆಯಾಗಿ ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವ ಕಾಂಗ್ರೇಸ್‌ನವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ರಾಜ್ಯದ 31ಜಿಲ್ಲೆಗಳಲ್ಲಿ ಭೀಕರ ಬರ ಪರಿಸ್ಥಿತಿ ಆವರಿಸಿದ್ದು, ಇದನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣ ಹಳಿ ತಪ್ಪಿರುವ ಕಾಂಗ್ರೆಸ್ ರೈತರ ಸಮಸ್ಯೆಗಳನ್ನು ಆಲಿಸದೆ ಅಧಿಕಾರಕ್ಕಾಗಿ ದಿನನಿತ್ಯ ಬಡಿದಾಟ ಮಾಡುತ್ತಿದೆ. ಸಚಿವರು ಕೇವಲ ಅಧಿಕಾರ ಹಂಚಿಕೆಯ, ಚಿಂತನೆಯಲ್ಲೇ ತೊಡಗಿದ್ದಾರೆ. ಇದರಿಂದ ಅವರನ್ನು ಬಡಿದೆಬ್ಬಿಸುವ ಕೆಲಸ ಮಾಡಲು ಭಾರತೀಯ ಜನತಾ ಪಕ್ಷ ಪ್ರತಿ 7ತಂಡಗಳನ್ನು ಮಾಡಿಕೊಂಡು, ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ ಅಲ್ಲಿನ ರೈತರು, ಕೂಲಿಕಾರ್ಮಿಕರ, ಜನ ಸಾಮಾನ್ಯರ ಕಷ್ಟಗಳನ್ನು ಆಲಿಸಿ ಅವುಗಳನ್ನು ಶೀಘ್ರವೇ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ಕೆಲವನ್ನು ಮಾಡಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮುಖಂಡ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ತಂಡ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು, ತಂಡದಲ್ಲಿ ಶಾಸಕ ಎಂ.ಚಂದ್ರಪ್ಪ, ಕೆ.ಎಸ್. ನವೀನ್, ಮಾಜಿ ಶಾಸಕರಾದ ಜಿ. ಎಚ್. ತಿಪ್ಪಾರೆಡ್ಡಿ, ಬಿ.ಪಿ. ಹರೀಶ್, ರಾಮಚಂದ್ರ ಸೇರಿದಂತೆ ಇತರರು ಇದ್ದು, ಇಂದು(ನ.06) ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಿಂದ ಪ್ರವಾಸ ಕೈಗೊಳ್ಳಲಿದ್ದೆವೆ.

ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಯಡಿಯೂರಪ್ಪ ನವರ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ ಬರ ಘೋಷಣೆ ಆಗುತ್ತಿದ್ದಂತೆಯೇ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿತ್ತು. ಆದರೆ, ಸಿದ್ದರಾಮಯ್ಯ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಎಲ್ಲವನ್ನು ಕೇಂದ್ರಕ್ಕೆ ಕೇಳಿ ಎಂದರೆ ರಾಜ್ಯದ ಜನ ಮತ ಹಾಕಿರುವುದು ಏಕೆ ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಸಂಪುಟದಲ್ಲಿ ಖಾತೆಗಳಿಗೆ ಸಂಬಂಧ ಪಡದ ವ್ಯಕ್ತಿಗಳನ್ನು ಸಚಿವರನ್ನು ಮಾಡಿದ್ದಾರೆ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಅವರ ಸಮಸ್ಯೆ ಏನು ಎಂಬುದೆ ಅರಿತಿಲ್ಲ. ಬೆಂಗಳೂರಲ್ಲಿ ಸಾವಿರಾರು ಕೋಟಿ ಹೊಂದಿರುವ ವ್ಯಕ್ತಿಯನ್ನು ಮಂತ್ರಿ ಮಾಡಿದ್ದಾರೆ ಅಂತಹ ಮಂತ್ರಿ ಆ ಸ್ಥಾನಕ್ಕೆ ಸೂಕ್ತ ಅಲ್ಲ ಎಂದು ಆರೋಪಿಸಿದರು.

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರದ ಕಡೆ ಕೈ ತೋರಿಸುವುದು ಎಷ್ಟು ಸರಿ. ಕೇಂದ್ರದ ಹಣ ಬಂದಾಗ ನೀಡಲಿದೆ. ಅದಕ್ಕೂ ಮೊದಲು ತಮ್ಮ ಪಾಲಿನ ಹಣವನ್ನು ನೀಡಲಿ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾದ್ಯಕ್ಷ ಮುರುಳಿ, ವೆಂಕಟೇಶ್ ಯಾದವ್, ನರೇಂದ್ರ, ದಗ್ಗೆ ಶಿವಪ್ರಕಾಶ್‌, ನಾಗರಾಜ್ ಬೇದ್ರೆ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...